ಪಡಿತರ ಚೀಟಿ ಇ-ಕೆವೈಸಿಗೆ ಸೆ. 30ರ ಗಡುವು


Team Udayavani, Sep 19, 2021, 8:00 AM IST

ಪಡಿತರ ಚೀಟಿ ಇ-ಕೆವೈಸಿಗೆ ಸೆ. 30ರ ಗಡುವು

ಮಂಗಳೂರು: ಪಡಿತರ ಚೀಟಿದಾರರಿಗೆ “ಇ- ಕೆವೈಸಿ’ ಮಾಡಿಸಲು ವಿಧಿಸಿದ್ದ ಗಡುವನ್ನು ರಾಜ್ಯ ಸರಕಾರ ಸೆಪ್ಟಂಬರ್‌ 30ರ ತನಕ ವಿಸ್ತರಿಸಿದೆ. ಇದಕ್ಕಾಗಿ ಪಡಿತರ ಚೀಟಿದಾರರು ತಮ್ಮ ಮೂಲ ನ್ಯಾಯಬೆಲೆ ಅಂಗಡಿಗೇ ತೆರಳಬೇಕು.

ನ್ಯಾಯಬೆಲೆ ಅಂಗಡಿಗಳಲ್ಲಿ 10ನೇ ತಾರೀಕಿನ ಬಳಿಕ ಪಡಿತರ ಸಾಮಗ್ರಿ ವಿತರಣೆ ನಡೆಯುವುದರಿಂದ ಇ- ಕೆವೈಸಿಗೆ ಮಧ್ಯಾಹ್ನ 12ರಿಂದ ಸಂಜೆ 4ರ ತನಕ ಸಮಯ ನಿಗದಿ ಪಡಿಸಲಾಗಿದೆ. ಈ ಹಿಂದೆ ಸೆ. 10ರ ಗಡುವು ಇತ್ತು. ಗುರಿ ಸಾಧನೆ ಆಗದ ಕಾರಣ ವಿಸ್ತರಿಸಲಾಗಿದೆ.

ಏನಿದು ಇ – ಕೆವೈಸಿ:

ಇ-ಕೆವೈಸಿ ಎಂದರೆ “ಎಲೆಕ್ಟ್ರಾನಿಕ್‌- ನೊ ಯುವರ್‌ ಕಸ್ಟಮರ್‌’ ಎಂದರ್ಥ. ನ್ಯಾಯಬೆಲೆ ಅಂಗಡಿದಾರರು ಪಡಿತರ ಚೀಟಿಯಲ್ಲಿ ಹೆಸರು ಇರುವವರನ್ನು ವಿದ್ಯುನ್ಮಾನ ಮೂಲಕ ತಿಳಿಯುವ ವ್ಯವಸ್ಥೆ ಇದು. ಕಾರ್ಡಿನಲ್ಲಿ ಹೆಸರಿರುವ ಎಲ್ಲರೂ ಪಡಿತರ ಚೀಟಿ, ಆಧಾರ್‌ ಕಾರ್ಡ್‌, ಗ್ಯಾಸ್‌ ಸಂಪರ್ಕದ ವಿವರಗಳೊಂದಿಗೆ ರೇಶನ್‌ ಅಂಗಡಿಗೆ ತೆರಳಿ ಬೆರಳಚ್ಚು ಕೊಡಬೇಕು. ಆಧಾರ್‌ಗೆ ನೋಂದಾಯಿಸಿರುವ ಮೊಬೈಲ್‌ ಸಂಖ್ಯೆಯನ್ನೇ ನೀಡಬೇಕು. ಬೆರಳಚ್ಚು ತೆಗೆದುಕೊಳ್ಳದಿದ್ದರೆ ಇ-ಕೆವೈಸಿ ಅಸಾಧ್ಯ. ಅಂಥವರು ಆಧಾರ್‌ ಕೇಂದ್ರಕ್ಕೆ ತೆರಳಿ ಪುನಃ ಬಯೋಮೆಟ್ರಿಕ್‌ (ಬೆರಳಚ್ಚು) ನೀಡಿ ಅದು  ಆಧಾರ್‌ನಲ್ಲಿ ಅಪ್‌ಡೇಟ್‌ ಆದ ಬಳಿಕ ನ್ಯಾಯಬೆಲೆ ಅಂಗಡಿಗೆ ತೆರಳಿ ಇ-ಕೆವೈಸಿ ಮಾಡಬೇಕು.

