ಶಾಲಾರಂಭವಾದರೂ ವಿದ್ಯಾರ್ಥಿಗಳಿಗೆ ಸಾಕಷ್ಟು ಬಸ್‌ಗಳಿಲ್ಲದೆ ಸಂಕಟ


Team Udayavani, Sep 21, 2021, 3:10 AM IST

Untitled-1

ಮಹಾನಗರ: ದಕ್ಷಿಣ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳ ಭೌತಿಕ ತರಗತಿಗಳು ಆರಂಭವಾಗಿದ್ದು, ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗುತ್ತಿರುವ ಕಾರಣ ಬಸ್‌ಗಳಲ್ಲಿ ಪ್ರಯಾಣಿಕರ ದಟ್ಟನೆ ಕಂಡು ಬರುತ್ತಿದೆ. ಮುಖ್ಯವಾಗಿ ಮಂಗಳೂರು -ತಲಪಾಡಿ ಮಾರ್ಗದಲ್ಲಿ ಸರಕಾರಿ ಬಸ್‌ಗಳ ಸಂಚಾರ ಇಲ್ಲದಿರುವ ಕಾರಣ ಪೀಕ್‌ ಅವರ್‌ಗಳಲ್ಲಿ ಖಾಸಗಿ ಸಿಟಿ ಬಸ್‌ಗಳಲ್ಲಿ ಪ್ರಯಾಣಿಕರು ಸಂಕಷ್ಟ ಎದುರಿಸುವಂತಾಗಿದೆ.

ಈ ಮಾರ್ಗದಲ್ಲಿ ಮಂಗಳೂರು- ಕಾಸರಗೋಡು ಮಧ್ಯೆ 3 ನಿಮಿಷಕ್ಕೊಂದರಂತೆ ಸಂಚರಿಸುತ್ತಿದ್ದ ಕರ್ನಾಟಕ ಮತ್ತು ಕೇರಳ ರಸ್ತೆ ಸಾರಿಗೆ ಸಂಸ್ಥೆಗಳ ಬಸ್‌ಗಳು ಕರ್ನಾಟಕ ಸರಕಾರವು ಕರ್ನಾಟಕ-ಕೇರಳ ಮಧ್ಯೆ ಅಂತಾರಾಜ್ಯ ಬಸ್‌ ಸಂಚಾರಕ್ಕೆ ನಿರ್ಬಂಧ ಹೇರಿರುವುದರಿಂದ ಈಗ ಕಾರ್ಯಾಚರಣೆ ನಡೆಸುತ್ತಿಲ್ಲ. ಜೂನ್‌, ಜುಲೈ ತಿಂಗಳಲ್ಲಿ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಕೆಲವು ಬಸ್‌ಗಳನ್ನು ಮಂಗಳೂರು- ತಲಪಾಡಿ ಮಧ್ಯೆ ಕಾರ್ಯಾಚರಣೆಗೆ ಇಳಿಸಿದ್ದರೂ ಕೇರಳದಲ್ಲಿ ಕೊರೊನಾ ಜಾಸ್ತಿಯಾಗಿ ಕ್ರಮೇಣ ನಿಫಾ ಸೋಂಕಿನ ಭೀತಿ ಎದುರಾದಾಗ ದಕ್ಷಿಣ ಕನ್ನಡ ಜಿಲ್ಲಾಡಳಿತ ಈ ಬಸ್‌ಗಳ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಿದೆ. ಹಾಗಾಗಿ ಈಗ ಮಂಗಳೂರು- ತಲಪಾಡಿ ಮಧ್ಯೆ ಖಾಸಗಿ ಸಿಟಿ ಬಸ್‌ಗಳು ಮಾತ್ರ ಓಡಾಡುತ್ತಿವೆ.

