ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ ನಡೆಸಲು ಹೈಕೋರ್ಟ ಸೂಚನೆ


Team Udayavani, Sep 15, 2021, 6:00 PM IST

cgdfgr

ಧಾರವಾಡ : ಕೋವಿಡ್ ಕಾರಣದಿಂದ ಮುಂದೂಡಲ್ಪಟ್ಟಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಪ್ರಕ್ರಿಯೆಯನ್ನು ಮುಂಬರುವ ಎರಡು ತಿಂಗಳುಗಳ ಅವಧಿಯಲ್ಲಿ ಪೂರ್ಣಗೊಳಿಸಬೇಕೆಂದು ಧಾರವಾಡ ಹೈಕೋರ್ಟ್ ಪೀಠ ಇಂದು (ಸೆ.15) ನಿರ್ದೇಶನ ನೀಡಿದೆ.

ಮೇ.9 ರಂದು ನಿಗದಿಯಾಗಿದ್ದ ಕಸಾಪ ಚುನಾವಣೆಯನ್ನು ಕೋವಿಡ್ ಎರಡನೇ ಅಲೆ ತೀವ್ರಗೊಂಡ ಕಾರಣ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿತ್ತು. ನಂತರ ಸಹಕಾರ ವಲಯ, ವಿವಿಧ ಮಹಾನಗರಪಾಲಿಕೆ, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಕೈಗೊಂಡ ಬಳಿಕವೂ ಕಸಾಪ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸುವ ನಿರ್ಧಾರ ಪ್ರಕಟವಾಗಲಿಲ್ಲ.ಈ ಕುರಿತು ಕೇಂದ್ರ ಕಸಾಪ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಶೇಖರಗೌಡ ಮಾಲಿಪಾಟೀಲ ಅವರು ಚುನಾವಣಾಧಿಕಾರಿಗಳಿಗೆ ಮನವಿ ಸಲ್ಲಿಸಿ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಲು ಕೋರಿದ್ದರು.

ನಂತರ ಧಾರವಾಡದ ನ್ಯಾಯವಾದಿಗಳಾದ ಶ್ರೀಹರ್ಷ ನಿಲೋಪಂತ್ ಮತ್ತು ಅವಿನಾಶ್ ಮಾಲಿಪಾಟೀಲ ಅವರ ಮೂಲಕ ಹೈಕೋರ್ಟ್ ಪೀಠಕ್ಕೂ ಒಂದು ರಿಟ್ ಅರ್ಜಿ ಸಲ್ಲಿಸಿದ್ದರು. ಶೇಖರಗೌಡ ಮಾಲಿಪಾಟೀಲ ಅವರ ಅರ್ಜಿ ಪರಿಗಣಿಸಿರುವ ಉಚ್ಛನ್ಯಾಯಾಲಯವು ಕಸಾಪ ಚುನಾವಣಾ ಪ್ರಕ್ರಿಯೆಯನ್ನು ಎರಡು ತಿಂಗಳ ಅವಧಿಯೊಳಗೆ ಪೂರ್ಣಗೊಳಿಸಲು ನ್ಯಾ.ಕೃಷ್ಣಕುಮಾರ ಅವರಿದ್ದ ಏಕ ಸದಸ್ಯ ಪೀಠ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಉಚ್ಛನ್ಯಾಯಾಲಯದ ನಿರ್ದೇಶನದ ಪ್ರತಿಯನ್ನು ಪಡೆದ ಬಳಿಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಹಾಗೂ ಚುನಾವಣಾಧಿಕಾರಿಗಳಿಗೆ ಈ ಕುರಿತು ಮತ್ತೊಮ್ಮೆ ಲಿಖಿತ ಮನವಿ ಸಲ್ಲಿಸಲಾಗುವುದು. ನ್ಯಾಯಾಲಯದ ಈ ನಿರ್ದೇಶನ ಕನ್ನಡ ಕಟ್ಟುವ ಕೆಲಸಕ್ಕೆ ಬಲ ತುಂಬಿದೆ. ಅಡಳಿತ ಮಂಡಳಿಯೇ ಇಲ್ಲದೇ ಅಧಿಕಾರಿಗಳಿಂದ ಹೆಚ್ಚಿನ ಕೆಲಸಗಳು ಸದ್ಯಕ್ಕೆ ಕಸಾಪದಿಂದ ಸಾಧ್ಯವಿಲ್ಲ. ಹೀಗಾಗಿ ಕೂಡಲೆ ಸರ್ಕಾರ ಮತ್ತು ಚುನಾವಣಾ ಆಯೋಗ ಕ್ರಮ ವಹಿಸಬೇಕು ಎಂದು ಕಸಾಪ ಕೇಂದ್ರ ಸಮಿತಿ ಅಧ್ಯಕ್ಷ ಸ್ಥಾನದ ಅಭ್ಯರ್ಥಿ  ಶೇಖರಗೌಡ ಮಾಲಿಪಾಟೀಲ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.