ದಸರಾ ಉದ್ಘಾಟನೆ: ಸಾಲುಮರದ ತಿಮ್ಮಕ್ಕನ ಆಯ್ಕೆಗೆ ಸಾಮಾಜಿಕ ಜಾಲತಾಣ ಅಭಿಯಾನ
ದಸರಾ ಉದ್ಘಾಟಕರನ್ನಾಗಿ ಆಯ್ಕೆ ಮಾಡಿದರೆ ಹೇಗೆ ಎಂಬ ಅಭಿಯಾನಕ್ಕೆ ನೂರಾರು ಮಂದಿ ಬೆಂಬಲ
Team Udayavani, Sep 21, 2021, 3:05 PM IST
ಮೈಸೂರು: ನಾಡಹಬ್ಬ ಮೈಸೂರು ದಸರಾ ಉತ್ಸವಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಕೋವಿಡ್ ಹಿನ್ನೆಲೆಯಲ್ಲಿ ಸರಳ ದಸರಾ ಆಚರಿಸಲು ಸರ್ಕಾರ ನಿರ್ಧರಿಸಿದೆ. ಏತನ್ಮಧ್ಯೆ ಈ ಬಾರಿಯ ದಸರಾ ಉದ್ಘಾಟಕರಾಗಿ ಪರಿಸರವಾದಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶತಾಯುಷಿ ಸಾಲುಮರದ ತಿಮ್ಮಕ್ಕ ಅವರನ್ನು ಆಯ್ಕೆ ಮಾಡುವ ಕುರಿತ ಸಾಮಾಜಿಕ ಜಾಲತಾಣ ಅಭಿಯಾನಕ್ಕೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಕಳೆದ ವರ್ಷ ಮೈಸೂರು ದಸರಾವನ್ನು ಜಯದೇವ ಆಸ್ಪತ್ರೆ ಮುಖ್ಯಸ್ಥರಾದ ಡಾ.ಸಿ.ಎನ್.ಮಂಜುನಾಥ್ ಅವರು ನೆರವೇರಿಸಿದ್ದರು. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಸೂಚನೆ ಮೇರೆಗೆ ಡಾ.ಮಂಜುನಾಥ್ ಅವರ ಆಯ್ಕೆ ನಡೆದಿತ್ತು. ಈ ಬಾರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಸರಾ ಉದ್ಘಾಟಕರ ನೇಮಕದ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಾಲುಮರದ ತಿಮ್ಮಕ್ಕ ಅವರನ್ನು ಈ ಬಾರಿ ದಸರಾ ಉದ್ಘಾಟಕರನ್ನಾಗಿ ಆಯ್ಕೆ ಮಾಡಿದರೆ ಹೇಗೆ ಎಂಬ ಅಭಿಯಾನಕ್ಕೆ ಸಾವಿರಾರು ಮಂದಿ ಬೆಂಬಲಿಸಿ ಕಮೆಂಟ್ ಮಾಡಿದ್ದು, ಅದರಲ್ಲಿ ಆಯ್ದ ಕೆಲವು ಕಮೆಂಟ್ ಗಳು ಇಲ್ಲಿವೆ…
“ಮರಗಳನ್ನು ಹೆತ್ತ ಮಕ್ಕಳಂತೆ ಕಂಡ ಮಹಾತಾಯಿ ನಮ್ಮ ಸಾಲುಮರದ ತಿಮ್ಮಕ್ಕನವ್ರು. ಇವರು ನಮ್ಮ ನಾಡಹಬ್ಬ ದಸರಾ ಉದ್ಘಾಟನೆ ಮಾಡಿದ್ರೆ. ಅದರ ಘಟತೆ ಇನ್ನೂ ಇಮ್ಮಡಿಯಾಗುತ್ತೆ. ಅರ್ಹ ವ್ಯಕ್ತಿ” ಎಂಬುದಾಗಿ ರಾಜಶ್ರೀ ಢವಳೆ ಎಂಬವರು ಫೇಸ್ ಬುಕ್ ಕಮೆಂಟ್ ನಲ್ಲಿ ತಿಳಿಸಿದ್ದಾರೆ.
‘ಅರ್ಹ ಮತ್ತು ಸೂಕ್ತ ವ್ಯಕ್ತಿ. ದಸರಾ ಹಬ್ಬಕ್ಕೂ ಮೆರಗು” ಎಂದು ಮತ್ತೊಬ್ಬ ಓದುಗರಾದ ಶಿವಕುಮಾರ್ ದೊಡ್ಮನಿ ತಿಳಿಸಿದ್ದಾರೆ. ಪರಿಸರ ಬಗ್ಗೆ ಅಪಾರ ಗೌರವವಿದೆ. ಹಾಗೂ ಅವರ ಕೊಡುಗೆ ಕರ್ನಾಟಕಕ್ಕೆ ಅಪಾರ. ನಿಜವಾದ ದೇವರು ಅವರಿಂದ ಉದ್ಘಾಟನೆ ಮಾಡಿ.ನಾಡಪ್ರೇಮ, ದೇಶಪ್ರೇಮ”ಕ್ಕೆ ಇವರೇ ಸಾಟಿ” ಎಂದು ಆನಂದ್ ಎಚ್ ಆರ್ ಎಂಬ ಓದುಗ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ಬಾರಿ ದಸರಾ ಮಹೋತ್ಸವಕ್ಕೆ ಅಕ್ಟೋಬರ್ 7ರಂದು ಚಾಮುಂಡಿಬೆಟ್ಟದಲ್ಲಿ ವಿಧ್ಯುಕ್ತವಾಗಿ ಚಾಲನೆ ಸಿಗಲಿದೆ. ಅಕ್ಟೋಬರ್ 15ರಂದು ವಿಜಯದಶಮಿ ದಿನ ಸಂಜೆ 4.36 ರಿಂದ 4.46ರವರೆಗೆ ನಂದಿಧ್ವಜ ಪೂಜೆ ನಡಯಲಿದೆ. 5ರಿಂದ 5.30ರೊಳಗೆ ಜಂಬೂ ಸವಾರಿ ನಡೆಯಲಿದ್ದು, ಅರಮನೆ ಆವರಣಕ್ಕೆ ಮಾತ್ರ ಸೀಮಿತವಾಗಿರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
MUST WATCH
ಹೊಸ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?