ಮಂಗಳೂರು – ತಲಪಾಡಿ ಮಧ್ಯೆ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿಯ 2 ನರ್ಮ್ ಬಸ್‌ಗಳ ಕಾರ್ಯಾ ಚರಣೆಯನ್ನು 2 ವರ್ಷಗಳ ಹಿಂದೆಯೇ ಸ್ಥಗಿತಗೊಳಿಸಲಾಗಿದೆ. ಆ ಬಳಿಕ ಕೆ.ಸಿ.ರೋಡ್‌- ಕಿನ್ಯಾ ಪ್ರದೇಶಕ್ಕೆ ಎರಡು ನರ್ಮ್ ಬಸ್‌ಗಳು ಓಡಾಡುತ್ತಿದ್ದರೂ ಈಗ ಕರ್ಫ್ಯೂ ಬಳಿಕ ಅವುಗಳ ಸಂಚಾರ ಪುನರಾರಂಭ ಆಗಿಲ್ಲ. ಇದೀಗ ಸರಿಸುಮಾರು 5 ನಿಮಿಷಕ್ಕೆ ಒಂದರಂತೆ ಕಾರ್ಯಾಚರಿಸುವ ಖಾಸಗಿ ಸಿಟಿ ಬಸ್‌ಗಳು ಮಾತ್ರ ಪ್ರಯಾಣಿಕರಿಗೆ ಆಸರೆ.

ಸೆ. 1ರಿಂದ ದ್ವಿತೀಯ ಪಿಯುಸಿ, ಬಳಿಕ 8, 9, 10ನೇ ತರಗತಿ, ಪ್ರಥಮ ಪಿಯುಸಿ ಮತ್ತು ಪದವಿ ತರಗತಿಗಳು ಆರಂಭವಾಗಿದ್ದು, ಇದೀಗ ಸೆ. 20ರಿಂದ 6, 7ನೇ ತರಗತಿಯ ಭೌತಿಕ ತರಗತಿಗಳು ಆರಂಭವಾಗಿವೆ. ಆನ್‌ಲೈನ್‌ ತರಗತಿಗೆ ಅವಕಾಶವಿದ್ದರೂ ಶೇ. 60ರಷ್ಟು ವಿದ್ಯಾರ್ಥಿಗಳು ತರಗತಿಗಳು ಆರಂಭವಾದಂದಿನಿಂದಲೂ ಶಾಲಾ- ಕಾಲೇಜುಗಳತ್ತ ಮುಖ ಮಾಡಿದ್ದಾರೆ. ಈಗ ಈ ಪ್ರಮಾಣ ಶೇ. 80ಕ್ಕೆ ತಲುಪಿದೆ.

ವಾರಾಂತ್ಯ ಕರ್ಫ್ಯೂ ರದ್ದುಗೊಂಡಿದ್ದು, ಪ್ರಸ್ತುತ ನೈಟ್‌ ಕರ್ಫ್ಯೂ ಮಾತ್ರ ಜಾರಿಯಲ್ಲಿದೆ. ಇದರಿಂದಾಗಿ ವ್ಯಾಪಾರ ವ್ಯವಹಾರ ಚಟುವಟಿಕೆಗಳೂ ಪುನರಾರಂಭಗೊಂಡಿದ್ದು, ಉದ್ಯೋಗಕ್ಕೆ ತೆರಳುವವರ ಸಂಖ್ಯೆಯೂ ಏರಿಕೆಯಾಗಿದೆ. ವಿದ್ಯಾರ್ಥಿಗಳಿಗೆ ಮಧ್ಯಾಹ್ನ ತನಕ ಮತ್ತು ಮಧ್ಯಾಹ್ನ ಬಳಿಕ ಎಂಬುದಾಗಿ ಎರಡು ಪಾಳಿಗಳಲ್ಲಿ ತರಗತಿಗೆ ಹಾಜರಾಗಲು ಅವಕಾಶ ಕಲ್ಪಿಸಿದ್ದರಿಂದ ಬೆಳಗ್ಗೆ ಮತ್ತು ಸಂಜೆ ಮಾತ್ರವಲ್ಲ, ಇಡೀ ದಿನ ಬಸ್‌ಗಳಿಗೆ ಪ್ರಯಾಣಿಕರು ಲಭಿಸುವಂತಾಗಿದೆ. ಮಂಗಳೂರು- ತಲಪಾಡಿ ಮಧ್ಯೆ ಬಸ್‌ಗಳಲ್ಲಿ ಜನ ದಟ್ಟಣೆ ಅತ್ಯಧಿಕವಾಗಿದೆ. ಹಾಗಾಗಿ ಈ ಮಾರ್ಗದಲ್ಲಿ ಕೆಲವು ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರವನ್ನಾದರೂ ಪುನರಾರಂಭಿಸ ಬೇಕೆಂಬುದು ಸಾರ್ವಜನಿಕರ ಬೇಡಿಕೆ.

