ಮೂರು ಘಟನೆ ಸೇರಿ ಒಂದು ಸಿನಿಮಾ: ಸೆಟ್ಟೇರಿತು ‘ತ್ರಿವೇದಂ’


Team Udayavani, Sep 14, 2021, 3:26 PM IST

ಮೂರು ಘಟನೆ ಸೇರಿ ಒಂದು ಸಿನಿಮಾ: ಸೆಟ್ಟೇರಿತು ‘ತ್ರಿವೇದಂ’

ಮೂರು ಕಡೆಗಳಲ್ಲಿ ನಡೆದ ನೈಜ ಘಟನೆಗಳನ್ನು ಒಟ್ಟು ಸೇರಿಸಿ ಹೊಸಬರ ತಂಡವೊಂದು ಸಿನಿಮಾ ಮಾಡಲು ಹೊರಟಿದೆ. ಆ ಚಿತ್ರದ ಹೆಸರು”ತ್ರಿವೇದಂ’.  ಈ ಚಿತ್ರಕ್ಕೆ ಸೋಮವಾರ ಕಂಠೀರವ ಸ್ಟುಡಿಯೋದಲ್ಲಿ ಮುಹೂರ್ತ ನಡೆಯಿತು.

2012ರಲ್ಲಿ ಬೆಂಗಳೂರಿನ ಕುರುಬರಹಳ್ಳಿ, ಆರು ವರ್ಷದ ಕೆಳಗೆ ಮಂಡ್ಯಾ ಮತ್ತು ಹನ್ನರೆಡು ವರ್ಷದ ಹಿಂದೆ ಮೈಸೂರಿನಲ್ಲಿ ನಡೆದ ಘಟನೆಯನ್ನಿಟ್ಟುಕೊಂಡು ಅದಕ್ಕೊಂದು ಕಥೆ ಮಾಡಿ ಈಗ ಸಿನಿಮಾ ಮಾಡಲು ತಂಡ ಮುಂದಾಗಿದೆ. ಅರುಣ್‌ ಜಯರಾಂ ಈ ಚಿತ್ರದ ನಿರ್ದೇಶಕರು. ಆರ್‌. ಕೆ. ಭವಾನಿ ಹೇಮಂತ್‌ ಈ ಚಿತ್ರದ ನಿರ್ಮಾಪಕರು.

ಚಿತ್ರದ ಬಗ್ಗೆ ಮಾತನಾಡುವ, ನಿರ್ದೇಶಕರು, “ಚಿತ್ರದಲ್ಲಿ ಮೂರು ಘಟನೆಗಳಿಗೆ ಒಂದಕ್ಕೊಂದು ಸಂಬಂಧವಿರುವುದಿಲ್ಲ. ಈ ಮೂರು ಘಟನೆಗಳು ಕೂಡಾ ಪ್ರೀತಿಗೆ ಸಂಬಂಧಿಸಿದ್ದೇ ಆಗಿವೆ ಎಂಬುದು ವಿಶೇಷ. ಅದೇ ಕಾರಣಕ್ಕೆ ಚಿತ್ರಕ್ಕೆ “ತ್ರಿವೇದಂ’ ಎಂದು ಹೆಸರಿಟ್ಟಿದ್ದೇವೆ’ ಎಂದರು.

