ಹಿರಿಯ ವಿದ್ಯಾರ್ಥಿಗಳಿಂದ ಸರ್ಕಾರಿ ಶಾಲೆ ಸೌಂದರ್ಯ ಹೆಚ್ಚಳ

ಸರ್ಕಾರಿ ಶಾಲೆಗೆ ಸ್ಮಾಟ್‌ಕ್ಲಾಸ್‌ ಆಳವಡಿಕೆ ಸ್ವಂತ ಹಣದಲ್ಲಿ ಶಾಲೆಗೆ ಕಾಯಕಲ್ಪ

Team Udayavani, Sep 17, 2021, 4:56 PM IST

ಹಿರಿಯ ವಿದ್ಯಾರ್ಥಿಗಳಿಂದ ಸರ್ಕಾರಿ ಶಾಲೆ ಸೌಂದರ್ಯ ಹೆಚ್ಚಳ

ಚಿಕ್ಕನಾಯಕನಹಳ್ಳಿ: ತಾಲೂಕಿನ ಕಂದಿಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಚಿತ್ರಣವನ್ನೇ ಹಿರಿಯ ವಿದ್ಯಾರ್ಥಿಗಳು
ಬದಲಾಯಿಸಿದ್ದಾರೆ. 1914ನೇ ಇಸವಿಯಲ್ಲಿ ಪ್ರಾರಂಭವಾದ ಶಾಲೆಗೆ ಹೊಸ ಕಾಯಕಲ್ಪ ನೀಡಿ, ವಿದ್ಯಾರ್ಥಿಗಳಿಗೆ ಆರೋಗ್ಯಕರ ವಾತಾವರಣ
ನಿರ್ಮಿಸುವ ಮೂಲಕ ಓದಿದ ಶಾಲೆಗೆ ಗೌರವ ನೀಡಿದ್ದಾರೆ.

ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುತ್ತಿದ್ದ ಕಾಲವೊಂದಿತ್ತು. ಕೋವಿಡ್‌ ಲಾಕ್‌ಡೌನ್‌ನಿಂದ ಸರ್ಕಾರಿ ಶಾಲೆಗಳ ಬೆಲೆ ಹಾಗೂ ಗುಣಮಟ್ಟದ ಬಗ್ಗೆ ಬಹುತೇಕ ಪೋಷಕರಿಗೆ ತಿಳಿಯುತ್ತಿದೆ. ತಾಲೂಕಿನ ಕಂದಿಕೆರೆ ಗ್ರಾಮದಲ್ಲಿ ಗ್ರಾಮಸ್ಥರು ಹಾಗೂ ಹಳೆ ವಿದ್ಯಾರ್ಥಿಗಳು ಒಂದು ಹೆಜ್ಜೆ ಮುಂದೆ ಹೋಗಿ, ಸರ್ಕಾರಿ ಶಾಲೆ ಯಾವ ಖಾಸಗಿ ಶಾಲೆಗೂ ಕಡಿಮೆ ಇರಬಾರದು ಎಂಬ ಮನಸ್ಥಿತಿಯಲ್ಲಿ 107 ವರ್ಷಗಳ
ಹಳೆಯದಾದ ಶಾಲೆಗೆ ಸಂಪೂರ್ಣ ಆಕರ್ಷಕವಾದ ಬಣ್ಣ ಹೊಡೆದು, ಶಾಲೆಯನ್ನು ರಿಪೇರಿ ಮಾಡುವ ಮೂಲಕ ಶಾಲೆಯನ್ನು ಹೊಸ ರೂಪಕ್ಕೆ ತಂದು ನಿಲ್ಲಿಸಿದ್ದಾರೆ.

