ದುರಸ್ತಿಗೆ ಕಾದಿವೆ 1661 ಶಾಲಾ ಕೊಠಡಿಗಳು

18 ಶಾಲೆಗಳಿಗೆ ಇಲ್ಲ ಸ್ವಂತ ಕಟ್ಟಡ ಭಾಗ್ಯ | ನೂರಕ್ಕೂ ಹೆಚ್ಚು ಶಿಕ್ಷಕರು-ಮೂಲಸೌಲಭ್ಯಗಳ ಕೊರತೆ

Team Udayavani, Sep 13, 2021, 9:02 PM IST

htry5ry

ವರದಿ: ಶಶಿಧರ್‌ ಬುದ್ನಿ

ಧಾರವಾಡ: ಕೋವಿಡ್‌-19 ಹೊಡೆತದಿಂದ ವರ್ಷಪೂರ್ತಿ ಬಾಗಿಲು ಮುಚ್ಚಿದ್ದ ಶಾಲೆಗಳು ಇದೀಗ ಕೋವಿಡ್‌ ತಗ್ಗಿದ ಪರಿಣಾಮ ಮತ್ತೆ ಬಾಗಿಲು ತೆರೆದಿದ್ದು, ಶೈಕ್ಷಣಿಕ ಚಟುವಟಿಕೆ ಆರಂಭಗೊಂಡಿದೆ. ಆದರೆ ಸರಕಾರಿ ಶಾಲೆಗಳಲ್ಲಿ ಸುಸಜ್ಜಿತ ಸೂರಿನ ಜತೆಗೆ ಮೂಲಸೌಕರ್ಯಗಳ ಕೊರತೆ ಎದುರಾಗಿದೆ.

ಕೋವಿಡ್‌ ಅಬ್ಬರ ಕಡಿಮೆ ಆಗುತ್ತಲೇ ಸರಕಾರ ಎರಡು ಹಂತದಲ್ಲಿ ಶಾಲೆಗಳ ಪುನರ್‌ ಆರಂಭಕ್ಕೆ ಅವಕಾಶ ಮಾಡಿಕೊಟ್ಟಿದೆ. ಆದರೆ ಕಳೆದ ಎರಡು ವರ್ಷಗಳಲ್ಲಿ ಕೋವಿಡ್‌ ಹೊಡೆತಕ್ಕೆ ಖಾಸಗಿ ಶಾಲೆಗಳ ಕೆಲ ಮಕ್ಕಳೂ ಸರಕಾರಿ ಶಾಲೆಗಳತ್ತ ಮುಖ ಮಾಡಿದ್ದು, ಇದರ ಜತೆಗೆ ಸರಕಾರಿ ಶಾಲೆಗಳಲ್ಲಿನ ಮಕ್ಕಳ ದಾಖಲಾತಿ ಸಂಖ್ಯೆ ಏರಿಕೆ ಕಂಡಿದೆ. ಇದೀಗ ತರಗತಿಗಳಿಗೂ ವಿದ್ಯಾರ್ಥಿಗಳು ಹಾಜರಾಗುತ್ತಿದ್ದು, ಆದರೆ ಸರಕಾರಿ ಶಾಲೆಗಳಲ್ಲಿ ಸುಸಜ್ಜಿತ ಸೂರಿನ ಕೊರತೆ ಜತೆಗೆ ಮೂಲಸೌಕರ್ಯಗಳ ಕೊರತೆ ಎದ್ದು ಕಾಣುವಂತಾಗಿದೆ.

ಮೂಲಸೌಕರ್ಯಗಳಿಲ್ಲದ ಖಾಸಗಿ ಶಾಲೆಗಳ ಮಾನ್ಯತೆ ರದ್ದುಗೊಳಿಸಲು ಮುಂದಾಗುವ ಸಾರ್ವಜನಿಕ ಶಿಕ್ಷಣ ಇಲಾಖೆಯು ತನ್ನ ವ್ಯಾಪ್ತಿಯಲ್ಲೇ ಇರುವ ಸರಕಾರಿ ಶಾಲೆಗಳಿಗೆ ಪೂರ್ಣ ಪ್ರಮಾಣದಲ್ಲಿ ಮೂಲಸೌಕರ್ಯ ಒದಗಿಸಲು ಈವರೆಗೂ ಸಾಧ್ಯವಾಗಿಲ್ಲ ಎಂಬುದು ಕಟು ಸತ್ಯ.

