ಹುಣಸೂರು: ಹುಲಿ ಸೆರೆ ಕಾರ್ಯಾಚರಣೆಗೆ ದನಗಾಹಿಗಳಿಂದ ಅಡ್ಡಿ
Team Udayavani, Sep 14, 2021, 6:28 PM IST
ಹುಣಸೂರು: ನಾಗರಹೊಳೆ ಉದ್ಯಾನವನದಂಚಿನಲ್ಲಿ ಹುಲಿ ಸೆರೆ ಕಾರ್ಯಾಚರಣೆಗೆ ದನಗಾಹಿಗಳಿಂದ ಅಡ್ಡಿಯಾಗಿದೆ.
ಸೆ.8 ರ ಬೆಳಗ್ಗೆ ಉದ್ಯಾನವನದಂಚಿನ ಅಯ್ಯನಕೆರೆ ಹಾಡಿಯ ಗಣೇಶನನ್ನು ಬಹಿರ್ದೆಸೆಗೆ ತೆರಳಿದ್ದ ವೇಳೆ ಹುಲಿ ದಾಳಿ ನಡೆಸಿ ಕೊಂದು ಹಾಕಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಅರಣ್ಯ ಇಲಾಖೆ, ಹುಲಿ ಪತ್ತೆಗೆ ಸುಮಾರು 70 ಟ್ರ್ಯಾಪಿಂಗ್ ಕ್ಯಾಮರಾ ಅಳವಡಿಸಲಾಗಿತ್ತು.
ಸಂಜೆಯಿಂದಲೇ ಹುಲಿ ಸೆರೆಗೆ ಒಂದೆಡೆ ಬೋನ್ ಇರಿಸಿದ್ದರೆ ಮತ್ತೊಂದೆಡೆ ಕೂಂಬಿಂಗ್ ಆರಂಬಿಸಲಾಗಿತ್ತು. ಮೂರು ಕ್ಯಾಮರಾಗಳನ್ನು ಕಳ್ಳ ಬೇಟೆಗೆ ಬಂದಿದ್ದವರು ಕಳ್ಳತನ ಮಾಡಿದ್ದರು. ಒಂದು ಕಡೆ ಜಿಂಕೆ ಬೇಟೆಯೂ ಪತ್ತೆಯಾಗಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಅರಣ್ಯ ಸಿಬ್ಬಂದಿಗಳು ಹನಗೋಡು ಹೋಬಳಿಯ ಸಿಂಡೇನಹಳ್ಳಿ. ಕಿಕ್ಕೇರಿ ಕಟ್ಟೆಯ ಕೆಲ ಮನೆಗಳ ಮೇಲೆ ದಾಳಿ ನಡೆಸಿದ ವೇಳೆ ಸಿಂಡೇನಹಳ್ಳಿಯ ಸುಜೇಂದ್ರ ಎಂಬಾತನ ಮನೆಯಲ್ಲಿ ಜಿಂಕೆ ಮಾಂಸ ಪತ್ತೆಯಾಗಿ ಆತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ.
ಈ ನಡುವೆ ಕಾಡಂಚಿನ ಜನರಲ್ಲಿ ಎಷ್ಟೇ ಮನವಿ ಮಾಡಿದರೂ ಅರಣ್ಯದೊಳಗೆ ಜಾನುವಾರುಗಳನ್ನು ಮೇಯಲು ಬಿಡುತ್ತಿರುವುದು ಸಹ ಕೂಂಬಿಂಗ್ ನಡೆಸಲು ಅಡಚಣೆಯಾಗಿದೆ. ಗ್ರಾಮಸ್ಥರು ಜಾನುವಾರುಗಳನ್ನು ಕಾಡಿನೊಳಗೆ ಬಿಡದಂತೆ ನಾಗರಹೊಳೆ ಹುಲಿ ಯೋಜನೆ ನಿರ್ದೆಶಕ ಡಿ.ಮಹೇಶ್ ಕುಮಾರ್ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು