ಜಿಲ್ಲೆಯ ಬಹುತೇಕ ಪಶು ಆಸ್ಪತ್ರೆಗಳಲ್ಲಿ ಸಿಬಂದಿ ಕೊರತೆ


Team Udayavani, Sep 20, 2021, 3:50 AM IST

Untitled-1

ಕೋಟ: ರಾಜ್ಯ ಸರಕಾರದ ಪಶು ಸಂಗೋಪನೆ ಮತ್ತು ಪಶು ವೈದ್ಯಕೀಯ ಇಲಾಖೆಗೆ ಸಂಬಂಧಿಸಿದ ಪಶು ಆಸ್ಪತ್ರೆಗಳು, ಉಪಕೇಂದ್ರಗಳಲ್ಲಿ  ಸಿಬಂದಿಯ ಕೊರತೆ ಕಾಡುತ್ತಿದೆ. ಉಡುಪಿ ಜಿಲ್ಲೆಯಲ್ಲಿ  57 ವಿವಿಧ ಪಶು ವೈದ್ಯಕೀಯ ಹುದ್ದೆಗಳಲ್ಲಿ 30 ಸ್ಥಾನಗಳಿಗೆ ವೈದ್ಯರಿಲ್ಲ ಹಾಗೂ ಹಲವು ಕಡೆಗಳಲ್ಲಿ  ಶೂನ್ಯ ಸಿಬಂದಿಯಿದ್ದಾರೆ.  ಇದರಿಂದಾಗಿ ಜಾನುವಾರುಗಳಿಗೆ ಲಸಿಕೆ, ಚಿಕಿತ್ಸೆಗಾಗಿ ಹೈನುಗಾರರು ಪರದಾಡಬೇಕಾದ ಸ್ಥಿತಿ ಇದೆ.

ಶೂನ್ಯ ಸಿಬಂದಿ ಆಸ್ಪತ್ರೆಗಳು:

ಬ್ರಹ್ಮಾವರ ತಾ|ನಲ್ಲಿ ಒಟ್ಟು 8 ಮುಖ್ಯ ಆಸ್ಪತ್ರೆಗಳು,  7 ಉಪ ಕೇಂದ್ರಗಳಿವೆ. ಇದರಲ್ಲಿ  ಪೇತ್ರಿ, ಧರ್ಮಸಾಲೆ, ಕೊಕ್ಕರ್ಣೆ, ಗುಂಡ್ಮಿ, ಹೆಗ್ಗುಂಜೆ, ಶಿರಿಯಾರ ಆಸ್ಪತ್ರೆಗಳಲ್ಲಿ  ಪಶು ವೈದ್ಯಾಧಿಕಾರಿ, ಪಶು ವೈದ್ಯ ಪರೀಕ್ಷಕರು, ಡಿ ದರ್ಜೆ ಸಿಬಂದಿ ಎಲ್ಲ ಹುದ್ದೆಗಳು ಖಾಲಿ ಇದ್ದು  ಶೂನ್ಯ ಸಿಬಂದಿಯಿದ್ದಾರೆ.  ಇಲ್ಲಿಗೆ ಬೇರೆ ಆಸ್ಪತ್ರೆಗಳಿಂದ ಹೆಚ್ಚುವರಿ ನೆಲೆಯಲ್ಲಿ ವೈದ್ಯರನ್ನು ನೇಮಿಸಿ ಕಾರ್ಯ ನಿರ್ವಹಿಸಲಾಗುತ್ತಿದೆ ಹಾಗೂ ಆಸ್ಪತ್ರೆಯ ಬಾಗಿಲು ತೆರೆಯುವ ಸಲುವಾಗಿ ಹೊರಗುತ್ತಿಗೆಯ ಕಾರ್ಮಿಕರನ್ನು ನೇಮಿಸಿಕೊಳ್ಳಲಾಗುತ್ತದೆ. ಜಿಲ್ಲೆಯ ಹಲವು ಆಸ್ಪತ್ರೆಗಳಲ್ಲಿ ಇದೇ ಪರಿಸ್ಥಿತಿ ಇದ್ದು  ಸುವ್ಯವಸ್ಥಿತ ಕಟ್ಟಡ, ಸಾವಿರಾರು ರೂ. ಮೌಲ್ಯದ ಔಷಧವಿದ್ದರೂ  ಚಿಕಿತ್ಸೆಗೆ ವೈದ್ಯರೇ ಇಲ್ಲದ ಸ್ಥಿತಿ ಇದೆ.

