ಶಿಕ್ಷಕರ ನೇಮಿಸಿ ವಿದ್ಯಾರ್ಥಿಗಳ ಸಂಕಷ್ಟ ಪರಿಹರಿಸಿ


Team Udayavani, Sep 15, 2021, 3:40 AM IST

ಶಿಕ್ಷಕರ ನೇಮಿಸಿ ವಿದ್ಯಾರ್ಥಿಗಳ ಸಂಕಷ್ಟ ಪರಿಹರಿಸಿ

ಉಳ್ಳಾಲ: ಮೂಲಸೌಕರ್ಯ ಅಭಿವೃದ್ಧಿಯಾಗಿ ಹಳೆ ಕಟ್ಟಡದಿಂದ ಹೊಸ ಕಟ್ಟಡಕ್ಕೆ ಸ್ಥಳಾಂತರ ಆಗುವ ಕಾರ್ಯ ಅಧಿಕೃತವಾಗಿ ಆಗಬೇಕಿದೆ. ಆದರೆ ಶಿಕ್ಷಕರ ಕೊರತೆ ಈ ಶಾಲೆಗಿದೆ. ಎರಡು ವರ್ಷಗಳಿಂದ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಿರುವ ಉಳ್ಳಾಲ ನಗರಸಭೆ ವ್ಯಾಪ್ತಿಯ ಒಂಬತ್ತುಕೆರೆಯಲ್ಲಿರುವ ದ.ಕ.ಜಿ.ಪಂ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆಂಗ್ಲ ಮಾಧ್ಯಮ ಶಿಕ್ಷಣಕ್ಕೆ ಇಲ್ಲಿ ಶಿಕ್ಷಕರ ನೇಮಕಾತಿ ಆಗಬೇಕಿದೆ.

1962ರಲ್ಲಿ ಆರಂಭಗೊಂಡ ಈ ಶಾಲೆ 1ನೇ ತರಗತಿಯಿಂದ 8ನೇ ತರಗತಿಯವರೆಗೆ ವಿದ್ಯಾರ್ಥಿಗಳಿಗೆ ಕಲಿಕೆಗೆ ಅವಕಾಶವಿದೆ. ಸೋಮೇಶ್ವರ, ಧರ್ಮನಗರ, ಉಳ್ಳಾಲ, ಮುಕ್ಕಚ್ಚೇರಿ, ಒಂಬತ್ತುಕೆರೆ ವ್ಯಾಪ್ತಿಯ ಮಕ್ಕಳು ಈ ಶಾಲೆಯನ್ನು ನೆಚ್ಚಿಕೊಂಡಿದ್ದು, ಎರಡು ವರ್ಷಗಳಿಂದ ಈ ಶಾಲೆಗೆ ವಿದ್ಯಾರ್ಥಿಗಳ ಸಂಖ್ಯೆಯೂ ಹೆಚ್ಚುತ್ತಿದೆ. ಕಳೆದ ಶೈಕ್ಷಣಿಕ ವರ್ಷದಲ್ಲಿ ಈ ಶಾಲೆಯಲ್ಲಿ 145 ವಿದ್ಯಾರ್ಥಿಗಳಿದ್ದರೆ ಈ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳ ಸಂಖ್ಯೆ 191ಕ್ಕೇರಿದ್ದು, ಇನ್ನೂ ವಿದ್ಯಾರ್ಥಿಗಳು ದಾಖಲಾತಿ ನಡೆಯುತ್ತಿದೆ. ಪ್ರಸ್ತುತ ಈ ಶಾಲೆಯಲ್ಲಿ 1ನೇ ತರಗತಿಗೆ 50 ವಿದ್ಯಾರ್ಥಿಗಳು ದಾಖಲಾದರೆ, 8ನೇ ತರಗತಿಯಲ್ಲಿ 22 ವಿದ್ಯಾರ್ಥಿಗಳಿದ್ದಾರೆ. 7ನೇ ತರಗತಿಯಲ್ಲಿ ಅತೀ ಕಡಿಮೆ 10 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.

6 ಮಂದಿ ಶಿಕ್ಷಕರ ಕೊರತೆ:

ಕಳೆದ ಶೈಕ್ಷಣಿಕ ವರ್ಷದಲ್ಲಿ ಒಟ್ಟು 7 ಶಿಕ್ಷಕರಿದ್ದರು. ಅವರಲ್ಲಿ ಇಬ್ಬರು ನಿವೃತ್ತಿಯಾಗಿದ್ದು, ಪ್ರಸ್ತುತ ಮುಖ್ಯ ಶಿಕ್ಷಕಿ ಸಹಿತ ಐವರು ಶಿಕ್ಷಕರಿದ್ದಾರೆ. ಹೊಸ ಶಿಕ್ಷಣ ನೀತಿ ಆಂಗ್ಲ ಶಿಕ್ಷಣದ ಪ್ರಭಾವದಿಂದ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾದರೂ ಇಂಗ್ಲಿಷ್‌ ಬೋಧಿಸುವ ಶಿಕ್ಷಕರ ಕೊರತೆಯಿದೆ. ಇರುವ ಶಿಕ್ಷಕರಲ್ಲಿ ದೈಹಿಕ ಶಿಕ್ಷಣ ಶಿಕ್ಷಕಿ ಸಹಿತ ಐವರು ಶಿಕ್ಷಕರು ಎಲ್ಲ ತರಗತಿಗಳ ಆನ್‌ಲೈನ್‌ ತರಗತಿ ನೋಡಿಕೊಳ್ಳಬೇಕಿದೆ. ಮುಖ್ಯವಾಗಿ ನಲಿ-ಕಲಿ ಶಿಕ್ಷಣಕ್ಕೆ ಶಿಕ್ಷಕರು, ಸಹಾಯಕ ಶಿಕ್ಷಕರು, ಆಂಗ್ಲ ಶಿಕ್ಷಣ ಬೋಧನೆ ಮಾಡುವ ಶಿಕ್ಷಕರು ಸಹಿತ 6 ಶಿಕ್ಷಕರು ಶಾಲೆಗೆ ಬಂದರೆ ವಿದ್ಯಾರ್ಥಿಗಳಿಗೆ ಪರಿಣಾಮಕಾರಿಯಾಗಿ ಶಿಕ್ಷಣ ನೀಡಲು ಸಾಧ್ಯ. ಖಾಸಗಿ ಆಂಗ್ಲ ಮಾಧ್ಯಮ ಶಾಲೆಗಳಿಂದಲೂ ವಿದ್ಯಾರ್ಥಿಗಳು ಸರಕಾರಿ ಶಾಲೆಗೆ ದಾಖಲಾಗುತ್ತಿದ್ದು, ಬೋಧನೆಯನ್ನು ಇನ್ನು ಪರಿಣಾಮಕಾರಿಯಾಗಿ ನೀಡಲು ಶಿಕ್ಷಕರ ಕೊರತೆ ನೀಗಿದರೆ ಇನ್ನಷ್ಟು ವಿದ್ಯಾರ್ಥಿಗಳು ಈ ಶಿಕ್ಷಣ ಸಂಸ್ಥೆಯತ್ತ ಮುಖ ಮಾಡುವ ಸಾಧ್ಯತೆ ಇದೆ ಎನ್ನುತ್ತಾರೆ ಇಲ್ಲಿನ ಮುಖ್ಯ ಶಿಕ್ಷಕರು.

ಶುದ್ಧ ಕುಡಿಯುವ ನೀರಿನ ಅವಶ್ಯ:

ಈಗಾಗಲೇ ಈ ಶಾಲೆಗೆ ಹೊಸ ಕಟ್ಟಡ ನಿರ್ಮಾಣವಾಗಿದೆ. ಹಳೆ ಕಟ್ಟಡದಲ್ಲಿ ಪಾಠ ಪ್ರವಚನಗಳು ನಡೆಯುತ್ತಿದ್ದು, ಹೊಸ ಕಟ್ಟಡಕ್ಕೆ ಸ್ಥಳಾಂತರಗೊಂಡರೆ ತರಗತಿ ಕೊಠಡಿಗಳ ಕೊರತೆ ಉಂಟಾಗುವುದಿಲ್ಲ. ಶೌಚಾಲಯ ವ್ಯವಸ್ಥೆಯೂ ಇಲ್ಲಿ ನಿರ್ಮಿಸಿದ್ದು, ಮುಖ್ಯವಾಗಿ ಶುದ್ಧ ಕುಡಿಯುವ ನೀರಿನ ಆವಶ್ಯಕತೆಯಿದೆ.

ಉಳ್ಳಾಲದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ನಡುವೆಯೂ ಸರಕಾರಿ ಶಾಲೆಗೆ ಸೇರ್ಪಡೆಗೊಳ್ಳುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಪೂರ್ವ ಪ್ರಾಥಮಿಕ ಶಿಕ್ಷಣದಿಂದಲೇ ಇಂಗ್ಲಿಷ್‌ ಕಲಿಕೆ ಆರಂಭವಾದ ಬಳಿಕ ವಿದ್ಯಾರ್ಥಿಗಳ ಸಂಖ್ಯೆಯೂ ಹೆಚ್ಚುತ್ತಿದೆ. ಮುಖ್ಯವಾಗಿ ಆಂಗ್ಲ ಬೋಧನೆಯ ಶಿಕ್ಷಕರ ನೇಮಕಾತಿಯೊಂದಿಗೆ ಇಲ್ಲಿ ಕೊರತೆಯಿರುವ ಶಿಕ್ಷಕರ ನೇಮಕಾತಿ ಆದರೆ ವಿದ್ಯಾರ್ಥಿಗಳ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಪುಷ್ಪಾ ಎಸ್‌., ಮುಖ್ಯ ಶಿಕ್ಷಕರು, ದ.ಕ.ಜಿ.ಸ.ಹಿ. ಪ್ರಾ. ಶಾಲೆ ಒಂಬತ್ತುಕೆರೆ

 

-ವಸಂತ ಎನ್‌. ಕೊಣಾಜೆ

 

ಟಾಪ್ ನ್ಯೂಸ್

MLC ಚುನಾವಣೆ ಬಿಜೆಪಿ, ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಕೋಟ

MLC ಚುನಾವಣೆ ಬಿಜೆಪಿ, ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಕೋಟ

Kerala “ವೆಸ್ಟ್‌ನೈಲ್‌’ ಜ್ವರದ ಆತಂಕ; ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

Kerala “ವೆಸ್ಟ್‌ನೈಲ್‌’ ಜ್ವರದ ಆತಂಕ; ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ನೈಋತ್ಯ ಕ್ಷೇತ್ರ; ಬಿಜೆಪಿ- ಜೆಡಿಎಸ್‌ ಒಮ್ಮತದ ಅಭ್ಯರ್ಥಿಗೆ ಗೆಲುವು: ಡಾ| ಧನಂಜಯ ಸರ್ಜಿ

