ಕಲಕೇರಿ ಭಾಗದಲ್ಲಿ ಭೂಮಿ ಕಂಪಿಸಿದ ಅನುಭವ
Team Udayavani, Sep 14, 2021, 9:53 PM IST
ಮುಂಡರಗಿ(ಗದಗ): ತಾಲೂಕಿನ ಕಲಕೇರಿ, ಮುಷ್ಠಿಕೊಪ್ಪ, ವಿರುಪಾಪುರ ಗ್ರಾಮಗಳಲ್ಲಿ ಮಂಗಳವಾರ ರಾತ್ರಿ ಭೂಕಂಪಿಸಿದ ಅನುಭವವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ.
ಮಂಗಳವಾರ ರಾತ್ರಿ 8.25 ರ ಸುಮಾರಿಗೆ ಕ್ಷಣಕಾಲ ದೊಡ್ಡ ಶಬ್ಧ ಕೇಳಿಸಿದ್ದು, ಬಳಿಕ ಭೂಮಿ ಕಂಪಿಸಿದ ಅನುಭವವಾಗಿದೆ. ಹಳೇ ಮಣ್ಣಿನ ಮನೆಗಳ ಮೇಲ್ಛಾವಣಿಯಿಂದ ಅಲ್ಲಲ್ಲಿ ಮಣ್ಣು ಉದುರಿದೆ. ವಿದ್ಯುತ್ ಬಲ್ಬ್ಗಳು ನೇತಾಡುತ್ತಿದ್ದವು. ಇದರಿಂದ ಆತಂಕಗೊಂಡ ಜನರು ಮನೆಯಿಂದ ಹೊರಗೆ ಓಡಿ ಬಂದಿದರು. ಮಕ್ಕಳು ಮರಿಗಳೊಂದಿಗೆ ಸಮೀಪದ ಬಯಲು ಹಾಗೂ ರಸ್ತೆಗಳಲ್ಲಿ ಜಮಾಯಿಸಿದ್ದರು. ಆದರೆ, ಅದೃಷ್ಟವಶಾತ್ ಯಾವುದೇ ಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ಕಪ್ಪತ್ತಗುಡ್ಡದ ಸೆರಗಿನಿಲ್ಲಿರುವ ಈ ಗ್ರಾಮಗಳಲ್ಲಿ ಈ ಹಿಂದೆ ಯಾವತ್ತೂ ಇಂತಹ ಅನುಭವಗಳಾಗಿರಲಿಲ್ಲ. ಆದರೆ, ಗ್ರಾಮಗಳ ಸುತ್ತಮುತ್ತ ಐದಾರು ಕೆರೆಗಳಿವೆ. ಇತ್ತೀಚೆಗೆ ಉತ್ತಮ ಮಳೆಯಾಗಿದ್ದರಿಂದ ಎಲ್ಲ ಕೆರೆಗಳು ಸಂಪೂರ್ಣ ಭರ್ತಿಯಾಗಿದೆ. ಗ್ರಾಮದಲ್ಲಿ ಅಂತರ್ಜಲ ಮಟ್ಟ ಹೆಚ್ಚಿದ್ದರಿಂದ ನಾಲ್ಕೈದು ಅಡಿ ತೆಗ್ಗು ತೆಗೆದರೂ, ನೀರು ಬರುತ್ತಿದೆ. ಭೂಮಿ ಕಂಪಿಸಲು ಇದೂ ಒಂದು ಕಾರಣ ಆಗಿರಬಹುದು. ಆದರೂ, ಈ ಬಗ್ಗೆ ತಜ್ಞರು ವೈಜ್ಞಾನಿಕವಾಗಿ ಅಧ್ಯಯನ ನಡೆಸಬೇಕು ಎನ್ನುತ್ತಾರೆ ಗ್ರಾಮಸ್ಥರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’
Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’
Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ
Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ
Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