ಸಕ್ಕರೆ ಕಾರ್ಖಾನೆ ವಿರುದ್ಧ ರೈತರ ಪ್ರತಿಭಟನೆ


Team Udayavani, Sep 14, 2021, 5:10 PM IST

ಸಕ್ಕರೆ ಕಾರ್ಖಾನೆ ವಿರುದ್ಧ ರೈತರ ಪ್ರತಿಭಟನೆ

ಚಾಮರಾಜನಗರ: ರೈತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಬಣ್ಣಾರಿ ಅಮ್ಮನ್‌ ಸಕ್ಕರೆ ಕಾರ್ಖಾನೆ ಉಪಾಧ್ಯಕ್ಷ ಶರವಣ ಅವರನ್ನು ಬೇರೆಡೆ ವರ್ಗ ಮಾಡದಿರುವ ಕ್ರಮ ಖಂಡಿಸಿ ರೈತ ಸಂಘ ಹಾಗೂ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದ ಮುಂಭಾಗ ಸೋಮವಾರ ದಿಢೀರ್‌ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಜಿಲ್ಲಾಡಳಿತ, ಬಣ್ಣಾರಿ ಅಮ್ಮನ್‌ ಸಕ್ಕರೆಕಾರ್ಖಾನೆಯ ಆಡಳಿತ ಮಂಡಳಿ ಹಾಗೂ ಶರವಣ ವಿರುದ್ಧ ಘೋಷಣೆಕೂಗಿದರು.

ಕಬ್ಬು ಬೆಳೆಗಾರರ ಸಂಘದ ಕಾರ್ಯಾಧ್ಯಕ್ಷ ಹಳ್ಳಿಕೆರೆ ಹುಂಡಿ ಭಾಗ್ಯರಾಜ್‌ ಮಾತನಾಡಿ, ಜಿಲ್ಲಾಧಿಕಾರಿ ಸಮ್ಮುಖದಲ್ಲಿ ರೈತರು ಹಾಗೂ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯ ಸಭೆಯಲ್ಲಿ  ಕಾರ್ಖಾನೆಯ ಉಪಾಧ್ಯಕ್ಷ ಶರವಣ ಅವರು ರೈತಸಂಘದಬಗ್ಗೆಅವಹೇಳನಕಾರಿಯಾಗಿ
ಮಾತನಾಡಿದ್ದರು. ಇದನ್ನು ಖಂಡಿಸಿ ಅಂದು ಪ್ರತಿಭಟನೆ ಸಹ ಮಾಡಲಾಗಿತ್ತು. ಈ ವೇಳೆ 15 ದಿನದೊಳಗೆ ಶರವಣ ಅವರನ್ನು ವರ್ಗ ಮಾಡಲು ಅವಕಾಶ ಕಲ್ಪಿಸುವಂತೆ ಕೇಳಿಕೊಂಡಿದ್ದ ಜಿಲ್ಲಾಧಿಕಾರಿ ಹಾಗೂ ಸಕ್ಕರೆಕಾರ್ಖಾನೆಯ ವೆಂಕಟೇಶಮೂರ್ತಿ ಅವರ ಮಾತಿಗೆ ಬೆಲೆ ಕೊಟ್ಟು ಅವಕಾಶ ನೀಡಲಾಗಿತ್ತು. ಆದರೆ, 15 ದಿನಗಳು ಕಳೆದರೂ ಇನ್ನೂ ವರ್ಗಾವಣೆ ಮಾಡಿಲ್ಲ ಎಂದರು.

ಇದನ್ನೂ ಓದಿ:ಗುಜರಾತ್ ನಲ್ಲಿ ಭಾರೀ ಮಳೆ; ರಾಜ್ ಕೋಟ್, ಜಾಮ್ ನಗರದಲ್ಲಿ ಪ್ರವಾಹ, IAF ಕಾರ್ಯಾಚರಣೆ

ಅಲ್ಲದೇ ಜಿಲ್ಲಾಡಳಿತವು ಶರವಣ ಅವರನ್ನು ವರ್ಗ ಮಾಡಲಾಗಿದೆಯೇ ಇಲ್ಲ ಮುಂದುವರಿಸಲಾಗಿದೆಯೇ ಎಂಬುದನ್ನು ಸಹ ಪರಿಶೀಲಿಸಿಲ್ಲ. ಅಧಿಕಾರಿಗಳನ್ನು ಕೇಳಿದಾಗ ಪರಿಶೀಲಿಸಿ ಹೇಳುವುದಾಗಿ ಹೇಳುತ್ತಾರೆ. ಬೇಡಿಕೆ ಈಡೇರಿಸದಿದ್ದರೆ ಚಳವಳಿಯನ್ನು ಮುಂದುರಿಸಲಾಗುವುದು. ಅಲ್ಲದೇ ಇಲ್ಲೇ ಅಡುಗೆ ಮಾಡಿ ಮಲಗುತ್ತೇವೆ ಎಂದು ಎಚ್ಚರಿಸಿದರು. ಈ ವೇಳೆ ಆಹಾರ ಇಲಾಖೆ ಉಪನಿರ್ದೇಶಕ ಯೋಗಾನಂದ್‌ ಸ್ಥಳಕ್ಕೆ ಬಂದು ಪ್ರತಿಭಟನಾಕಾರರನ್ನು ಮನವೊಲಿಸಲು ಪ್ರಯತ್ನಿಸಿದರು. ಇದಕ್ಕೆ ಜಗ್ಗದ ರೈತ ಸಂಘದ ಪದಾಧಿಕಾರಿಗಳು, ವರ್ಗಾವಣೆಆದೇಶ ಪತ್ರ ತರುವ ತನಕ ಪ್ರತಿಭಟನೆ ಮುಂದುರಿಸಲಾಗುವುದು ಎಂದರು.

ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ.ಗುರುಪ್ರಸಾದ್‌, ಮುಖಂಡರಾದ ಅತ್ತಹಳ್ಳಿ ದೇವರಾಜ್‌, ಕಿರಗಸೂರು ಶಂಕರ್‌, ಮೇಲಾಜಿಪುರ ವಿಜಿ, ಅಡ್ಡ ರವಿ, ಕುರುಬೂರು ಸಿದ್ದೇಶ್‌, ಶಂಭು, ನಂಜುಂಡಸ್ವಾಮಿ, ಲಿಂಗರಾಜು, ವಾಚ್‌ ಕುಮಾರ್‌, ಬೆನಕನಹಳ್ಳಿ ಪರಶಿವಮೂರ್ತಿ, ಗೌರೀಶ್‌, ಮಂಜು, ಶಿವಸ್ವಾಮಿ, ರಾಜೇಂದ್ರ ಮತ್ತಿತರರಿದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.