ಅಕ್ಟೋಬರ್ 8ರಂದು ನಿಗದಿಯಾಗಿದ್ದ ಕೈಗಾರಿಕಾ ಅದಾಲತ್ ಅ.11ಕ್ಕೆ ಮುಂದೂಡಿಕೆ : ನಿರಾಣಿ
Team Udayavani, Sep 14, 2021, 2:02 PM IST
ಕಲಬುರಗಿ : ಅಕ್ಟೋಬರ್ 8 ಹಾಗೂ 9 ರಂದು ಕಲಬುರಗಿಯಲ್ಲಿ ನಡೆಸಲು ಉದ್ದೇಶಿಸಲಾಗಿದ್ದ ಕೈಗಾರಿಕಾ ಅದಾಲತ್ ಮುಂದೂಡಿ ಅಕ್ಟೋಬರ್ 11 ಹಾಗೂ 12 ರಂದು ನಗರದ ಇಎಸ್ಐ ಸಭಾಂಗಣದಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ತಿಳಿಸಿದರು.
ಹಬ್ಬ ಹಾಗೂ ಸಾರ್ವಜನಿಕ ರಜೆ ಇರುವ ಹಿನ್ನೆಲೆಯಲ್ಲಿ ಅದಾಲತ್ ಮುಂದೂಡಲಾಗಿದೆ. ಈಗಾಗಲೇ ಅದಾಲತ್ ಅಂಗವಾಗಿ ಉದ್ಯಮಿಗಳಿಂದ ಅರ್ಜಿ ಸ್ವೀಕರಿಸಲಾಗುತ್ತಿದೆ. ಬಹು ಮುಖ್ಯವಾಗಿ ಅದಾಲತ್ ನಲ್ಲಿ ಕೈಗಾರಿಕಾ ಉದ್ಯಮಕ್ಕೆ ಪೂರಕವಾದ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವರು ಉದಯವಾಣಿ ಯೊಂದಿಗೆ ಮಾತನಾಡಿ ವಿವರಿಸಿದರು.
ಉಳಿದಂತೆ ಇತರ ಭಾಗದಲ್ಲಿನ ಕೈಗಾರಿಕಾ ಅದಾಲತ್ ಈ ಮೊದಲಿನ ನಿಗದಿಯಂತೆ ನಡೆಯಲಿದ್ದು, ಬಹು ಮುಖ್ಯವಾಗಿ ಕಲಬುರಗಿ ವಿಷನ್ -2050 ಕಾರ್ಯಾನುಷ್ಠಾನ ನಿಟ್ಟಿನಲ್ಲಿ ವಿವಿಧ ಪ್ರಮುಖ ರೊಂದಿಗೆ ಸಭೆ ಸಹ ಇದೇ ಸಂದರ್ಭದಲ್ಲಿ ನಡೆಸಲಾಗುತ್ತಿದೆ.
ಇದನ್ನೂ ಓದಿ :NEET ಪರೀಕ್ಷೆ…ಮಗಳ ಭವಿಷ್ಯಕ್ಕಾಗಿ ತಂದೆಯ ಕೊನೆ ಪ್ರಯತ್ನ:ಮಧ್ಯರಾತ್ರಿ ನಡೆದ ಕೋರ್ಟ್ ವಿಚಾರಣೆ
ಉತ್ಸವಕ್ಕೆ ಸಿಎಂ: ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಪಾಲ್ಗೊಳ್ಳಲು ಹಾಗೂ ಧ್ವಜಾರೋಹಣ ನೆರವೇರಿಸಲು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಿಶೇಷ ವಿಮಾನ ಮೂಲಕ ಕಲಬುರಗಿಗೆ ಆಗಮಿಸಲಿದ್ದಾರೆ. ಉತ್ಸವದಲ್ಲಿ ಪಾಲ್ಗೊಂಡ ನಂತರ ಮತ್ತೆ ವಿಶೇಷ ವಿಮಾನ ಮೂಲಕ ಬೆಂಗಳೂರಿಗೆ ತೆರಳಿ ಅಧಿವೇಶನದಲ್ಲಿ ಪಾಲ್ಗೊಳ್ಳುವರು ಎಂದು ಸಚಿವ ಮುರುಗೇಶ ನಿರಾಣಿ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು