ಅಕ್ರಮ ಬಿಪಿಎಲ್‌ ಕಾರ್ಡ್‌ದಾರರಿಗೆ ಶಾಕ್‌! ಬಡವರ “ಅನ್ನಭಾಗ್ಯ’ ಶ್ರೀಮಂತರ ಪಾಲು

3 ಹೆಕ್ಟೇರ್‌ಗೂ ಅಧಿಕ ಕೃಷಿ ಭೂಮಿ ಹೊಂದಿದ 2,850 ಕಾರ್ಡ್‌ಗಳು ಸೇರಿವೆ.

Team Udayavani, Sep 15, 2021, 5:03 PM IST

ಅಕ್ರಮ ಬಿಪಿಎಲ್‌ ಕಾರ್ಡ್‌ದಾರರಿಗೆ ಶಾಕ್‌! ಬಡವರ “ಅನ್ನಭಾಗ್ಯ’ ಶ್ರೀಮಂತರ ಪಾಲು

ಬೀದರ: ಆರ್ಥಿಕವಾಗಿ ಸದೃಢವಾಗಿದ್ದರೂ ಸುಳ್ಳು ಮಾಹಿತಿ ನೀಡಿ ಬಿಪಿಎಲ್‌/ಅಂತ್ಯೋದಯ ಪಡಿತರ ಚೀಟಿ ಮಾಡಿಸಿಕೊಂಡು ಅನ್ನಭಾಗ್ಯ ಯೋಜನೆ ದುರ್ಲಾಭ ಪಡೆಯುತ್ತಿದ್ದವರಿಗೆ ಆಹಾರ ಇಲಾಖೆ ಶಾಕ್‌ ನೀಡಿದೆ. ಬೀದರ ಜಿಲ್ಲೆಯಲ್ಲಿ 6,531 ಕಾರ್ಡ್ ಗಳನ್ನು ರದ್ದುಗೊಳಿಸಲಾಗಿದ್ದು, ಅದರಲ್ಲಿ ಸರ್ಕಾರಿ ಶಾಲಾ ಶಿಕ್ಷಕರು, ತೆರಿಗೆ ಪಾವತಿದಾರರು ಇರುವುದು ವಿಶೇಷ.

ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರ ವಿತರಣೆ ಬಗ್ಗೆ ವ್ಯಾಪಕ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ನ್ಯಾಯಬೆಲೆ ಅಂಗಡಿಗಳ ಸಮಗ್ರ ತನಿಖೆಯನ್ನು ತೀವ್ರಗೊಳಿಸುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಅದರನ್ವಯ ಇಲಾಖಾ ಅಧಿಕಾರಿಗಳು ನಡೆಸಿದ ಭೌತಿಕ ತನಿಖೆಯಿಂದ ಅನಧಿಕೃತ ವ್ಯಕ್ತಿಗಳು ಪಡಿತರ ಧಾನ್ಯ ಪಡೆಯಲು ಬಿಪಿಎಲ್‌/ ಅಂತ್ಯೋದಯ ಕಾರ್ಡ್ ಗಳನ್ನು ಹೊಂದಿರುವುದು ದೃಢಪಟ್ಟಿದೆ.

ಅಕ್ರಮವಾಗಿ ಹೊಂದಿದ್ದ ಪಡಿತರ ಕಾರ್ಡ್‌ಗಳನ್ನು ದಂಡ ರಹಿತ ವಾಪಸ್‌ ಮಾಡಲು ಸರ್ಕಾರ ಅವಕಾಶ ಕಲ್ಪಿಸಿತ್ತು. ಆದರೆ, ನಿರೀಕ್ಷಿತ ಮಟ್ಟದಲ್ಲಿ ಪ್ರತಿಕ್ರಿಯೆ ಸಿಗದ ಹಿನ್ನೆಲೆ ಆಹಾರ ಇಲಾಖೆಯೇ ಕಾರ್ಯಾಚರಣೆ ನಡೆಸಿದೆ. ಚೀಟಿದಾರರ ಆಧಾರ್‌, ಪ್ಯಾನ್‌, ಆದಾಯ ತೆರಿಗೆ ಸಲ್ಲಿಕೆ ಮತ್ತು ಎಚ್‌ಆರ್‌ ಎಂಎಸ್‌ ಸೇರಿ ಅಗತ್ಯ ದಾಖಲೆಗಳನ್ನು ಜಾಲಾಡಿದಾಗ ಬಡವರ ಪಾಲಿನ ಅನ್ಯಭಾಗ್ಯ ಉಳ್ಳವರ ಪಾಲಾಗುತ್ತಿರುವುದು ಬಹಿರಂಗವಾಗಿದೆ.