ಖಾಸಗಿ ವೈದ್ಯರ ಸೇವೆ:

ಸರ ಕಾರಿ ಪಶು ಆಸ್ಪತ್ರೆಗಳಲ್ಲಿ ವೈದ್ಯರಿಲ್ಲದ ಕಾರಣ ನಿವೃತ್ತ ವೈದ್ಯರು ಹಾಗೂ ಕೆ.ಎಂ.ಎಫ್‌. ವೈದ್ಯರು ಸೇರಿದಂತೆ ವಿವಿಧ ಖಾಸಗಿ ವೈದ್ಯರ ಸೇವೆಯನ್ನು  ಸಾವಿರಾರು ಹೈನುಗಾರರು ನೆಚ್ಚಿಕೊಂಡಿದ್ದಾರೆ.

ಕಾಯಿಲೆಗಳನ್ನು ನಿಯಂತ್ರಿಸುವ ವಿವಿಧ ಲಸಿಕೆ ಶಿಬಿರಗಳು ಹಾಗೂ ಇಲಾಖಾ ಕಾರ್ಯಕ್ರಮಗಳನ್ನು ನೆರವೇರಿಸಲು ಈಗ ಇರುವ ಸಿಬಂದಿಗೆ ಮಾತ್ರ ಕೆಲಸದ ಒತ್ತಡಕ್ಕೆ ಹೆಚ್ಚಾ ಗಿದೆ.  ಜತೆಗೆ ಗ್ರಾ.ಪಂ. ನೋಡಲ್‌ ಅಧಿಕಾರಿ ಹುದ್ದೆ, ಚುನಾವಣೆ ಕರ್ತವ್ಯದ ತಲೆನೋವು ಕೂಡ ಈ ಸಿಬಂದಿಗಿದೆ.

ಜಿಲ್ಲೆಯ ಜನಪ್ರತಿನಿಧಿಗಳು ಈ ಬಗ್ಗೆ ಸರಕಾರದ ಗಮನಸೆಳೆದು ಖಾಲಿ ಇರುವ ಹುದ್ದೆಗಳಿಗೆ  ಶೀಘ್ರ ವೈದ್ಯರನ್ನು ಭರ್ತಿ ಮಾಡುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕಿದೆ.

ರಾಜ್ಯಾದ್ಯಂತ ಈ ಸಮಸ್ಯೆ ಇದ್ದು  ಸಿಬಂದಿ ಕೊರತೆ ಕುರಿತು ಈಗಾಗಲೇ ಇಲಾಖೆಯ ಮುಖ್ಯಸ್ಥರಿಗೆ ವರದಿ ನೀಡಲಾಗಿದೆ.  ಮುಂದೆ ಗುತ್ತಿಗೆ ಅಥವಾ ಖಾಯಂ ವೈದ್ಯರ ನೇಮಕಾತಿ ಸಂದರ್ಭ ಕೊರತೆಯನ್ನು ನೀಗಿಸುವ ಭರವಸೆ ನೀಡಿದ್ದಾರೆ. –ಡಾ| ಅರುಣ್‌ ಕುಮಾರ್‌ ಶೆಟ್ಟಿ, ಆಡಳಿತ ಮುಖ್ಯ ಪಶು ವೈದ್ಯಾಧಿಕಾರಿ,  ಬ್ರಹ್ಮಾವರ ತಾಲೂಕು

-ರಾಜೇಶ್‌ ಗಾಣಿಗ ಅಚ್ಲಾಡಿ

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.