ಎಲೆಮಚ್ಚೆ ರೋಗ; ಬೆಲೆ ಕಳೆದುಕೊಂಡ ಉಳ್ಳಾಗಡ್ಡಿ

ಬಸವನಬಾಗೇವಾಡಿ ಹಾಗೂ ಕೂಡಗಿ ಭಾಗದಲ್ಲೂ ಈರುಳ್ಳಿ ಮಾರುಕಟ್ಟೆ ನಡೆಯುತ್ತದೆ.

Team Udayavani, Sep 21, 2021, 6:13 PM IST

ಎಲೆಮಚ್ಚೆ ರೋಗ; ಬೆಲೆ ಕಳೆದುಕೊಂಡ ಉಳ್ಳಾಗಡ್ಡಿ

ವಿಜಯಪುರ: ಕಳೆದ ನಾಲ್ಕು ತಿಂಗಳಿಂದ ಮಾರುಕಟ್ಟೆಯಲ್ಲಿ ಸಾಮಾನ್ಯ ಬೆಲೆ ಹೊಂದಿದ್ದ ಈರುಳ್ಳಿ ಪ್ರಕೃತಿ ವೈಪರಿತ್ಯದ ಪರಿಣಾಮ ಇದೀಗ ಏಕಾಏಕಿ ಬೆಲೆ ಕುಸಿಯುವಂತೆ ಮಾಡಿದೆ. ಅತಿವೃಷ್ಟಿ ಹಾಗೂ ವಾತಾವರಣ ಬದಲಾವಣೆಯ ಕಾರಣದಿಂದ ತಿರುಗುಣಿ, ಎಲೆಮಚ್ಚೆ ರೋಗಕ್ಕೆ ಸಿಲುಕಿದ್ದು, ಗಾತ್ರದ ಬೆಳವಣಿಗೆಯಲ್ಲಿ ಕುಂಠಿತವಾಗಿದೆ. ವಿಜ್ಞಾನಿಗಳು ಕೂಡ ಅಧ್ಯಯನ ನಡೆಸಿದ್ದು, ಪರಿಹಾರ ಸೂಚಿದ್ದಾರೆ.

ವಿಜಯಪುರ ಜಿಲ್ಲೆಯಲ್ಲಿ ಸಾಮಾನ್ಯವಾಗಿ 20-24 ಸಾವಿರ ಹೆಕ್ಟೇರ್‌ ಪ್ರದೇಶದ ವರೆಗೆ ಈರುಳ್ಳಿ ಬೆಳೆಯಲಾಗುತ್ತದೆ. ಈ ಬಾರಿ 33 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಈರುಳ್ಳಿ ಬೆಳೆಯಲಾಗಿದೆ. ಇಂಡಿ, ಸಿಂದಗಿ, ಮುದ್ದೇಬಿಹಾಳ, ವಿಜಯಪುರ ತಾಲೂಕಿನಲ್ಲಿ ಹೆಚ್ಚಿನ ಈರುಳ್ಳಿ ಬೆಳೆಯಲಾಗುತ್ತದೆ.

ಆದರೆ ಬಸವನಬಾಗೇವಾಡಿ, ಕೊಲ್ಹಾರ, ನಿಡಗುಂದಿ ಭಾಗದ ಹಳ್ಳಿಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹಾಗೂ ಗುಣಮಟ್ಟದಲ್ಲಿ ಬೆಳೆಯುವ ಈರುಳ್ಳಿ ಹೆಚ್ಚು ಗರಿಷ್ಟ ಗುಣಮಟ್ಟ ಹೊಂದಿದೆ. ಪರಿಣಾಮ ಜಿಲ್ಲೆಯಿಂದ ಸಗಟು ವ್ಯಾಪಾರಿಗಳ ಮೂಲಕ ತೆಲಂಗಾಣ, ಸೀಮಾಂಧ್ರ, ಕೇಳರ, ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಿಗೆ ವಿಜಯಪುರ ಜಿಲ್ಲೆಯ ರವಾನೆ ಆಗುತ್ತದೆ. ಆದರೆ ಅತಿವೃಷ್ಟಿ, ವಾತಾವರಣದಲ್ಲಿ ಕಂಡುಬಂದ ದಿಢೀರ ಬದಲಾವಣೆಯಿಂದಾಗಿ ಗಾತ್ರ ಹಾಗೂ ಗುಣಮಟ್ಟದಲ್ಲಿ ಕುಸಿತವಾಗಿರುವ ಈರುಳ್ಳಿಯನ್ನು ಇದೀಗ ಮಾರುಕಟ್ಟೆಯಲ್ಲಿ ಕೇಳುವವರೇ ಇಲ್ಲವಾಗಿದೆ.

ಜಿಲ್ಲೆಯಲ್ಲಿ ವಿಜಯಪುರ ಎಪಿಎಂಸಿ ಮಾರುಕಟ್ಟೆಯಲ್ಲಿ ರವಿವಾರ ಹಾಗೂ ಬುಧವಾರ ಎರಡು ದಿನ ಈರುಳ್ಳಿ ಮಾರುಕಟ್ಟೆ ನಡೆಯುತ್ತದೆ. ಕಳೆದ ಮೇ ತಿಂಗಳಿಂದ ಆಗಸ್ಟವರೆಗೆ ವಿಜಯಪುರ ಮಾರುಕಟ್ಟೆಗೆ 36,625 ಕ್ವಿಂಟಲ್‌ ಈರುಳ್ಳಿ ಆವಕವಾಗಿದೆ. ಈ ಅವ ಕಯಲ್ಲಿ ಗುಣಮಟ್ಟಕ್ಕೆ ತಕ್ಕಂತೆ 200-2000 ರೂ. ಬೆಲೆ ಸಿಕ್ಕಿದೆ.

