ಗುಂಡು ಕಲ್ಲು ಎತ್ತುವ ಕ್ರೀಡಾಪಟುಗಳ ಮನವಿಗೆ ಸ್ಪಂದಿಸಿದ ಕ್ರೀಡಾ ಸಚಿವ :ಮಾಸಾಶನ ಜಾರಿಗೆ ಆದೇಶ


Team Udayavani, Sep 22, 2021, 4:22 PM IST

ಗುಂಡು ಕಲ್ಲು ಎತ್ತುವ ಕ್ರೀಡಾಪಟುಗಳಿಂದ ಮಾಸಾಶನಕ್ಕೆ ಮನವಿ : ಮನವಿಗೆ ಸ್ಪಂದಿಸಿ ಕ್ರೀಡಾ ಸಚಿವ

ಬೆಂಗಳೂರು : ಗುಂಡು ಕಲ್ಲು ಎತ್ತುವ ಸ್ಪರ್ಧೆ ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಪ್ರಸಿದ್ಧಿಯಾಗಿದೆ. ಆದರೆ ಕ್ರೀಡಾಪಟುಗಳಿಗೆ ಮಾಸಾಶನ ಇಲ್ಲದ ಕಾರಣ ಯುವಜನತೆ ಈ ಕ್ರೀಡೆ ಬಗ್ಗೆ ಹೆಚ್ಚಿನ ಆಸಕ್ತಿ ತೋರಿಸುತ್ತಿಲ್ಲ. ಕ್ರೀಡೆ ನಶಿಸಿ ಹೋಗುವ ಸಾಧ್ಯತೆ ಇದೆ. ಆದ್ದರಿಂದ ಗುಂಡು ಕಲ್ಲು ಎತ್ತುವ ಕ್ರೀಡಾಪಟುಗಳಿಗೆ ಮಾಸಾಶನ ನೀಡುವಂತೆ ಬೃಹತ್‍ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಅವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಗುಂಡು ಕಲ್ಲು ಎತ್ತುವ ಕ್ರೀಡಾಪಟುಗಳ ಸಂಘದವರು ಸಚಿವ ಡಾ. ನಾರಾಯಣಗೌಡ ಅವರಿಗೆ ಮನವಿ ಸಲ್ಲಿಸಿದರು.

ಇಂದು ವಿಧಾನ ಸೌಧದಲ್ಲಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರನ್ನು ಭೇಟಿಯಾದ ಸಚಿವ ಮುರುಗೇಶ್ ನಿರಾಣಿ ಹಾಗೂ ಗುಂಡು ಕಲ್ಲು ಎತ್ತುವ ಕ್ರೀಡಾಪಟುಗಳ ಸಂಘದವರು, ಗುಂಡು ಕಲ್ಲು ಎತ್ತುವ ಕ್ರೀಡೆ ಹಾಗೂ ಕ್ರೀಡಾಪಟುಗಳ ಸಮಸ್ಯೆ ಬಗ್ಗೆ ಚರ್ಚಿಸಿದರು.

ಗುಂಡು ಕಲ್ಲು ಎತ್ತುವ ಸ್ಪರ್ಧೆಯನ್ನು ದಸರಾ ಹಬ್ಬದಲ್ಲಿಯೂ ಆಯೋಜಿಸಲಾಗುತ್ತದೆ. ಉತ್ತರ ಕರ್ನಾಟಕ ಭಾಗದಲ್ಲಿ ಹಬ್ಬ ಹಾಗೂ ವಿಶೇಷ ಸಂದರ್ಭದಲ್ಲಿ ಆಯೋಜಿಸಲಾಗುತ್ತದೆ. ರಾಜ್ಯ ಸರ್ಕಾರ ಸಹ ಈ ಹಿಂದೆ ಕ್ರೀಡಾಪಟುಗಳಿಗೆ ಕ್ರೀಡಾ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ. ಆದರೆ ರಾಜ್ಯ ಸರ್ಕಾರದಿಂದ ಈ ಕ್ರೀಡೆಗೆ ಪ್ರೋತ್ಸಾಹ ಹಾಗೂ ಅನುದಾನ ದೊರಕಲಿಲ್ಲ. ಹಾಗಾಗಿ ಕ್ರೀಡೆ ಬಗ್ಗೆ ಯುವ ಜನತೆ ಆಸಕ್ತಿ ತೋರಿಸುತ್ತಿಲ್ಲ. ಇದರಿಂದ ಕ್ರೀಡೆಯೇ ನಶಿಸಿ ಹೋಗುವ ಸಾಧ್ಯತೆ ಇದೆ. ಆದ್ದರಿಂದ ಮಾಸಾಶನ ನೀಡಿ, ಕ್ರೀಡೆ ಹಾಗೂ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವಂತೆ ಮನವಿ ಮಾಡಿದರು.

ಇದನ್ನೂ ಓದಿ :ಧಾರಾವಾಡದಲ್ಲೊಂದು ಹೀನ ಕೃತ್ಯ : ತಿಂಡಿ ಆಸೆ ತೋರಿಸಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

ಸಚಿವ ಮುರುಗೇಶ್ ನಿರಾಣಿ ಹಾಗೂ ಕ್ರೀಡಾಪಟುಗಳ ಸಂಘದವರು ಮಾಡಿದ ಮನವಿಗೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ನಾರಾಯಣಗೌಡ ಅವರು ಗುಂಡು ಕಲ್ಲು ಎತ್ತುವ ಕ್ರೀಡಾಪಟುಗಳಿಗೆ ಸರ್ಕಾರ ಎಲ್ಲ ರೀತಿಯ ಪ್ರೋತ್ಸಾಹ ನೀಡಲಿದೆ. ಗ್ರಾಮೀಣ ಭಾಗದ ಈ ಕ್ರೀಡೆ ನಶಿಸಿ ಹೋಗಬಾರದು. ಯುವ ಜನರು ಕೂಡ ಈ ಕ್ರೀಡೆಯಲ್ಲಿ ತೊಡಗಿಕೊಳ್ಳಬೇಕು. ಪ್ರತಿ ತಿಂಗಳು ರೂ. 2 ಸಾವಿರ ಮಾಸಾಶನ ನೀಡುವಂತೆ ತಕ್ಷಣ ಆದೇಶಿಸುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.