ಅಂಕಿ ಅಂಶಗಳ ಪ್ರಕಾರ ಮಂಗಳೂರಿನಲ್ಲಿ 325 ಖಾಸಗಿ ಸಿಟಿ ಬಸ್‌ಗಳ ಪೈಕಿ 275 ಬಸ್‌ಗಳು (ಶೇ. 84) ಹಾಗೂ ಕೆಎಸ್‌ಆರ್‌ಟಿಸಿಯ 32 ನರ್ಮ್ ಬಸ್‌ಗಳ ಪೈಕಿ 20 ಬಸ್‌ಗಳು ಪ್ರಸ್ತುತ ಸಂಚಾರ ನಡೆಸುತ್ತಿವೆ. ಖಾಸಗಿ ಸಿಟಿ ಬಸ್‌ಗಳು ಮಂಗಳೂರಿನ ಬಹುತೇಕ ಎಲ್ಲ ಮಾರ್ಗಗಳಲ್ಲಿ ಓಡಾಟ ನಡೆಸುತ್ತಿವೆ. ಸರಕಾರದ ನರ್ಮ್ ಬಸ್‌ಗಳು ಕೆಲವೇ ಮಾರ್ಗಗಳಲ್ಲಿ ಸೀಮಿತ ಸಂಖ್ಯೆಯಲ್ಲಿ ಮಾತ್ರ ಇವೆ.

ಪ್ರಸ್ತುತ ಶೇ. 80- 84ರಷ್ಟು ಖಾಸಗಿ ಸಿಟಿ ಬಸ್‌ಗಳು ಕಾರ್ಯಾಚರಿಸುತ್ತಿವೆ. ಈಗ ಬಸ್‌ಗಳಿಗೆ ಆಗುತ್ತಿರುವ ಕಲೆಕ್ಷನ್‌ ನಿರೀಕ್ಷಿತ ಪ್ರಮಾಣದಲ್ಲಿ ಇಲ್ಲ. ನೈಟ್‌ ಕರ್ಫ್ಯೂ ಹಿಂಪಡೆದ ಬಳಿಕ ಹಾಗೂ ಶಾಲಾ, ಕಾಲೇಜುಗಳ ತರಗತಿಗಳು ಪೂರ್ಣ ಪ್ರಮಾಣದಲ್ಲಿ ಪುನರಾರಂಭಗೊಂಡ ಬಳಿಕ ಎಲ್ಲ ಬಸ್‌ಗಳನ್ನು ರಸ್ತೆಗಿಳಿಸಲು ಕ್ರಮ ವಹಿಸಲಾಗುವುದು.

-ಜಯಶೀಲ ಅಡ್ಯಂತಾಯ,ಅಧ್ಯಕ್ಷರು, ದ.ಕ. ಬಸ್‌ ಮಾಲಕರ ಸಂಘ

ಕೆ.ಎಸ್‌.ಆರ್‌.ಟಿ.ಸಿ. ಎಸಿ ಬಸ್‌ಗಳನ್ನು ಹಾಗೂ ಮಂಗಳೂರು- ಕಾಸರಗೋಡು ಮಾರ್ಗದ ಬಸ್‌ಗಳನ್ನು ಹೊರತು ಪಡಿಸಿ ಉಳಿದ ಎಲ್ಲ ಬಸ್‌ಗಳು ಈಗ ಕಾರ್ಯಾಚರಣೆ ನಡೆಸುತ್ತಿವೆ. ಮಂಗಳೂರು- ಕಾಸರಗೋಡು ಮಾರ್ಗದಲ್ಲಿ ಅಂತಾರಾಜ್ಯ ಸಂಚಾರಕ್ಕೆ ನಿರ್ಬಂಧ ಇದೆ. ಆದರೆ ಮಂಗಳೂರು- ತಲಪಾಡಿ ಮಧ್ಯೆ ಬಸ್‌ ಸಂಚಾರ ಪುನರಾಂಭಿಸುವ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಕ್ರಮ ಕೈಗೊಳ್ಳ ಬೇಕಾಗಿದೆ. -ಅರುಣ್‌ ಕುಮಾರ್‌, ವಿಭಾಗ ನಿಯಂತ್ರಣ ಅಧಿಕಾರಿ,ಕೆಎಸ್‌ಆರ್‌ಟಿಸಿ, ಮಂಗಳೂರು. 

 

-ಹಿಲರಿ ಕ್ರಾಸ್ತಾ

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.