ಹೊಸ ಜೆರ್ಸಿಯೊಂದಿಗೆ ಯುಎಇ ಚರಣದ ಮೊದಲ ಪಂದ್ಯವಾಡಲಿದೆ ಆರ್ ಸಿಬಿ ತಂಡ
Team Udayavani, Sep 14, 2021, 10:50 AM IST
ದುಬೈ: ಬಹುನಿರೀಕ್ಷಿತ ಐಪಿಎಲ್ ಕೂಟದ ಯುಎಇ ಚರಣ ಸನ್ನಿಹಿತವಾಗಿದೆ. ಇನ್ನು ಕೆಲವೇ ದಿನಗಳಲ್ಲಿ ವರ್ಣರಂಜಿತ ಚುಟುಕು ಕ್ರಿಕೆಟ್ ಕೂಟ ಮತ್ತೆ ಆರಂಭವಾಗಲಿದೆ. ಈಗಾಗಲೇ ತಂಡಗಳು ಯುಎಇ ಗೆ ತೆರಳಿದ್ದು ತಾಲೀಮಿನಲ್ಲಿ ಭಾಗಿಯಾಗಿವೆ.
ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೆ.20ರಂದು ಪುನರಾರಂಭದ ತನ್ನ ಮೊದಲ ಪಂದ್ಯವಾಡಲಿದೆ. ಅಬುಧಾಬಿಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸೆಣಸಾಡಲಿದೆ. ಈ ಪಂದ್ಯದ ಮತ್ತೊಂದು ವಿಶೇಷವೆಂದರೆ ಆರ್ ಸಿಬಿ ಹೊಸ ಜರ್ಸಿಯೊಂದಿಗೆ ಆಡಲಿದೆ.
ಕೋವಿಡ್ ವೈರಸ್ ವಿರುದ್ಧ ಹೋರಾಡುತ್ತಿರುವ ಮುಂಚೂಣಿ ಯೋಧರಿಗೆ ಗೌರವ ಮತ್ತು ಬೆಂಬಲ ನೀಡುವ ಉದ್ದೇಶದಿಂದ ಆರ್ ಸಿಬಿ ತಂಡವು ತಿಳಿ ನೀಲಿ ಬಣ್ಣದ ಜೆರ್ಸಿಯೊಂದಿಗೆ ಕಣಕ್ಕಿಳಿಯಲಿದೆ.
ಐಪಿಎಲ್ 2021 ರ ಮೊದಲ ಹಂತದಲ್ಲಿ, ಆರ್ಸಿಬಿ ನಾಯಕ ವಿರಾಟ್ ಕೊಹ್ಲಿ ಕೋವಿಡ್ ಸಮಯದಲ್ಲಿ ಮುಂಚೂಣಿ ಕೆಲಸಗಾರರಿಗೆ ಫ್ರಾಂಚೈಸಿಯ ವತಿಯಿಂದ ತಮ್ಮ ಬೆಂಬಲ ಸೂಚಿಸಿದ್ದರು. ಕೋವಿಡ್ ಸಮಯದಲ್ಲಿ ಬೆಂಗಳೂರು ಮತ್ತು ದೇಶದ ಇತರ ನಗರಗಳಲ್ಲಿ ಆಮ್ಲಜನಕ ಬೆಂಬಲಕ್ಕೆ ಸಂಬಂಧಿಸಿದ ಆರೋಗ್ಯ ರಕ್ಷಣೆಯ ಮೂಲಸೌಕರ್ಯಕ್ಕೆ ಸಹಾಯ ಮಾಡಲು ತಮ್ಮ ಫ್ರ್ಯಾಂಚೈಸಿ ಆರ್ಥಿಕ ಕೊಡುಗೆ ನೀಡುವುದಾಗಿ ಕೊಹ್ಲಿ ಘೋಷಿಸಿದ್ದರು.
ಇದನ್ನೂ ಓದಿ:ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಬ್ರೆಂಡನ್ ಟೇಲರ್
ಆರ್ಸಿಬಿ ಫ್ರಾಂಚೈಸಿಯು ಗಿವ್ ಇಂಡಿಯಾ ಫೌಂಡೇಶನ್ನೊಂದಿಗೆ ಕೈಜೋಡಿಸಿ, ಬೆಂಗಳೂರು ಮತ್ತು ಇತರ ನಗರಗಳಲ್ಲಿ ಸುಮಾರು 100 ಯೂನಿಟ್ಗಳಷ್ಟು ಆಮ್ಲಜನಕ ಕಾನ್ಸನ್ಟ್ರೇಟರ್ ಗಳನ್ನು ಒದಗಿಸಿತ್ತು. ಆರ್ಸಿಬಿಯ ಮಾತೃ ಸಂಸ್ಥೆ ಡಿಯಾಜಿಯೊ ಇಂಡಿಯಾ 3 ಲಕ್ಷ ಲೀಟರ್ ಸ್ಯಾನಿಟೈಜರ್ಗಳನ್ನು ತಯಾರಿಸಿ ವಿತರಿಸಿದೆ.
ಕಳೆದ ಏಪ್ರಿಲ್ ನಲ್ಲಿ ಆರಂಭವಾಗಿದ್ದ 14ನೇ ಆವೃತ್ತಿಯ ಐಪಿಎಲ್ ಕೂಟ ಕೋವಿಡ್ ಕಾರಣದಿಂದ ಮುಂದೂಡಿಕೆಯಾಗಿತ್ತು. ಹೀಗಾಗಿ ಸೆ.19ರಂದು ದುಬೈನಲ್ಲಿ ಮತ್ತೆ ಕೂಟ ಆರಂಭವಾಗಲಿದೆ. ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