ಸ್ಮಾರ್ಟ್‌ ಕ್ಲಾಸ್‌ ಆಳವಡಿಕೆ: ಯಾವ ಖಾಸಗಿ ಶಾಲೆಗೂ ಹಳ್ಳಿಯ ಸರ್ಕಾರಿ ಶಾಲೆಗಳು ಕಡಿಮೆ ಇರಬಾರದು ಎಂಬ ಉದ್ದೇಶದಿಂದ ಶಾಲೆ ಹಿರಿಯ ವಿದ್ಯಾರ್ಥಿಯೊಬ್ಬರು, ಮಕ್ಕಳ ಕಲಿಕೆ ಗುಣಮಟ್ಟ ಹೆಚ್ಚಿಸಲು ಶಾಲೆಗೆ ಸ್ಮಾರ್ಟ್‌ಕ್ಲಾಸ್‌ ಆಳವಡಿಕೆ ಮಾಡಲಾಗುತ್ತಿದೆ. ಶಾಲೆಗೆ ಕಂಪ್ಯೂಟರ್‌, ಪ್ರಿಂಟಿರ್‌ ಸೌಲಭ್ಯ ಕಲ್ಪಿಸಲಾಗುತ್ತಿದೆ. ಮಕ್ಕಳಿಗೆ ನೋಟ್‌ ಪುಸ್ತಕ ಹಾಗೂ ವಿವಿಧ ಸೌಲಭ್ಯವನ್ನು ಹಿರಿಯ ವಿದ್ಯಾರ್ಥಿಗಳು ನೀಡಿದ್ದಾರೆ.

ಇದನ್ನೂ ಓದಿ:ಪರಭಾಷೆಗೆ ಹೋಗುವಾಗ ಅಳುಕು-ಭಯ ಸಹಜ…: ಕಂಫ‌ರ್ಟ್‌ ಲೆವೆಲ್‌ನಿಂದ ಹೊರಬಂದ ಆಶಿಕಾ ಮಾತು

ಮಾಸಿದ ಶಾಲೆಗೆ ಹೊಸ ರೂಪ: ಸರ್ಕಾರಿ ಶಾಲೆಗಳು ಎಂದರೇ ತಟ್‌ ಅಂತ ಕಣ್ಣ ಮುಂದೆ ಬರುವುದೆ ಹಳೇ ಅಂಚಿನ ಛಾವಣಿ, ಹಳೆಯದಾದ ಬಾಗಿಲು, ಕಿಟಕಿ,ಮುರಿಯುವ ಸ್ಥಿತಿಯ ಗೇಟ್‌, ಮಾಸಿ ಹೋಗಿರುವ ಬಣ್ಣ. ಆದರೆ, ಇದೇ ಸ್ಥಿತಿಯಲ್ಲಿದ್ದ ಶಾಲೆಯನ್ನು, ಶಾಲೆಯಲ್ಲಿ ಓದಿದ ಹಿರಿಯ ವಿದ್ಯಾರ್ಥಿಗಳು ತಮ್ಮ ಸ್ವಂತ ಹಣದಿಂದ ಶಾಲೆಗೆ ವಿವಿಧ ಬಣ್ಣಗಳಿಂದ ಶೃಂಗರಿಸಿ, ವಿವಿಧ ಚಿತ್ರಗಳನ್ನು ಗೋಡೆ ಮೇಲೆ ಬರೆಸಿ, ಶಾಲೆಗೆ ಬರುವ ವಿದ್ಯಾರ್ಥಿಗಳಿಗೆ ಉತ್ತಮ ವಾತಾವರಣ ನಿರ್ಮಾಣ ಮಾಡಿದ್ದಾರೆ.

ಹಳ್ಳಿಯ ಸರ್ಕಾರಿ ಶಾಲೆಗೆ ಹೊಸ ರೂಪದಿಂದ ಮಕ್ಕಳಿಗೆ ಓದಿನಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ಆಧುನಿಕದಲ್ಲಿ ಹಳ್ಳಿ ಮಕ್ಕಳು ಓದಿನಲ್ಲಿ ಪೈಪೋಟಿಗೆ ಅನುಕೂಲವಾಗಿದೆ. ಕೋವಿಡ್‌ ನಂತರ ಹೆಚ್ಚಿನ ಮಕ್ಕಳು ಸರ್ಕಾರಿ ಶಾಲೆಗೆ ಸೇರಿದ್ದು, ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ.
-ಕಾತ್ಯಾಹಿನಿ, ಶಿಕ್ಷಣಾಧಿಕಾರಿ, ಚಿ.ನಾ.ಹಳ್ಳಿ

-ಚೇತನ್‌

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.