ಆಹಾರ ಇಲಾಖೆ ಕೇಂದ್ರ ಕಚೇರಿ ರಾಜ್ಯದ ಆಯಾ ಜಿಲ್ಲೆಗಳಲ್ಲಿರುವ ಅನರ್ಹ ಕಾರ್ಡ್‌ಗಳ ಪಟ್ಟಿ ರವಾನಿಸಿದೆ. ಅದರಂತೆ ಬೀದರ ಜಿಲ್ಲೆಯಲ್ಲಿ 15 ಸಾವಿರಕ್ಕೂ ಹೆಚ್ಚು ಅಕ್ರಮ ಕಾರ್ಡ್‌ ಪತ್ತೆಯಾಗಿದ್ದು, ಪರಿಶೀಲನೆ ಇನ್ನೂ ಮುಂದುವರೆದಿದೆ. ಇದರಲ್ಲಿ ಈಗಾಗಲೇ 6,531 ಚೀಟಿಗಳನ್ನು ರದ್ದು/ ಪರಿವರ್ತನೆ ಮಾಡಲಾಗಿದೆ.

ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರು ಸೇರಿ ಸರ್ಕಾರಿ ನೌಕರರು 333, ತೆರಿಗೆ ಪಾವತಿದಾರರು 1,456 ಮತ್ತು 1.20 ಲಕ್ಷಕ್ಕೂ ಅಧಿಕ ಕುಟುಂಬದ ಆದಾಯ ಹೊಂದಿದವರು ಮತ್ತು 3 ಹೆಕ್ಟೇರ್‌ಗೂ ಅಧಿಕ ಕೃಷಿ ಭೂಮಿ ಹೊಂದಿದ 2,850 ಕಾರ್ಡ್‌ಗಳು ಸೇರಿವೆ. ಜಿಲ್ಲೆಯಲ್ಲಿ 25 ಸಾವಿರಕ್ಕೂ ಹೆಚ್ಚು ಅಕ್ರಮ ಬಿಪಿಎಲ್‌, ಅಂತ್ಯೋದಯ ಕಾರ್ಡ್‌ ಇರುವ ಬಗ್ಗೆ ಆಹಾರ ಇಲಾಖೆಯ ಮೂಲಗಳು ತಿಳಿಸಿವೆ.

ಇನ್ನೂ ಅಹಾರ ಇಲಾಖೆ ಕಾರ್ಯಾಚರಣೆ ಹೊರತಾಗಿ ಜಿಲ್ಲಾ ಉಪ ನಿರ್ದೇಶಕರ ಕಚೇರಿ ಸಹ ಪಡಿತರ ಚೀಟಿಯಲ್ಲಿನ ಅವ್ಯವಹಾರ ಪತ್ತೆ ಕ್ರಮ ವಹಿಸುತ್ತಿದೆ. ಬಿಪಿಎಲ್‌/ಅಂತ್ಯೋದಯ ಕಾರ್ಡ್‌ ಹೊಂದಿದ ಕುಟುಂಬಗಳಲ್ಲಿ ಮೃತಪಟ್ಟಿರುವ 12,352 ಜನರ ಹೆಸರನ್ನು ತೆಗೆದು ಹಾಕಲಾಗಿದೆ. ಅನರ್ಹ ಪಡಿತರ ಚೀಟಿ ರದ್ದು ಪ್ರಕ್ರಿಯೆಯನ್ನು ಇನ್ನೂ ಮುಂದುವರೆದಿದ್ದು, ಮಾನದಂಡ ಉಲ್ಲಂಘಿಸಿ ಕಾರ್ಡ್‌ ಪಡೆದಲ್ಲಿ ಸ್ವಯಂ ಪ್ರೇರಿತರಾಗಿ ಹಿಂದುರುಗಿಸಬೇಕಿದೆ.