ಬಸವನ ಬಾಗೇವಾಡಿ ಹಾಗೂ ಕೂಡಗಿ ಭಾಗದಲ್ಲೂ ಈರುಳ್ಳಿ ಮಾರುಕಟ್ಟೆ ನಡೆಯುತ್ತದೆ. ಆದರೆ ಈಚೆಗೆ ಪ್ರಕೃತಿ ವಿಕೋಪದಿಂದಾಗಿ ಈರುಳ್ಳಿ ಗುಣಮಟ್ಟ ಕಳೆದುಕೊಂಡಿದ್ದು, ಮಾರುಕಟ್ಟೆಯಲ್ಲಿ ಬೆಲೆಯೇ ಇಲ್ಲವಾಗಿದೆ. ಇದರಿಂದಾಗಿ ಜಿಲ್ಲೆಯ ರೈತರು ವಿಜಯಪುರ ಮಾರುಕಟ್ಟೆ ಹೊರತಾಗಿ ಹೊರಗಿನ ಮಾರುಕಟ್ಟೆಗೆ ಕೊಂಡೊಯ್ದ ಈರುಳ್ಳಿಗೆ ಸಾಗಾಣಿಕೆ ವೆಚ್ಚವೂ ಸಿಗದಂತೆ ಬೆಲೆ ಕುಸಿತ ಅನುಭವಿಸಿದ್ದಾರೆ.

ಈ ಮಧ್ಯೆ ಜಿಲ್ಲೆಯ ಈರುಳ್ಳಿ ಬೆಳೆಯಲ್ಲಿ ಕಾಣಿಸಿಕೊಂಡ ರೋಗದ ಕುರಿತು ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯದ ರೋಗತಜ್ಞರಾದ ರಮೇಶ ರಾಠೊಡ, ಕೀಟತಜ್ಞರಾದ ಸತ್ಯನಾರಾಯಣ ನೇತೃತ್ವದಲ್ಲಿ ಸೆ. 17ರಂದು ತಳೆವಾಡ, ಬಳೂತಿ ಕೊಲ್ಹಾರ ಭಾಗದ ರೈತರ ಈರುಳ್ಳಿ ತೋಟಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿದ್ದಾರೆ. ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಎಸ್‌.ಎಂ. ಬರಗಿಮಠ, ಎಸ್‌ಎಡಿಎಚ್‌ಒ ಸಿ.ಬಿ. ಪಾಟೀಲ, ಪ್ರಗತಿಪರ ರೈತರಾದ ನಂದಬಸಪ್ಪ ಚೌಧರಿ, ಯಶವಂತ ದಳವಾಯಿ, ಪುಂಡಲೀಕ ಛಬ್ಬಿ ಅವರ ಜೊತೆ ಭೇಟಿ ನೀಡಿ, ರೈತರೊಂದಿಗೆ ಚರ್ಚಿಸಿ, ಈ ಹಂತದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತೂ ಸಲಹೆ ನೀಡಿದ್ದಾರೆ.

ಜಿಲ್ಲೆಯ ಈರುಳ್ಳಿಗೆ ಹೊರ ರಾಜ್ಯದಲ್ಲಿ ಭಾರಿ ಬೇಡಿಕೆ ಇದೆ. ಆದರೆ ಈ ಬಾರಿ ಗಾತ್ರ, ಗುಣಮಟ್ಟದಲ್ಲಿ ಕುಸಿತದಿಂದಾಗಿ ಸಹಜವಾಗಿ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಕುಸಿತವಾಗಿದೆ. ಖರೀದಿಸಿದ ಈರುಳ್ಳಿ ಕೂಡ ಕೊಳೆಯುತ್ತಿದ್ದು, ನಮಗೂ ನಷ್ಟವಾಗುತ್ತಿದೆ.
ಗುರು ಶಿರೋಳಕರ, ಈರುಳ್ಳಿ ಸಗಟು
ವ್ಯಾಪಾರಿ, ಎಪಿಎಂಸಿ, ವಿಜಯಪುರ

ರೈತರು ಈರುಳ್ಳಿ ರೋಗದ ಕುರಿತು ನಮ್ಮ ಗಮನಕ್ಕೆ ತರುತ್ತಲೇ ವಿಜ್ಞಾನಿಗಳನ್ನು ಕರೆಸಿ ಅಧ್ಯಯನ ಮಾಡಿಸಿದ್ದೇವೆ. ಅಲ್ಲದೇ ಪ್ರಕೃತಿ ವೈಪರಿತ್ಯದಿಂದಾಗಿ ಕಂಡುಬಂದಿರುವ ಈ ರೋಗದ ಕುರಿತು ರೈತರು ಕೈಗೊಳ್ಳಬೇಕಾದ ಸಲಹೆಗಳನ್ನೂ ನೀಡಿದ್ದೇವೆ.
ಎಸ್‌.ಎಂ.ಬರಗೀಮಠ
ಉಪ ನಿರ್ದೇಶಕರು, ತೋಟಗಾರಿಕೆ ಇಲಾಖೆ

ಜಿ.ಎಸ್‌. ಕಮತರ

ಟಾಪ್ ನ್ಯೂಸ್

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

1-wewewqe

Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

Karnataka Lok Sabha Poll: ಮೇ 7ಕ್ಕೆ 2ನೇ ಹಂತದ ಮತದಾನ: ಮತ್ತೆ ಬಸ್‌ ದರ ದುಪ್ಪಟ್ಟು

Karnataka Lok Sabha Poll: ಮೇ 7ಕ್ಕೆ 2ನೇ ಹಂತದ ಮತದಾನ: ಮತ್ತೆ ಬಸ್‌ ದರ ದುಪ್ಪಟ್ಟು

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.