ಪಿಂಚಣಿ ಖಾತೆಗೆ 52 ಕೋಟಿ ರೂ.ಜಮಾ | ಸರ್ಕಾರಕ್ಕೆ ವಿಶೇಷ ಮನವಿ ಮಾಡಿದ ರೈತ
Team Udayavani, Sep 18, 2021, 3:32 PM IST
ಪಟನಾ: ತಾಂತ್ರಿಕ ದೋಷದಿಂದ ಬಿಹಾರದ ಮುಜಫ್ಫರ್ಪುರ ಜಿಲ್ಲೆ ಸಿಂಗಾರಿ ಗ್ರಾಮದ ರೈತ ರಾಮ್ ಬಹದ್ದೂರ್ ಶಾ ಅವರ ಬ್ಯಾಂಕ್ ಖಾತೆಗೆ 52 ಕೋಟಿ ರೂ. ಜಮೆಯಾಗಿದ್ದು, ಇದರಲ್ಲಿ ಸ್ವಲ್ಪ ಹಣ ನನಗೆ ನೀಡಿ ಎಂದು ಸರ್ಕಾರಕ್ಕೆ ಆತ ಮನವಿ ಮಾಡಿದ್ದಾನೆ.
ತಮ್ಮ ಪಿಂಚಣಿ ಖಾತೆಗೆ ಇಷ್ಟೊಂದು ಹಣ ಜಮಾ ಆಗಿರುವುದು ನೋಡಿ ಖುದ್ದು ಶಾ ಅಚ್ಚರಿಕೊಂಡಿದ್ದಾರೆ. ಕಾತ್ರಾ ಗ್ರಾಮದಲ್ಲಿ ಶಾ ಅವರ ಬ್ಯಾಂಕ್ ಖಾತೆ ಇದೆ. ಹಿರಿಯ ನಾಗರಿಕರಿಗೆ ನೀಡುವ ಪಿಂಚಣಿ ಜಮೆಯಾಗಿರುವ ಕುರಿತು ಮಾಹಿತಿ ಪಡೆಯಲು ಇವರು ಬ್ಯಾಂಕ್ಗೆ ತೆರಳಿದ್ದು, ಈ ವೇಳೆ ಖಾತೆಯಲ್ಲಿ 52 ಕೋಟಿ ರೂ. ಇದೆ ಎಂದು ಬ್ಯಾಂಕ್ ಅಧಿಕಾರಿ ತಿಳಿಸಿದ್ದನ್ನು ಕೇಳಿ ರೈತನಿಗೆ ಒಂದು ಕ್ಷಣ ಆಘಾತವಾಗಿದೆ.
ನಾವು ಗ್ರಾಮಗಳಲ್ಲಿ ವಾಸಿಸುವ ಬಡ ರೈತರಾಗಿದ್ದೇವೆ. ಹಣ ಹೇಗೆ ಬಂದಿದೆ ಎಂಬುದರ ಬಗ್ಗೆ ಗೊತ್ತಿಲ್ಲ. ಸರಕಾರ ನಮಗೆ ಹಣಕಾಸು ನೆರವು ನೀಡಿದರೆ ಸುಗಮವಾಗಿ ಜೀವನ ಸಾಗಿಸಬಹುದಾಗಿದೆ,” ಎಂದು ರಾಮ್ ಬಹದ್ದೂರ್ ಶಾ ತಿಳಿಸಿದ್ದಾರೆ.
ನಾನು ಕೃಷಿ ಮಾಡಿಕೊಂಡು ಇದುವರೆಗೆ ಕಷ್ಟದಲ್ಲಿಯೇ ಜೀವನ ನಡೆಸಿದ್ದೇನೆ. ಸದ್ಯ ನನ್ನ ಖಾತೆಗೆ ಬಂದ ಹಣದಲ್ಲಿ ಸ್ವಲ್ಪವನ್ನಾದರೂ ನನಗೆ ನೀಡಿ. ಅದರಿಂದ ಮುಂದಿನ ಜೀವನವನ್ನು ಸುಖ-ನೆಮ್ಮದಿಯಿಂದ ಕಳೆಯುತ್ತೇನೆ ಎಂದು ರೈತ ಶಾ ಸರ್ಕಾರಕ್ಕೆ ಮನವಿ ಮಾಡಿದ್ದಾನೆ.
ಇನ್ನು ಕಳೆದ ಎರಡು ದಿನಗಳ ಹಿಂದೆಯಷ್ಟೇ ಬಿಹಾರದ ಕಟಿಹಾರ್ ಜಿಲ್ಲೆಯ ಪಸ್ತಿಯಾ ಎಂಬ ಗ್ರಾಮದಲ್ಲಿ ನಡೆದಿತ್ತು ಇಂತಹದೇ ಘಟನೆ ನಡೆದಿತ್ತು. ಆ ಊರಿನ ಇಬ್ಬರು ಶಾಲಾ ಮಕ್ಕಳ ಖಾತೆಗೆ 900 ಕೋಟಿ ರೂಪಾಯಿಗೂ ಅಧಿಕ ಹಣ ಜಮೆಯಾಗಿತ್ತು. ಇದೀಗ ಮತ್ತೆ ರೈತನ ಖಾತೆಗೆ ಹಣ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್
Delhi police Station: ಪೊಲೀಸ್ ಠಾಣೆ ಬಾತ್ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!
Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ
Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು
Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ
MUST WATCH
ಹೊಸ ಸೇರ್ಪಡೆ
Koratagere: ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣು
Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು
Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್
HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?
65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್ ಸಾಧನೆ: ಹರಿಪ್ರಕಾಶ ಕೋಣೆಮನೆ