ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿದರೂ ಮೂಲಸೌಲಭ್ಯ ಮರೀಚಿಕೆ


Team Udayavani, Sep 21, 2021, 3:20 AM IST

ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿದರೂ ಮೂಲಸೌಲಭ್ಯ ಮರೀಚಿಕೆ

ಬಜಪೆ: ಮಂಗಳೂರು ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪ ಇರುವ ಕರಂಬಾರಿನ ದ.ಕ.ಜಿ.ಪಂ.ಹಿ. ಪ್ರಾಥಮಿಕ ಶಾಲೆ 1928ರಲ್ಲಿ ಸ್ಥಾಪನೆಗೊಂಡಿದ್ದು, ಇನ್ನೇನೂ 7 ವರ್ಷಗಳಲ್ಲಿ ಶತಮಾ ನೋತ್ಸವವನ್ನು ಆಚರಿಸಿಕೊಳ್ಳಲಿದೆ. ಬಜಪೆ ಪಟ್ಟಣ ಪಂಚಾಯತ್‌ ವ್ಯಾಪ್ತಿಗೊಳಪಡುವ ಈ ಶಾಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ಹೆಚ್ಚಳಗೊಂಡಿದೆ. ಆದರೆ ಶಾಲೆಯಲ್ಲಿ ಮಾತ್ರ ಮೂಲಸೌಲಭ್ಯಗಳು ಮರೀಚಿಕೆಯಾಗಿವೆ.

1ರಿಂದ 7ನೇ ತರಗತಿಯವರೆಗೆ ನಡೆಯುತ್ತಿದ್ದು, ಈ ಶಾಲೆಯಲ್ಲಿ 2019ರಲ್ಲಿ 60, 2020ರಲ್ಲಿ 85, 2021ರಲ್ಲಿ 105 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ.

ಈ ಸಾಲಿನಲ್ಲಿ ಒಟ್ಟು 33 ವಿದ್ಯಾರ್ಥಿಗಳು 1ನೇ ತರಗತಿಗೆ ದಾಖಲಾಗಿದ್ದಾರೆ. 2019ರಲ್ಲಿ ಹಳೆ ವಿದ್ಯಾರ್ಥಿಗಳು, ಎಸ್‌ಡಿಎಂಸಿ ಸದಸ್ಯರು, ಹೆತ್ತವರ ದಾನಿಗಳ ಸಹಕಾರದಿಂದ ಇಲ್ಲಿ ಆಂಗ್ಲ ಮಾಧ್ಯಮವನ್ನು ಆರಂಭಿಸಲಾಗಿದ್ದು, ಪ್ರಸುತ್ತ ಎಲ್‌ಕೆಜಿ ಯಲ್ಲಿ 35, ಯುಕೆಜಿಯಲ್ಲಿ 33 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ.

ಮೂರು ಶಿಕ್ಷಕರು ಬೇಕು:

ಈಗ ಶಾಲೆಯಲ್ಲಿ ಮೂವರು ಶಿಕ್ಷಕರು ಮಾತ್ರ ಕಾರ್ಯನಿರ್ವಹಿಸುತ್ತಿದ್ದು, ಇನ್ನು ಮೂರು ಹುದ್ದೆ ಖಾಲಿ ಉಳಿದಿವೆ. ಗಣಿತ, ವಿಜ್ಞಾನ, ಇಂಗ್ಲಿಷ್‌ ಭಾಷೆ ಹಾಗೂ ಸಹ ಶಿಕ್ಷಕ ಒಟ್ಟು 3 ಹುದ್ದೆ ಖಾಲಿ ಇವೆ. ಇದರಿಂದ ಇಲ್ಲಿ ಶಿಕ್ಷಕರ ನೇಮಕ ಅಗತ್ಯವಿದೆ. 1ನೇ ತರಗತಿಯ ವಿದ್ಯಾರ್ಥಿಗಳಿಗೆ ಕನ್ನಡ ಜತೆ ಆಂಗ್ಲ ಮಾಧ್ಯಮ ತರಗತಿಗಳು ನಡೆಯುತ್ತಿವೆ.