ಜಿಲ್ಲೆಯಲ್ಲಿ ಒಟ್ಟು 1251 ಪ್ರಾಥಮಿಕ ಶಾಲೆಗಳು ಹಾಗೂ 442 ಪ್ರೌಢಶಾಲೆಗಳಿದ್ದು, ಈ ಪೈಕಿ 763 ಸರಕಾರಿ ಶಾಲೆಗಳಿದ್ದರೆ 108 ಸರಕಾರಿ ಪ್ರೌಢಶಾಲೆಗಳಿವೆ. ಇದರಲ್ಲಿ ಕೆಲವೊಂದಿಷ್ಟು ಶಾಲೆಗಳ ಕೊಠಡಿ ಶಿಥಿಲಾವಸ್ಥೆ ತಲುಪಿದ್ದರೆ ಇನ್ನೂ ಕೆಲವೊಂದಿಷ್ಟು ಶಾಲೆಗಳಿಗೆ ಈವರೆಗೂ ಸ್ವಂತ ಕಟ್ಟಡಗಳೇ ಇಲ್ಲ. 52 ಶಾಲೆಗಳಿಗೆ ಸ್ವಂತ ಕಟ್ಟಡ ಕೊರತೆಯಿದ್ದರೆ 532 ಶಾಲೆಗಳಲ್ಲಿ ಆಟದ ಮೈದಾನವೇ ಇಲ್ಲ. ಇದಲ್ಲದೇ ಬೋಧನಾ ಕಾರ್ಯಕ್ಕೆ ಬೇಕಿರುವ 110 ವಿಷಯ ಶಿಕ್ಷಕರ ಹುದ್ದೆಗಳು ಖಾಲಿಯಿದ್ದು, ಇದರಿಂದ ಮಕ್ಕಳ ಶೈಕ್ಷಣಿಕ ಪ್ರಗತಿಗೂ ಹೊಡೆತ ಬೀಳುವಂತಾಗಿದೆ.

ಸ್ವಂತ ಕಟ್ಟಡ ಕೊರತೆ: ಶಿಕ್ಷಣ ಇಲಾಖೆಯೇ ನೀಡಿರುವ ಅಂಕಿ-ಅಂಶಗಳ ಪ್ರಕಾರ ಜಿಲ್ಲೆಯ 763 ಸರಕಾರಿ ಶಾಲೆಗಳ ಪೈಕಿ 18 ಶಾಲೆಗಳಿಗೆ ಇಂದಿಗೂ ಸ್ವಂತ ಕಟ್ಟಡ ಇಲ್ಲದ ಕಾರಣ ಬಾಡಿಗೆ ರೂಪದಲ್ಲಿ ಶಾಲೆಗಳು ಕಾರ್ಯ ನಿರ್ವಹಣೆ ಮಾಡುತ್ತಿವೆ. ಇದಲ್ಲದೇ 13 ಶಾಲೆಗಳಿಗೂ ಸ್ವಂತ ಕಟ್ಟಡ ಇಲ್ಲದೇ ಬಾಡಿಗೆ ರಹಿತವಾಗಿ ಶಾಲೆಗಳು ನಡೆಯುತ್ತಾ ಸಾಗಿವೆ.

ಇನ್ನೂ ಜಿಲ್ಲೆಯಲ್ಲಿ ಇರುವ 108 ಸರಕಾರಿ ಪ್ರೌಢ ಶಾಲೆಗಳ ಪೈಕಿ 88 ಶಾಲೆಗಳಿಗೆ ಅಷ್ಟೇ ಸ್ವಂತ ಕಟ್ಟಡವಿದ್ದು, 21 ಶಾಲೆಗಳಿಗೆ ಈವರೆಗೂ ಸ್ವಂತ ಕಟ್ಟಡವೇ ಲಭ್ಯವಾಗಿಲ್ಲ. ಈ ಪೈಕಿ ಅವಳಿನಗರದಲ್ಲಿಯೇ ಜಾಗ ಕೊರತೆಯಿಂದಲೇ ಬಹುತೇಕ ಸರಕಾರಿ ಶಾಲೆಗಳಿಗೆ ಸ್ವಂತ ಕಟ್ಟಡವಿಲ್ಲ.

ಟಾಪ್ ನ್ಯೂಸ್

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-weewqeq

Gadag; ಮತದಾನದ ಮುನ್ನಾ ದಿನ ಬಸ್‌ಗಳು ಫುಲ್ ರಶ್: ಜನರ ಪರದಾಟ

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

1-qweewqe

Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-weewqeq

Gadag; ಮತದಾನದ ಮುನ್ನಾ ದಿನ ಬಸ್‌ಗಳು ಫುಲ್ ರಶ್: ಜನರ ಪರದಾಟ

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.