ಬೀದರಲ್ಲಿ ಕಂದಮ್ಮ ಗಳಿಗೆ ವೈರಲ್‌ ಜ್ವರ ಕಾಟ!

ಪೋಷಕರ ನಿದ್ದೆಗೆಡಿಸಿದ ಮಕ್ಕಳ ಬಾಧೆ ; ಕೋವಿಡ್‌ ನೆಗೆಟಿವ್‌, ಸಮಾಧಾನಕರ

Team Udayavani, Sep 19, 2021, 4:50 PM IST

ಬೀದರಲ್ಲಿ ಕಂದಮ್ಮ ಗಳಿಗೆ ವೈರಲ್‌ ಜ್ವರ ಕಾಟ!

ಬೀದರ: ಕೋವಿಡ್‌ ಮೂರನೇ ಅಲೆ ಭೀತಿ ನಡುವೆ ಗಡಿ ನಾಡು ಬೀದರ್‌ ಸೇರಿದಂತೆ ರಾಜ್ಯಾದ್ಯಂತ ಮಕ್ಕಳಲ್ಲಿ ಕಾಣಿಸಿಕೊಂಡಿರುವ ಹೊಸ ಬಗೆಯ “ವೈರಾಣು ಜ್ವರ’ ಪೋಷಕರ ಹಾಗೂ ಆರೋಗ್ಯ ಇಲಾಖೆ ನಿದ್ದೆಗೆಡಿಸಿದೆ. ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಜ್ವರ ಪೀಡಿತ ಮಕ್ಕಳ ದಾಖಲಾತಿ ಹೆಚ್ಚುತ್ತಿದೆ. ಆದರೆ, ಜೀವ ಹಾನಿಯ ಆತಂಕ ಇಲ್ಲ ಎಂಬುದು ಸಮಾಧಾನಕರ ಸಂಗತಿ.

ಆಗಸ್ಟ್‌ ತಿಂಗಳಾಂತ್ಯ ವೇಳೆ ಹವಾಮಾನದಲ್ಲಿನ ದಿಢೀರ್‌ ಬದಲಾವಣೆಯಿಂದಾಗಿ ಅನಾರೋಗ್ಯ ಪೀಡಿತ ಮಕ್ಕಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಆಗುತ್ತಿದ್ದು, ವೈರಾಣು ಜ್ವರ ಉಲ್ಬಣಗೊಳ್ಳುತ್ತಿದೆ. ವಿಶೇಷವಾಗಿ 2ರಿಂದ 8 ವರ್ಷದೊಳಗಿನ ಮಕ್ಕಳಲ್ಲಿ ಜ್ವರ, ನೆಗಡಿ, ಕೆಮ್ಮಿನ ಸಮಸ್ಯೆ ಕಾಣಿಸಿಕೊಳ್ಳುತ್ತಿದ್ದು, ಖಾಸಗಿ ಆಸ್ಪತ್ರೆಗಳಲ್ಲಿ ಮಕ್ಕಳ ಚಿಕಿತ್ಸೆಗೆ ಹಾಸಿಗೆ ಕೊರತೆ ಕಾಡಲಾರಂಭಿಸಿದೆ. ಇತ್ತ ಬ್ರಿಮ್ಸ್‌ ಸೇರಿ ಸರ್ಕಾರಿ ಆಸ್ಪತ್ರೆ ಗಳಲ್ಲಿಯೂ ರೋಗಿಗಳ ದಾಖಲಾತಿ ಹೆಚ್ಚುತ್ತಿದೆ. ಸದ್ಯ ಯಾವುದೇ ಮಕ್ಕಳಲ್ಲಿ ಕೋವಿಡ್‌ ಕಾಣಿಸಿಕೊಂಡಿಲ್ಲವಾದರೂ ಸೋಂಕಿನ ಭೀತಿ ಮಾತ್ರ ತಪ್ಪಿಲ್ಲ.

