ಮಹಿಳೆಯ ಹೊಟ್ಟೆಯಲ್ಲಿತ್ತು ಬರೋಬ್ಬರಿ ಒಂದು ಮುಕ್ಕಾಲು ಕಿಲೋ.ಗ್ರಾಂ ಗಡ್ಡೆ!


Team Udayavani, Sep 22, 2021, 3:12 PM IST

dandeli news

ದಾಂಡೇಲಿ : ಮಹಿಳೆಯೊಬ್ಬರ ಹೊಟ್ಟೆಯೊಳಗಿದ್ದ ಒಂದು ಕೇಜಿ ಏಳುನೂರ ಐವತ್ತು ಗ್ರಾಂ ತೂಕದ ಗಡ್ಡೆಯನ್ನು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡಿ ಪ್ರಾಣ ಉಳಿಸಿದ ಘಟನೆ ನಗರದ ಖ್ಯಾತ ಆಸ್ಪತ್ರೆಯಾದ ಪಾಟೀಲ ಆಸ್ಪತ್ರೆಯಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ.

ಹಳಿಯಾಳ ತಾಲೂಕಿನ ಬಿ.ಕೆ.ಹಳ್ಳಿಯ 45 ವರ್ಷ ವಯಸ್ಸಿನ ಸರಸ್ವತಿ ಬೇಕವಾಡಕರ ಎಂಬವವರೆ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ಮಹಿಳೆಯಾಗಿದ್ದಾರೆ. ಕಳೆದ ಒಂದು ತಿಂಗಳ ಹಿಂದೆ ಹೊಟ್ಟೆ ನೋವೆಂದು ಸರಸ್ವತಿ ಬೇಕವಾಡಕರ ಅವರು ನಗರದ ಪಾಟೀಲ ಆಸ್ಪತ್ರೆಗೆ ಬಂದಿದ್ದರು. ಆಸ್ಪತ್ರೆಯ ರೂವಾರಿಗಳು ಹಾಗೂ ಹೆಸರಾಂತ ವೈದ್ಯರಾದ ಡಾ: ಮೋಹನ ಪಾಟೀಲ ಅವರು ಸರಸ್ವತಿ ಬೇಕವಾಡಕರ ಅವರ ಆರೋಗ್ಯವನ್ನು ಪರಿಶೀಲಿಸಿ, ಗಡ್ಡೆಯಿರುವುದನ್ನು ತಿಳಿಸಿ, ಒಂದು ತಿಂಗಳ ಬಳಿಕ ಶಸ್ತ್ರಚಿಕಿತ್ಸೆಯ ಮೂಲಕ ಗಡ್ಡೆ ತೆಗೆಯೋಣ ಎಂದು ಹೇಳಿ, ಅಲ್ಲಿವರೆಗೆ ರಕ್ತ ಹೆಚ್ಚಾಗಕಲು ಮತ್ತು ಆರೋಗ್ಯ ಸುಧಾರಣೆಗಾಗಿ ಅಗತ್ಯ ಔಷಧಿಗಳನ್ನು ಹಾಗೂ ಚಿಕಿತ್ಸೆಯನ್ನು ನೀಡಿದ್ದರು.

ಒಂದು ತಿಂಗಳ ಬಳಿಕ ಇದೀಗ ಮಂಗಳವಾರ ಶಸ್ತ್ರಚಿಕಿತ್ಸೆಗಾಗಿ ಸರಸ್ವತಿ ಬೇಕವಾಡಕರ ಅವರು ಪಾಟೀಲ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಬುಧವಾರ ಬೆಳಗ್ಗೆ ಎಂದಿನಿಂತೆ ಡಾ: ಮೋಹನ ಪಾಟೀಲ ಅವರು ಅವರ ತಂಡದ ಜೊತೆ ಶಸ್ತ್ರಚಿಕಿತ್ಸೆ ಕಾರ್ಯಕ್ಕೆ ಮುಂದಾದರು. ಆರಂಭದಲ್ಲಿ ನಗರದ ಖ್ಯಾತ ಅರವಳಿಕೆ ತಜ್ಞರಾದ ಡಾ:ಸೈಯದ್ ಅವರು ಅರವಳಿಕೆ ಚಿಕಿತ್ಸೆಯನ್ನು ನೀಡಿದರು. ಇದಾದ ಬಳಿಕ ಸ್ವಲ್ಪ ಹೊತ್ತಿನಲ್ಲೆ ಡಾ: ಮೋಹನ್ ಪಾಟೀಲ ಅವರು ಶಸ್ತ್ರಚಿಕಿತ್ಸೆಯನ್ನು ಆರಂಭಿಸಿದರು. ಶಸ್ತ್ರಚಿಕಿತ್ಸೆಯ ಸಂದರ್ಭದಲ್ಲಿ ಸರಸ್ವತಿ ಬೇಕವಾಡಕರ ಅವರ ಹೊಟ್ಟೆಯೊಗಿದ್ದ ಒಂದು ಕೇಜಿ ಏಳುನೂರ ಐವತ್ತು ಗ್ರಾಂ ತೂಕದ ಪೈಬ್ರಾಯಿಡ್ ಗಡ್ಡೆಯನ್ನು ಹೊರತೆಗದು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡಿ ಮುಂದಾಗಬಹುದಾಗಿದ್ದ ಪ್ರಾಣಾಪಾಯವನ್ನು ತಪ್ಪಿಸಿದರು.

ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿದ ಬಳಿಕ ಇನ್ನೊಂದು ವಾರ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ನೀಡಿ, ಆನಂತರದಲ್ಲಿ ಸರಸ್ವತಿ ಬೇಕವಾಡಕರ ಅವರನ್ನು ಅವರ ಮನೆಗೆ ಕಳುಹಿಸಲಾಗುತ್ತದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಶಸ್ತಚಿಕಿತ್ಸೆಗೆ ಡಾ. ಮೋಹನ ಪಾಟೀಲ ಅವರ ಜೊತೆ ಡಾ. ಸೈಯದ್ ಹಾಗೂ ಸಹಾಯಕರಾಗಿ ಈಶ್ವರ ಪೂಜಾರಿ ಮತ್ತು ನರ್ಸ್ ಹೃತಿಕಾ ಸಹಕರಿಸಿದರು. ಡಾ. ಮೋಹನ ಪಾಟೀಲ ಹಾಗೂ ಅವರ ತಂಡದ ಕಾರ್ಯಕ್ಕೆ ಸರಸ್ವತಿ ಬೇಕವಾಡಕರ ಅವರ ಪರಿವಾರದವರು ಮೆಚ್ಚುಗೆ ವ್ಯಕ್ತಪಡಿಸಿ, ಕೃತಜ್ಞತೆ ಸಲ್ಲಿಸಿದ್ದಾರೆ.

ಇದನ್ನೂ ಓದಿ:ರಾಜ್ಯದಲ್ಲೂ ದಲಿತ ಸಿಎಂ ಕೂಗು ಜೀವಂತ

ಕಳೆದ ಹಲವಾರು ವರ್ಷಗಳಿಂದ ಪಾಟೀಲ ಆಸ್ಪತ್ರೆಯನ್ನು ನಡೆಸಿಕೊಂಡು ಬರುತ್ತಿರುವ ಡಾ. ಮೋಹನ ಪಾಟೀಲ ಅವರು ಈವರೇಗೆ ಸಾಕಷ್ಟು ಇಂತಹ ಶಸ್ತ್ರಚಿಕಿತ್ಸೆಯನ್ನು ಮಾಡಿ ಅನೇಕರ ಪ್ರಾಣವನ್ನು ಉಳಿಸಿದ ಖ್ಯಾತಿಯನ್ನು ಹೊಂದಿದ್ದಾರೆ. ದಾಂಡೇಲಿ, ಹಳಿಯಾಳ, ಜೋಯಿಡಾ ಮಾತ್ರವಲ್ಲದೇ ಅಳ್ನಾವರ, ಬಿಡಿ, ಖಾನಪುರ, ಕಿರವತ್ತಿ, ನಿಗಧಿ, ಯಲ್ಲಾಪುರ ಕಡೆಗಳಿಂದಲೂ ಡಾ: ಮೋಹನ ಪಾಟೀಲರವರ ಬಳಿ ಚಿಕಿತ್ಸೆಗೆ ಜನ ಬರುತ್ತಿರುವುದು ಇವರ ಯಶಸ್ವಿ ಆರೋಗ್ಯ ಚಿಕಿತ್ಸೆಗೆ ಸಾಕ್ಷಿ ಎಂದರೆ ಅತಿಶಯೋಕ್ತಿ ಎನಿಸದು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.