ನೈಋತ್ಯ ಕ್ಷೇತ್ರ; ಬಿಜೆಪಿ- ಜೆಡಿಎಸ್‌ ಒಮ್ಮತದ ಅಭ್ಯರ್ಥಿಗೆ ಗೆಲುವು: ಡಾ| ಧನಂಜಯ ಸರ್ಜಿ

Vasantha ಬಂಗೇರರ ಮನೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ಸಾಂತ್ವನ

Vasantha ಬಂಗೇರರ ಮನೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ಸಾಂತ್ವನ

Bantwal ಅಕ್ರಮ ಸಾಗಾಟದ ಮರಳು ವಶ; ಪ್ರಕರಣ ದಾಖಲು

Bantwal ಅಕ್ರಮ ಸಾಗಾಟದ ಮರಳು ವಶ; ಪ್ರಕರಣ ದಾಖಲು

Mulki ಪ್ರೇಯಸಿ ಆತ್ಮಹತ್ಯೆ ಬೆನ್ನಲ್ಲೇ ಪ್ರಿಯತಮನೂ ಆತ್ಮಹತ್ಯೆ

Mulki ಪ್ರೇಯಸಿ ಆತ್ಮಹತ್ಯೆ ಬೆನ್ನಲ್ಲೇ ಪ್ರಿಯತಮನೂ ಆತ್ಮಹತ್ಯೆ

Road Mishap ಅರಂತೋಡು: ಬೈಕ್‌- ಜೀಪ್‌ ಢಿಕ್ಕಿ; ಗಾಯ

Road Mishap ಅರಂತೋಡು: ಬೈಕ್‌- ಜೀಪ್‌ ಢಿಕ್ಕಿ; ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kerala “ವೆಸ್ಟ್‌ನೈಲ್‌’ ಜ್ವರದ ಆತಂಕ; ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

Kerala “ವೆಸ್ಟ್‌ನೈಲ್‌’ ಜ್ವರದ ಆತಂಕ; ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ನೈಋತ್ಯ ಕ್ಷೇತ್ರ; ಬಿಜೆಪಿ- ಜೆಡಿಎಸ್‌ ಒಮ್ಮತದ ಅಭ್ಯರ್ಥಿಗೆ ಗೆಲುವು: ಡಾ| ಧನಂಜಯ ಸರ್ಜಿ

ನೈಋತ್ಯ ಕ್ಷೇತ್ರ; ಬಿಜೆಪಿ- ಜೆಡಿಎಸ್‌ ಒಮ್ಮತದ ಅಭ್ಯರ್ಥಿಗೆ ಗೆಲುವು: ಡಾ| ಧನಂಜಯ ಸರ್ಜಿ

Mulki ಪ್ರೇಯಸಿ ಆತ್ಮಹತ್ಯೆ ಬೆನ್ನಲ್ಲೇ ಪ್ರಿಯತಮನೂ ಆತ್ಮಹತ್ಯೆ

Mulki ಪ್ರೇಯಸಿ ಆತ್ಮಹತ್ಯೆ ಬೆನ್ನಲ್ಲೇ ಪ್ರಿಯತಮನೂ ಆತ್ಮಹತ್ಯೆ

Surathkal; ಉದ್ಯಮಿಯ ಮೇಲೆ ಪತ್ನಿ, ಸಂಬಂಧಿಕರಿಂದ ಹಲ್ಲೆ, ಗೃಹಬಂಧನ

Surathkal; ಉದ್ಯಮಿಯ ಮೇಲೆ ಪತ್ನಿ, ಸಂಬಂಧಿಕರಿಂದ ಹಲ್ಲೆ, ಗೃಹಬಂಧನ

Moodabidri ಹೊಸಬೆಟ್ಟು: ಈಜುಕೊಳಕ್ಕೆ ಧುಮುಕಿದ ಯುವಕ ಸಾವು

Moodabidri ಹೊಸಬೆಟ್ಟು: ಈಜುಕೊಳಕ್ಕೆ ಧುಮುಕಿದ ಯುವಕ ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ISREL

Israel–ಹಮಾಸ್‌ಯುದ್ಧ: 70 ಹಮಾಸ್‌ ಉಗ್ರರ ಹತ್ಯೆ

imran-khan

Pak ಅಮೂಲ್ಯ ಗಿಫ್ಟ್ ಮಾರಾಟ: ಇಮ್ರಾನ್‌ ವಿರುದ್ಧ ಪ್ರಕರಣ

MLC ಚುನಾವಣೆ ಬಿಜೆಪಿ, ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಕೋಟ

MLC ಚುನಾವಣೆ ಬಿಜೆಪಿ, ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಕೋಟ

1-ewqeqwe

Cannes 2024 : ಐಶ್ವರ್ಯಾ ರೈ ಹೊಸ ಲುಕ್‌ಗೆ ನೆಟ್ಟಿಗರ ಪರ, ವಿರೋಧ ಕಮೆಂಟ್‌

Kerala “ವೆಸ್ಟ್‌ನೈಲ್‌’ ಜ್ವರದ ಆತಂಕ; ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

Kerala “ವೆಸ್ಟ್‌ನೈಲ್‌’ ಜ್ವರದ ಆತಂಕ; ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.