ದೂರದ ಊರಲ್ಲಿ ಇರುವವರ ಸಂಕಷ್ಟ:

ಮೂಲ ನ್ಯಾಯಬೆಲೆ ಅಂಗಡಿಯಲ್ಲಿಯೇ ಇ- ಕೆವೈಸಿ ಮಾಡಬೇಕೆಂಬ ನಿಯಮದ ಬದಲು  ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಮಾಡಿಸಲು ಅವಕಾಶ ಇದ್ದರೆ ಅನುಕೂಲ ಎನ್ನುವುದು ಹಲವರ ಅಭಿಪ್ರಾಯ.

ಆಧಾರ್‌ನಲ್ಲಿ ಭಾಷಾ ಸಮಸ್ಯೆ! :

ಹೊರ ರಾಜ್ಯಗಳಿಂದ ಬಂದು ಕರ್ನಾಟಕದಲ್ಲಿ ನೆಲೆಸಿ ಪಡಿತರ ಚೀಟಿಯನ್ನು ಇಲ್ಲಿ ಹೊಂದಿದ್ದರೂ ಅದಕ್ಕೆ ಜೋಡಣೆ ಆಗಿರುವ ಆಧಾರ್‌ ಕಾರ್ಡನ್ನು ಈ ಮೊದಲಿದ್ದ ರಾಜ್ಯದಲ್ಲಿ ಮಾಡಿಸಿದ್ದರೆ ಇ- ಕೆವೈಸಿಗೆ ಸಮಸ್ಯೆಯಾಗುತ್ತಿದೆ. ಹೊರ ರಾಜ್ಯದಲ್ಲಿ ಮಾಡಿಸಿರುವ ಕಾರ್ಡ್‌ನಲ್ಲಿ ವ್ಯಕ್ತಿಯ ಹೆಸರು

ಅಲ್ಲಿನ ಭಾಷೆಯಲ್ಲಿ ಇರುತ್ತದೆ. ಇದು ಕರ್ನಾಟಕ ದಲ್ಲಿ ಪಡಿತರ ಚೀಟಿಯ ಇ- ಕೆವೈಸಿಗೆ ಅಡ್ಡಿ ಆಗುತ್ತದೆ. ಇ-ಕೆವೈಸಿ ಆಗಿದೆಯೇ ಇಲ್ಲವೇ ಎಂದು  ತಿಳಿಯಲು ಆಹಾರ ಇಲಾಖೆ ವೆಬ್‌ಸೈಟ್‌ನಲ್ಲಿ  ಪಡಿತರ ಚೀಟಿ ಸಂಖ್ಯೆ ದಾಖಲಿಸಿ ನೋಡಬಹುದು.

ಮಾಡಿಸದಿದ್ದರೆ ಪಡಿತರ ಸಿಗದು :

ಇ- ಕೆವೈಸಿ ಮಾಡಿಸದಿದ್ದರೆ ಪಡಿತರ ವಿತರಣೆ ನಿಲ್ಲಿಸಲಾಗುತ್ತದೆ ಎಂದು ಸರಕಾರ ತಿಳಿಸಿದೆ. ಇ-ಕೆವೈಸಿ ಮಾಡಿಸದ ಸದಸ್ಯರ ಹೆಸರನ್ನು ಪಡಿತರ ಚೀಟಿಯಿಂದ ತೆಗೆದು ಹಾಕಲಾಗುತ್ತದೆಯೇ ಎನ್ನುವ ಕುರಿತು ಸರಕಾರ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಅಧಿಕಾರಿಗಳು ಉದಯವಾಣಿಗೆ ತಿಳಿಸಿದ್ದಾರೆ.

ಇ- ಕೆವೈಸಿ ಒಂದು ಬಾರಿ ಮಾಡಿದರೆ ಬ್ಯಾಂಕ್‌ ಖಾತೆಯ ರೀತಿಯಲ್ಲಿ ಅದರ ಅವಧಿ ಜೀವನ ಪರ್ಯಂತ ಇರುತ್ತದೆ. ಬ್ಯಾಂಕಿನಲ್ಲಿ ಖಾತೆ ತೆರೆದ ಶಾಖೆಯಲ್ಲಿಯೇ ಕೆವೈಸಿ ಮಾಡಲಾಗುತ್ತಿದ್ದು, ಅದೇ ರೀತಿ ಪಡಿತರ ಚೀಟಿಗೆ ಅದರ ಮೂಲ ನ್ಯಾಯ ಬೆಲೆ ಅಂಗಡಿಯಲ್ಲಿ ಇ- ಕೆವೈಸಿ ಮಾಡಬೇಕು. ರಮ್ಯಾ ಸಿ.ಆರ್‌., ಉಪ ನಿರ್ದೇಶಕರು, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ, ದ.ಕ.

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.