ಉಗ್ರ ಎಂದು ತಪ್ಪು ತಿಳಿದು ಕಾಶ್ಮೀರ ದೇವಾಲಯದಲ್ಲಿ ಕಾನ್ಸ್ ಟೇಬಲ್ ಗೆ ಗುಂಡಿಟ್ಟು ಹತ್ಯೆ
ಈ ಸಂದರ್ಭದಲ್ಲಿ ಇದೊಂದು ದಾಳಿ ಯತ್ನ ಎಂದು ಭಾವಿಸಿದ ಭದ್ರತಾ ಸಿಬಂದಿ ಗುಂಡಿನ ದಾಳಿ ನಡೆಸಿದ್ದರು.
Team Udayavani, Sep 22, 2021, 3:19 PM IST
ಕಾಶ್ಮೀರ: ದೇವಸ್ಥಾನದ ಒಳಗೆ ಪ್ರವೇಶಿಸಲು ಯತ್ನಿಸಿದ್ದ ಪೊಲೀಸ್ ಕಾನ್ಸ್ ಟೇಬಲ್ ಅನ್ನು ದೇಶ ವಿರೋಧಿ ಆಗಂತುಕ ಎಂದು ತಪ್ಪಾಗಿ ಭಾವಿಸಿ ಭದ್ರತಾ ಸಿಬಂದಿ ನಡೆಸಿದ ಗುಂಡಿನ ದಾಳಿಗೆ ಸಾವನ್ನಪ್ಪಿರುವ ಘಟನೆ ಕಾಶ್ಮೀರದ ದೇವಸ್ಥಾನದಲ್ಲಿ ನಡೆದಿದೆ.
ಇದನ್ನೂ ಓದಿ:1.2 ಕೋಟಿ ವೈದ್ಯಕೀಯ ಸಲಹೆ; ಟೆಲಿಮೆಡಿಸಿನ್ ಬಳಕೆ ಕರ್ನಾಟಕ ನಂ.2
ಮೃತ ಕಾನ್ಸ್ ಟೇಬಲ್ ಅನ್ನು ಅಜಯ್ ಧಾರ್ ಎಂದು ಗುರುತಿಸಲಾಗಿದ್ದು, ಇವರು ಹಂದ್ವಾರಾ ಲಂಗೇಟ್ ನಿವಾಸಿ. ಇದೊಂದು ದುರದೃಷ್ಟಕರ ಘಟನೆ ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಗಳವಾರ(ಸೆ.21) ರಾತ್ರಿ ಕಾನ್ಸ್ ಟೇಬಲ್ ಧಾರ್ ಅವರು ದೇವಸ್ಥಾನದ ಬಾಗಿಲನ್ನು ಬಡಿದು, ಒಳ ಹೋಗಲು ಪ್ರಯತ್ನಿಸಿದ್ದರು. ಈ ಸಂದರ್ಭದಲ್ಲಿ ಗಸ್ತು ತಿರುಗುತ್ತಿದ್ದ ಭದ್ರತಾ ಸಿಬಂದಿ ಮೊದಲು ಗಾಳಿಯಲ್ಲಿ ಗುಂಡು ಹಾರಿಸಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿ ವಿವರಿಸಿದ್ದಾರೆ.
ಗಾಳಿಯಲ್ಲಿ ಗುಂಡು ಹಾರಿಸಿದ ನಂತರವೂ ಕಾನ್ಸ್ ಟೇಬಲ್ ಧಾರ್ ಅವರು ತಮ್ಮ ಗುರುತನ್ನು ಬಹಿರಂಗಪಡಿಸದೇ ಬಾಗಿಲು ಬಡಿಯುವುದನ್ನು ಮುಂದುವರಿಸಿದ್ದರು. ಈ ಸಂದರ್ಭದಲ್ಲಿ ಇದೊಂದು ದಾಳಿ ಯತ್ನ ಎಂದು ಭಾವಿಸಿದ ಭದ್ರತಾ ಸಿಬಂದಿ ಗುಂಡಿನ ದಾಳಿ ನಡೆಸಿದ್ದರು. ನಿಜಕ್ಕೂ ಇದೊಂದು ಗುರುತನ್ನು ತಪ್ಪಾಗಿ ಪರಿಗಣಿಸಿದ ಘಟನೆಯಾಗಿದೆ ಎಂದು ಇನ್ಸ್ ಪೆಕ್ಟರ್ ಜನರಲ್ ಆಫ್ ಪೊಲೀಸ್ ವಿಜಯ್ ಕುಮಾರ್ ತಿಳಿಸಿದ್ದಾರೆ.
ಕಾಶ್ಮೀರದಲ್ಲಿನ ಬಹುತೇಕ ದೇವಸ್ಥಾನಗಳಿಗೆ ಪೊಲೀಸರ ಕಾವಲು ಇದ್ದು, ಕಾಶ್ಮೀರದಲ್ಲಿ ನಡೆಯುತ್ತಿರುವ ಸಂಶಯದ ಭದ್ರತಾ ಘಟನೆಗೆ ಇದು ಮತ್ತೊಂದು ಸೇರ್ಪಡೆಯಾಗಿದೆ ಎಂದು ವರದಿ ಹೇಳಿದೆ. ಈ ಹಿಂದೆಯೂ ಭದ್ರತಾ ಪಡೆ ಸಿಬಂದಿಗಳು ರಾತ್ರಿ ವೇಳೆ ತಪ್ಪು ತಿಳಿದು ನಾಗರಿಕರನ್ನು ಗುಂಡಿಟ್ಟು ಹತ್ಯೆಗೈದ ಪ್ರಕರಣಗಳು ಇದೆ ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ
Loksabha; ಮಂದಿರಕ್ಕೆ ಬಾಬರಿ ಲಾಕ್ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ
Lucknow; ಕೆಲಸಕ್ಕೆ ಬಾರದ ರಾಮ ಮಂದಿರ: ಎಸ್ಪಿ ನಾಯಕ ಯಾದವ್ ವಿವಾದ
Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ
Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್ ಗಾಂಧಿ
MUST WATCH
ಹೊಸ ಸೇರ್ಪಡೆ
Cryptocurrency ವೆಬ್ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ
IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು
Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ
Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ
IPL 2024; ಲಕ್ನೋ, ಹೈದ್ರಾಬಾದ್ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