ಕೇಂದ್ರ ಸಚಿವರನ್ನು ಕರೆದು ಯಾಕೆ ಅಪಮಾನ ಮಾಡ್ತೀರಿ?
Team Udayavani, Sep 22, 2021, 9:30 PM IST
ವಿಧಾನಸಭೆ: ಕೇಂದ್ರ ಸಚಿವರನ್ನು ಕರೆದು ಯಾಕೆ ಅಪಮಾನ ಮಾಡ್ತೀರಿ?
– ಇದು ಬಿಜೆಪಿ ಸದಸ್ಯ ಬಸನಗೌಡ ಪಾಟೀಲ ಯತ್ನಾಳ್ ಅವರು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಕೊಟ್ಟ ಟಾಂಗ್.
ಪ್ರಶ್ನೋತ್ತರ ವೇಳೆಯಲ್ಲಿ ಬೇಲೂರು ಶಾಸಕ ಕೆ.ಎಸ್.ಲಿಂಗೇಶ್ ಅವರು ಮುಖ್ಯಮಂತ್ರಿಗಳ ಅಮೃತ ಗ್ರಾಮಪಂಚಾಯಿತಿ ಯೋಜನೆಯನ್ನು ಪ್ರಸ್ತಾಪಿಸಿ ಗ್ರಾಮ ಪಂಚಾಯಿತಿಯೊಂದಕ್ಕೆ 25 ಲಕ್ಷ ರೂ. ಕೊಡುವುದಾಗಿ ಹೇಳಲಾಗಿದೆ. ಆದರೆ, ಹಣ ಬಿಡುಗಡೆಯಲ್ಲಿ ಸಮಸ್ಯೆಯಾಗುತ್ತಿದೆ ಎಂದು ಗಮನಸೆಳೆದರು. ಜೆಡಿಎಸ್ ಸದಸ್ಯ ಬಂಡೆಪ್ಪ ಕಾಶೆಂಪೂರ ಈ ಪ್ರಶ್ನೆಗೆ ಪೂರಕವಾಗಿ ಮಾತಾಡಿದರು.
ಆಗ ಸಚಿವ ಈಶ್ವರಪ್ಪ ಉತ್ತರಿಸಿ, ಗ್ರಾಪಂಗಳಿಗೆ ಸಿಗುವ ಅನುದಾನಗಳಿಗೆ ಹೆಚ್ಚುವರಿಯಾಗಿ ಅಮೃತ ಯೋಜನೆಯಡಿ 25 ಲಕ್ಷ ನೀಡಲಾಗುತ್ತಿದೆ. ಅಲ್ಲಿನ ಕಾಮಗಾರಿಗಳು ಮತ್ತಿತರ ಅಭಿವೃದ್ಧಿ ಕಾರ್ಯಗಳು ಬೇಗ ಆಗಲಿ ಎಂಬ ಉದ್ದೇಶದಿಂದ ಈ ಯೋಜನೆ ಜಾರಿಯಾಗಿದೆ ಎಂದರು.
ಇದನ್ನೂ ಓದಿ:ವಿಧಾನಸಭೆಯಲ್ಲಿ ಭಾಷಣ ಮಾಡುವಾಗ ಜಾರಿದ ಸಿದ್ದರಾಮಯ್ಯ ಪಂಚೆ
ಮಾತು ಮುಂದುವರಿಸಿದ ಸಚಿವರು, “ಅಮೃತ್ ಯೋಜನೆಯನ್ನು ಗುರುವಾರ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್ ಸಿಂಗ್ ಉದ್ಘಾಟಿಸುತ್ತಿದ್ದಾರೆ. ಎಲ್ಲ ಶಾಸಕರು ಬರಬೇಕು’ ಎಂದು ಆಹ್ವಾನ ನೀಡಿದರು.
ಆಗ, ಬಸನಗೌಡ ಪಾಟೀಲ ಯತ್ನಾಳ್ ಅವರು, ಬರೀ 25 ಲಕ್ಷ ರೂ. ನೀಡಿಕೆಗೆ ಕೇಂದ್ರ ಸಚಿವರನ್ನು ಕರೆತಂದು ಯಾಕೆ ಅವಮಾನ ಮಾಡ್ತೀರಿ? ನೀವು ಕೊಡುವ 25 ಲಕ್ಷ ರೂ.ಸಾಕಾಗಲ್ಲ. ನೀವೇ ಇಟ್ಟುಕೊಳ್ಳಿ ಎಂದು ವ್ಯಂಗ್ಯವಾಡಿದರು. ಪ್ರತ್ಯುತ್ತರಿಸಿದ ಈಶ್ವರಪ್ಪ, “ನಿಮ್ಮ ಕ್ಷೇತ್ರದಲ್ಲಿ ಇರೋದು ಒಂದೇ ಗ್ರಾಮ ಪಂಚಾಯಿತಿ ಅಂತೀರಾ? ಮತ್ತೊಂದು ಪಂಚಾಯಿತಿ ಇದ್ರೆ ತಾನೇ ಹಣ ಕೊಡೋಕೆ ಸಾಧ್ಯ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