ಜಿಲ್ಲಾ ಬ್ರಿಮ್ಸ್‌ ಆಸ್ಪತ್ರೆಯೊಂದರಲ್ಲಿ ಆಗಸ್ಟ್‌ ತಿಂಗಳಲ್ಲಿ 57, ಸೆ.1ರಿಂದ ಈವರೆಗೆ 35 ಮಕ್ಕಳು ಜ್ವರದ ಕಾರಣಕ್ಕೆ ಒಳ ರೋಗಿಗಳಾಗಿ ದಾಖಲಾಗಿದ್ದರೆ, ಪ್ರತಿನಿತ್ಯ 15-20 ಮಕ್ಕಳು ವೈರಾಣು ಜ್ವರ ಮತ್ತು ಇನ್ನಿತರ ಸಮಸ್ಯೆಗಳಿಂದ ಹೊರ ರೋಗಿಗಳಾಗಿ ಚಿಕಿತ್ಸೆ ಪಡೆದು ಹೋಗುತ್ತಿದ್ದಾರೆ. ತಾಲೂಕು ಆಸ್ಪತ್ರೆಗಳಲ್ಲಿಯೂ ಮಕ್ಕಳ ದಾಖಲಾತಿ ಹೆಚ್ಚಾಗುತ್ತಿದೆ. ಮತ್ತೂಂದೆಡೆ ಖಾಸಗಿ ಆಸ್ಪತ್ರೆಗಳಲ್ಲೂ ಒಳ ರೋಗಿಗಳಾಗಿ ದಾಖಲಾಗುತ್ತಿರುವ ಮಕ್ಕಳ ಸಂಖ್ಯೆ ಜುಲೈ ತಿಂಗಳಿಗೆ ಹೋಲಿಸಿದರೆ ಎರಡು ಪಟ್ಟು ಹೆಚ್ಚಳವಾಗಿದೆ. ಹೊರ ರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳ ಸಂಖ್ಯೆಯೂ ದ್ವಿಗುಣವಾಗಿದೆ.

ಇದನ್ನೂ ಓದಿ:ಕೋವಿಡ್ ಸಮಯದಲ್ಲಿ ಮನಮೋಹನ್‌ ಸಿಂಗ್ ಪಿಎಂ ಆಗಿದ್ದರೆ ಏನಾಗಿರುತ್ತಿತ್ತೋ: ಅರುಣ್ ಸಿಂಗ್ ಲೇವಡಿ

ಬೀದರ ಜಿಲ್ಲೆಯಲ್ಲಿ ಅಂದಾಜು 12 ವರ್ಷದೊಳಗಿನ 2.5 ಲಕ್ಷ ಮಕ್ಕಳಿದ್ದಾರೆ. ಬ್ರಿಮ್ಸ್‌ ಆಸ್ಪತ್ರೆಯಲ್ಲಿ ಕೋವಿಡ್‌ ಬೆಡ್‌ (ಮಕ್ಕಳ) ಹೊರತುಪಡಿಸಿ 75 ಹಾಸಿಗೆಗಳ ವ್ಯವಸ್ಥೆ ಇದ್ದು, ಬಹುತೇಕ ಎಲ್ಲ ಮಕ್ಕಳ ವಾರ್ಡ್‌ನಲ್ಲಿ ವೈದ್ಯಕೀಯ ಆಮ್ಲಜನಕ ಸಂಪರ್ಕದ ಬೆಡ್‌ಗಳಿವೆ. ಜತೆಗೆ ಇಲ್ಲಿನ ಓಲ್ಡ್‌ ಸಿಟಿಯ ನೂರು ಹಾಸಿಗೆ ತಾಯಿ-ಮಕ್ಕಳ ಆಸ್ಪತ್ರೆಯಲ್ಲಿ ವೈದ್ಯಕೀಯ ವ್ಯವಸ್ಥೆ ಇದೆ. ಆಸ್ಪತ್ರೆಗೆ ದಾಖಲಾಗುತ್ತಿರುವ ಎಲ್ಲಾ ಮಕ್ಕಳನ್ನು ಪರೀಕ್ಷೆಗೆ ಒಳಪಡಿಸಿದ ನಂತರವೇ ಚಿಕಿತ್ಸೆ ನೀಡಲಾಗುತ್ತಿದ್ದು, ಕೋವಿಡ್‌ ನೆಗೆಟಿವ್‌ ವರದಿ ಬರುತ್ತಿರುವುದು ಪೋಷಕರು ನಿಟ್ಟಿಸಿರು ಬಿಡುವಂತಾಗಿದೆ.

