ವಿವಾಹಿತ ಗ್ರಾಮ ಲೆಕ್ಕಿಗನೊಂದಿಗೆ ಮದುವೆಯಾದ ತಹಶಿಲ್ದಾರ್: ಜಿಲ್ಲಾಧಿಕಾರಿಯಿಂದ ನೋಟಿಸ್
Team Udayavani, Sep 21, 2021, 1:32 PM IST
ಚಿಕ್ಕಮಗಳೂರು: ವಿವಾಹಿತನೊಂದಿಗೆ ರಿಜಿಸ್ಟರ್ ವಿವಾಹವಾದ ಎನ್.ಆರ್.ಪುರ ತಹಶಿಲ್ದಾರ್ ಗೀತಾಗೆ ಜಿಲ್ಲಾಧಿಕಾರಿ ನೋಟಿಸ್ ಕಳುಹಿಸಿದ ಘಟನೆ ನಡೆದಿದೆ.
ಈಗಾಗಲೇ ವಿವಾಹವಾಗಿದ್ದ ಗ್ರಾಮ ಲೆಕ್ಕಿಗ ಶ್ರೀನಿಧಿ ಎಂಬವರೊಂದಿಗೆ ತಹಶೀಲ್ದಾರ್ ಗೀತಾ ರಿಜಿಸ್ಟರ್ ವಿವಾಹವಾಗಿದ್ದರು. ಇದರಿಂದಾಗಿ ಶ್ರೀನಿಧಿ ಪತ್ನಿ ಜಿಲ್ಲಾಧಿಕಾರಿಗೆ ದೂರು ನೀಡಿದ್ದರು.
ತಹಶೀಲ್ದಾರ್ ಗೀತಾ ಅವರು ಈಗಾಗಲೇ ಪತಿಯಿಂದ ವಿಚ್ಛೇದನ ಪಡೆದಿದ್ದಾರೆ. ಆದರೆ ಗ್ರಾಮ ಲೆಕ್ಕಿಗ ಶ್ರೀನಿಧಿ ಪತ್ನಿಯಿಂದ ವಿಚ್ಛೇದನ ಪಡೆದಿಲ್ಲ. ಇವರಿಬ್ಬರು ಜುಲೈ 19 ರಂದು ಎನ್.ಆರ್.ಪುರದಲ್ಲಿ ರಿಜಿಸ್ಟರ್ ವಿವಾಹವಾಗಿದ್ದರು.
ಇದನ್ನೂ ಓದಿ:ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಜೈಲಿನಿಂದ ಬಿಡುಗಡೆ
ಮದುವೆ ವೇಳೆ ತಹಶೀಲ್ದಾರ್ ಗೀತಾ ತಾನು ಅವಿವಾಹಿತೆ ಎಂದು ದಾಖಲೆ ತೋರಿಸಿದ್ದರು. ಆದರೆ ಶ್ರೀನಿಧಿ ಪತ್ನಿ ದೂರಿನ ಹಿನ್ನೆಲೆ ತಹಶೀಲ್ದಾರ್ ಗೀತಾಗೆ ಜಿಲ್ಲಾಧಿಕಾರಿಯವರು ನೋಟೀಸ್ ನೀಡಿದ್ದಾರೆ. 7 ದಿನಗಳ ಒಳಗೆ ಉತ್ತರ ನೀಡುವಂತೆ ನೋಟೀಸ್ ಜಾರಿ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