ಕಾರ್ಡ್‌ಗೆ ಮಾನದಂಡಗಳೇನು?
ವೇತನ ಗಣನೆಗೆ ತೆಗೆದುಕೊಳ್ಳದೆ ಎಲ್ಲ ಕಾಯಂ ನೌಕರರು (ಸರ್ಕಾರ, ಸರ್ಕಾರಿ ಸಂಸ್ಥೆ, ಸರ್ಕಾರಿ ಪ್ರಾಯೋಜಿತ ಸಂಸ್ಥೆ, ಮಂಡಳಿ-ನಿಗಮ, ಸ್ವಾಯತ್ತ ಸಂಸ್ಥೆ ಇತ್ಯಾದಿ) ಒಳಗೊಂಡಂತೆ, ಆದಾಯ ತೆರಿಗೆ, ವ್ಯಾಟ್‌, ವೃತ್ತಿ ತೆರಿಗೆ ಪಾವತಿಸುವ ಕುಟುಂಬಗಳು ಬಿಪಿಎಲ್‌ ಕಾರ್ಡ್‌ ಹೊಂದುವಂತಿಲ್ಲ. ಜೀವನೋಪಾಯಕ್ಕಾಗಿ ಸ್ವಂತ ಒಂದು ವಾಣಿಜ್ಯ ವಾಹನ (ಟ್ರಾಕ್ಟರ್‌, ಮ್ಯಾಕ್ಟಿಕ್ಯಾಬ್‌, ಟ್ಯಾಕ್ಸಿ ಇತ್ಯಾದಿ) ಹೊಂದಿರುವ ಕುಟುಂಬ ಹಾಗೂ ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷ ರೂ.ಗಿಂತ ಹೆಚ್ಚಿರುವ ಕುಟುಂಬ ಅಂತ್ಯೋದಯ ಹಾಗೂ ಬಿಪಿಎಲ್‌ ಕಾರ್ಡ್‌ ಹಿಂದುರುಗಿಸಬೇಕು.

ಅನರ್ಹ ಬಿಪಿಎಲ್‌ ಕಾರ್ಡ್‌ಗಳು ಹೊಂದಿರುವವರಿಗೆ ಹಿಂತಿರುಗಿಸಲು ಗಡುವು ನೀಡಲಾಗಿತ್ತು. ಆದರೆ, ನಿರೀಕ್ಷಿತ ಸ್ಪಂದನೆ ಸಿಗಲಿಲ್ಲ. ಹಾಗಾಗಿ ಆಹಾರ ಇಲಾಖೆಯೇ 15 ಸಾವಿರಕ್ಕೂ ಹೆಚ್ಚು ಅಕ್ರಮ ಕಾರ್ಡ್‌ಗಳ ಪಟ್ಟಿ ನೀಡಿದ್ದು, ಅದರಲ್ಲಿ ಈಗಾಗಲೇ 6,531 ಚೀಟಿ ರದ್ದುಗೊಳಿಸಲಾಗಿದೆ. ಇನ್ನೂ ದಾಖಲೆಗಳ ಪರಿಶೀಲಿಸುವ ಪ್ರಕ್ರಿಯೆ ಮುಂದುವರೆದಿದ್ದು, ಮಾನದಂಡ ಉಲ್ಲಂಘಿಸಿ ಪಡೆದವರ ಕಾರ್ಡ್‌ ರದ್ದುಗೊಳ್ಳಲಿವೆ.
ಬಾಬುರೆಡ್ಡಿ, ಆಹಾರ ಇಲಾಖೆ, ಉಪ
ನಿರ್ದೇಶಕರು ಬೀದರ

*ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.