ವೈರಾಣು ಜ್ವರದಿಂದ ದಾಖಲಾಗುತ್ತಿರುವ ಮಕ್ಕಳು ನಾಲ್ಕೈದು ದಿನಗಳಲ್ಲಿ ಚಿಕಿತ್ಸೆಯಿಂದ ಗುಣಮುಖ ಆಗುತ್ತಿದ್ದಾರೆ. ಆದರೆ, ಉಸಿರಾಟ ಸಮಸ್ಯೆಯಿರುವ ಮಕ್ಕಳಿಗೆ ಆಮ್ಲಜನಕ ಸಂಪರ್ಕದ ಅಗತ್ಯವಿರುವುದರಿಂದ ಒಂದು ವಾರ ಬೇಕಾಗುತ್ತಿದೆ. ಇನ್ನೂ ರಕ್ತದಲ್ಲಿನ ಆಮ್ಲಜನಕ ಪ್ರಮಾಣ ಕಡಿಮೆಯಾಗಿರುವ ಮಕ್ಕಳ ದೇಹಸ್ಥಿತಿ ಗಂಭೀರವಾಗುತ್ತಿದ್ದು, ಅಂಥವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹಿಂದೆ ಕೋವಿಡ್‌ ಹಾಟ್‌ಸ್ಪಾಟ್‌ ಎನಿಸಿಕೊಂಡಿದ್ದ ಬೀದರ ಜಿಲ್ಲೆ ಈಗ ರಾಜ್ಯದ ಮೊದಲ ಸೋಂಕು ಮುಕ್ತ ಜಿಲ್ಲೆ ಎಂಬ ಹೆಗ್ಗಳಿಕೆ ಪಡೆದರೂ ಎರಡು ರಾಜ್ಯದ ಗಡಿಗೆ ಹೊಂದಿಕೊಂಡಿರುವುದರಿಂದ 3ನೇ ಅಲೆಯ ಆತಂಕ ಇದ್ದೆ ಇದೆ. ಈ ಸಮಯದಲ್ಲೇ ಮಕ್ಕಳಲ್ಲಿ ವೈರಲ್‌ ಕಾಯಿಲೆ ಕಾಣಿಸಿಕೊಂಡಿರುವುದು ಮಕ್ಕಳಲ್ಲಿ ಆಘಾತ ಮೂಡಿಸಿದೆ. ಆದರೆ, ಯಾರೂ ಆತಂಕಪಡುವ ಅಗತ್ಯವಿಲ್ಲ. ಹಾಗಂತ ಉದಾಸಿನ ತೋರದೆ ಮಕ್ಕಳನ್ನು ಸರಿಯಾಗಿ ಆರೈಕೆ ಮಾಡಬೇಕೆಂಬುದು ವೈದ್ಯರ ಸಲಹೆ.

ಹವಾಮಾನ ವೈಪ್ಯರೀತ್ಯದಿಂದ ಜಿಲ್ಲೆಯಲ್ಲೂ ಮಕ್ಕಳಲ್ಲಿ ವೈರಲ್‌ ಜ್ವರ ಹೆಚ್ಚಿದ್ದು, ಕೆಮ್ಮು, ದಮ್ಮು, ಜ್ವರ, ಶೀತ ಮತ್ತು ಹೊಟ್ಟೆ ಸೆಳೆತ ಕಂಡು ಬಂದಿದೆ. ಬ್ರಿಮ್ಸ್‌ನಲ್ಲಿ ಕಳೆದ ಒಂದೂವರೆ ತಿಂಗಳಲ್ಲಿ 95 ಮಕ್ಕಳು ದಾಖಲಾಗಿ ಚಿಕಿತ್ಸೆ ಪಡೆದಿದ್ದು, ಇನ್ನೂ 11 ಜನ ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲ ಮಕ್ಕಳಿಗೆ ಕೋವಿಡ್‌ ಪರೀಕ್ಷೆ ಬಳಿಕ ಚಿಕಿತ್ಸೆ ನೀಡಲಾಗುತ್ತಿದ್ದು, ಈವರೆಗೆ ಯಾವುದೇ ಮಗುವಿನಲ್ಲೂ ಸೋಂಕು ಪತ್ತೆಯಾಗಿಲ್ಲ. ಹಾಗಾಗಿ ಪೋಷಕರು ಯಾವುದೇ ಆತಂಕ ಪಡಬೇಕಿಲ್ಲ. ಜ್ವರ ಕಾಣಿಸಿಕೊಂಡಲ್ಲಿ ಶೀಘ್ರ ಚಿಕಿತ್ಸೆ ನೀಡಬೇಕು.
-ಡಾ| ಶಾಂತಲಾ ಕೌಜಲಗಿ, ಮುಖ್ಯಸ್ಥರು, ಮಕ್ಕಳ ವಿಭಾಗ, ಬ್ರಿಮ್‌

-ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.