ಹೊಸ ಶಾಲಾಕಟ್ಟಡ ಅಗತ್ಯ:

ಹಳೆಯ ಕಟ್ಟಡದಲ್ಲಿ ತರಗತಿಗಳು ನಡೆಯಿತ್ತಿವೆ. ಇಲ್ಲಿ ಹೊಸ ಶಾಲಾ ಕಟ್ಟಡ ನಿರ್ಮಾಣ ಅಗತ್ಯವಿದೆ. ಕನ್ನಡ ಹಾಗೂ ಆಂಗ್ಲ ಮಾಧ್ಯಮ ತರಗತಿಗಳು ನಡೆಯುದರಿಂದ ಹೆಚ್ಚು ತರಗತಿ ಕೊಠಡಿಗಳ ಅವಶ್ಯವಿದೆ. ಶಿಕ್ಷಕರ ಕೊಠಡಿಗಳು ಇಲ್ಲ, ಸ್ಮಾರ್ಟ್‌ ತರಗತಿಗಳು ನಡೆಸಲು ಕೊಠಡಿಗಳಿಲ್ಲ. ಹೆಚ್ಚಿನ ಪೀಠೊಪಕರಣಗಳ ಅವಶ್ಯವಿದೆ. ಕುಡಿಯುವ ನೀರು ಮಳವೂರು ವೆಂಟಡ್‌ ಡ್ಯಾಂನಿಂದ ಸರಬರಾಜು ಆಗುತ್ತಿದೆ. ಆದರೂ ನೀರಿನ ಕೊರತೆ ಇದೆ.

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಎಂಎಸ್‌ಈಝಡ್‌, ಎಂಆರ್‌ಪಿಎಲ್‌ ಸಂಸ್ಥೆಗಳ ಸಮೀಪದಲ್ಲಿಯೇ ಈ ಶಾಲೆ ಇದೆ. ಈ ಶಾಲೆಗಳ ಬಗ್ಗೆ ಸಂಸ್ಥೆಗಳು ಕಾಳಜಿ ವಹಿಸಿ, ಹೆಚ್ಚು ಒತ್ತನ್ನು ನೀಡಬೇಕಿದೆ. ಶಾಲಾ ಪರಿಸರ ಚೆನ್ನಾಗಿದ್ದಾಗ ಹೆತ್ತವರು ಈ ಬಗ್ಗೆ ಗಮನ ನೀಡುತ್ತಾರೆ. ಆಗ ಹೆಚ್ಚು ವಿದ್ಯಾರ್ಥಿಗಳು ಬರುತ್ತಾರೆ. ವಿದ್ಯಾರ್ಥಿಗಳ ಕೌಶಲಾಭಿವೃದ್ಧಿಗೆ ಆದ್ಯತೆ ನೀಡಬೇಕು. ತಂತ್ರಜ್ಞಾನ ಶಿಕ್ಷಣ, ಶಾರೀರಿಕ ಬೆಳವಣಿಗೆ ಜಿಮ್‌ ಅಗತ್ಯವಿದೆ. ಚಂದ್ರಕಲಾ ಎ., ಶಾಲಾ ಮುಖ್ಯ ಶಿಕ್ಷಕಿ, ದ.ಕ.ಜಿ.ಪಂ.ಹಿ.ಪ್ರಾಥಮಿಕ ಶಾಲೆ, ಕರಂಬಾರು.

 

ಸುಬ್ರಾಯ ನಾಯಕ್‌, ಎಕ್ಕಾರು

ಟಾಪ್ ನ್ಯೂಸ್

Get rid of hate mongers, vote for Congress: Sonia gandhi

Election; ದ್ವೇಷದ ಪ್ರತಿಪಾದಕರನ್ನು ತೊಲಗಿಸಿ, ಕಾಂಗ್ರೆಸ್‌ಗೆ ಮತ ನೀಡಿ: ಸೋನಿಯಾ ಗಾಂಧಿ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

16-

ಮೂಡುಬಿದಿರೆ: ಹಿಟಾಚಿಗಳ ಬ್ಯಾಟರಿ ಕಳವು

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Get rid of hate mongers, vote for Congress: Sonia gandhi

Election; ದ್ವೇಷದ ಪ್ರತಿಪಾದಕರನ್ನು ತೊಲಗಿಸಿ, ಕಾಂಗ್ರೆಸ್‌ಗೆ ಮತ ನೀಡಿ: ಸೋನಿಯಾ ಗಾಂಧಿ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.