ಗೋವಾದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಹೆಚ್ಚಿನ ಪ್ರಯತ್ನ : ಸಚಿವ ಶ್ರೀಪಾದ ನಾಯ್ಕ
Team Udayavani, Sep 18, 2021, 3:49 PM IST
ಪಣಜಿ: ಗೋವಾದಲ್ಲಿ ಪ್ರವಾಸೋದ್ಯಮ ಕ್ಷೇತ್ರ ಅಭಿವೃದ್ಧಿಗಾಗಿ ರಾಜ್ಯ ಹಾಗೂ ಕೆಂದ್ರ ಸರ್ಕಾರ ಸರ್ವತೋಪಿ ಪ್ರಯತ್ನ ನಡೆಸಲಿದೆ ಎಂದು ಕೇಂದ್ರ ಸಚಿವ ಶ್ರೀಪಾದ ನಾಯ್ಕ ನುಡಿದರು.
ಮುರಗಾಂವನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು-ಗೋವಾದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಈ ಹಿಂದೆಯೂ ಕೇಂದ್ರ ಸರ್ಕಾರವು ಹಲವು ಪ್ರಸ್ತಾವವನ್ನು ನೀಡಿದೆ. ಈ ಎಲ್ಲ ಯೋಜನೆಗಳು ಶೀಘ್ರವೇ ಆರಂಭಗೊಳ್ಳಲಿದೆ ಎಂದು ಶ್ರೀಪಾದ ನಾಯ್ಕ ಮಾಹಿತಿ ನೀಡಿದರು.
ಇದನ್ನೂ ಓದಿ :ಪಿಂಚಣಿ ಖಾತೆಗೆ 52 ಕೋಟಿ ರೂ.ಜಮಾ | ಸರ್ಕಾರಕ್ಕೆ ವಿಶೇಷ ಮನವಿ ಮಾಡಿದ ರೈತ