ಚಿತ್ರದಲ್ಲಿ ಮೂವರು ನಾಯಕರು ಆಯ್ಕೆಯಾಗಿದ್ದು, ಮೂವರು ನಾಯಕಿಯರ ಆಯ್ಕೆ ಇನ್ನಷ್ಟೇ ಆಗಬೇಕಿದೆ. ಚಿತ್ರದಲ್ಲಿ ಪ್ರತಾಪ್‌ ನಾರಾಯಣ್‌ ಕೂಡಾ ಒಂದು ಕಥೆಯಲ್ಲಿ ನಾಯಕರಾಗಿ ನಟಿಸುತ್ತಿದ್ದು, ಅವರು ಕೊರಿಯರ್‌ ಬಾಯ್‌ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದಕ್ಕಾಗಿ ಕೊರಿಯರ್‌ದಲ್ಲಿ ಕೆಲಸ ಮಾಡುವ ಹುಡುಗರನ್ನು ಭೇಟಿ ಮಾಡಿ ಅವರುಗಳಿಂದ ಒಂದಷ್ಟು ಸಲಹೆಗಳನ್ನು ಪಡೆದುಕೊಂಡಿದ್ದಾರಂತೆ. “ಜೀವನದಲ್ಲಿ ಯಾವ ರೀತಿ ಪ್ರೀತಿಗೋಸ್ಕರ ಹೋರಾಡುತ್ತಾನೆ ಎಂಬ ಅಂಶ ಹೈಲೈಟ್‌. ಚಿತ್ರದಲ್ಲಿ ಮೂರು ಮೂರು ಫೈಟ್ಸ್‌ ಹಾಗೂ ಎರಡು ಹಾಡುಗಳು ನನಗಿವೆ’ ಎಂದರು.

ಇದನ್ನೂ ಓದಿ:100% ರಿಲೀಸ್‌ ಕ್ಲಾರಿಟಿ ಇಲ್ಲ: ಬಿಡುಗಡೆಗೆ ಕಾಯುತ್ತಿವೆ ಧನಂಜಯ್‌ ಸಿನಿಮಾಗಳು

ಮತ್ತೂಬ್ಬ ನಾಯಕರಾಗಿ ಅಚ್ಯುತ್‌ ಕುಮಾರ್‌ ಹಾಗೂ ಮೂರನೇ ಕಥೆಯಲ್ಲಿ ರಂಗಭೂಮಿ ಹಿನ್ನಲೆ ಇರುವ ಶಶಿ ನಟಿಸುತ್ತಿದ್ದಾರೆ. ನಾಯಕನ ಗೆಳಯನಾಗಿ ಧರ್ಮಣ್ಣಕಡೂರು ನಟಿಸುತ್ತಿದ್ದಾರೆ. ನಟನೆಗೆ ಅವಕಾಶಕೇಳಿಕೊಂಡು ಮಂಡ್ಯದಿಂದ ಬರುವ ಕಲಾವಿದನಾ ಗಿ ನಟಿಸುತ್ತಿದ್ದಾರೆ. ಉಳಿದಂತೆ ಓಂ ಪ್ರಕಾಶ್‌ ರಾವ್‌, ಕುರಿ ಪ್ರತಾಪ್‌, ಮಳವಳ್ಳಿ ಸಾಯಿಕೃಷ್ಣ, ಗೋಪಾಲ್‌ ದೇಶಪಾಂಡೆ ಮುಂತಾದವರ ತಾರಾಬಳಗವಿದೆ.

ರಘು ಧನ್ವಂತ್ರಿ ನಾಲ್ಕು ಹಾಡುಗಳಿಗೆ ಸಂಗೀತ ಸಂಯೋಜಸಿದ್ದಾರೆ. ಕಿರಣ್‌ ಹಂಪಾಪುರ ಛಾಯಾಗ್ರಹಣವಿದೆ. ಚಿತ್ರಕ್ಕೆ ಡಾ.ವಿ.ನಾಗೇಂದ್ರ ಪ್ರಸಾದ್‌, ಅರಸು ಅಂತಾರೆ, ಗೌಸ್‌ಪೀರ್‌ ಸಾಹಿತ್ಯವಿದೆ.ಬೆಂಗಳೂರು ಮತ್ತು ಸಕಲೇಶಪುರ ಸುತ್ತಮುತ್ತ ಚಿತ್ರೀಕರಣದ ನಡೆಯಲಿದೆ.

ಟಾಪ್ ನ್ಯೂಸ್

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.