ವಿಶೇಷ ಅಗತ್ಯವುಳ್ಳ ಮಕ್ಕಳು ವಿದೇಶಿ ದಂಪತಿಯ ಮಡಿಲಿಗೆ!


Team Udayavani, Sep 23, 2021, 8:20 AM IST

ವಿಶೇಷ ಅಗತ್ಯವುಳ್ಳ ಮಕ್ಕಳು ವಿದೇಶಿ ದಂಪತಿಯ ಮಡಿಲಿಗೆ!

ಸಾಂದರ್ಭಿಕ ಚಿತ್ರ

ಮಂಗಳೂರು: ಇದೇ ಮೊದಲ ಬಾರಿಗೆ ಎಂಬಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿಶೇಷ ಅಗತ್ಯ(ಸ್ಪೆಷಲ್‌ ನೀಡ್‌)ವುಳ್ಳ ಮಕ್ಕಳಿಬ್ಬರು ವಿದೇಶಿ ದಂಪತಿಗಳ ಮಡಿಲು ಸೇರಲು ಸಿದ್ಧವಾಗಿದ್ದಾರೆ.

ಪುತ್ತೂರಿನ “ಶ್ರೀ ರಾಮಕೃಷ್ಣ ಸೇವಾ ಸಮಾಜದ ವಾತ್ಸಲ್ಯಧಾಮ ದತ್ತು ಕೇಂದ್ರ’ವು ಜಿಲ್ಲೆಯ ಏಕೈಕ ದತ್ತು ಕೇಂದ್ರ. ಅಲ್ಲಿರುವ 6 ವರ್ಷದೊಳಗಿನ 25 ಮಕ್ಕಳ ಪೈಕಿ 7 ಮಕ್ಕಳು ವಿಶೇಷ ಅಗತ್ಯವುಳ್ಳವರು. ಕಡಿಮೆ ತೂಕ (ಲೋ ಬರ್ತ್‌ ವೈಟ್‌)ವುಳ್ಳ 3 ವರ್ಷದ ಮಗುವನ್ನು ದತ್ತು ಪಡೆಯಲು ಅಮೆರಿಕದ ದಂಪತಿ, ಕಿವಿ ಕೇಳಿಸದ 3 ವರ್ಷದ ಮಗುವನ್ನು ದತ್ತು ಪಡೆಯಲು ಇಟೆಲಿಯ ದಂಪತಿ  ನೋಂದಣಿ ಮಾಡಿಕೊಂಡಿದ್ದಾರೆ.

ಭಾರತೀಯರ ಹಿಂದೇಟು:

ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳಿರು ವವರನ್ನು ವಿಶೇಷ ಅಗತ್ಯವುಳ್ಳ ಮಕ್ಕಳೆಂದು ಪರಿಗಣಿಸಲಾಗುತ್ತದೆ. ಭಾರತೀಯರು ಆರೋಗ್ಯಪೂರ್ಣ ಮಕ್ಕಳನ್ನು ದತ್ತು ಪಡೆಯುವಲ್ಲಿ ತೋರುವ ಆಸಕ್ತಿಯನ್ನು ವಿಶೇಷ ಅಗತ್ಯದ ಮಕ್ಕಳ ಬಗYೆ ತೋರುತ್ತಿಲ್ಲ. ಅಂತಹ ಮಕ್ಕಳನ್ನು ಕೂಡ ದತ್ತು ಪಡೆಯಲು ಭಾರತೀಯರಿಗೆ ಮೂರು ಬಾರಿ ಅವಕಾಶ ನೀಡಲಾಗುತ್ತದೆ. ಯಾರೂ ಮುಂದೆ ಬಾರದಿದ್ದರೆ ಅಂತಾರಾಷ್ಟ್ರೀಯ ದತ್ತು ಪ್ರಕ್ರಿಯೆ ನಡೆಯುತ್ತದೆ.

ದ.ಕ: ವಾರ್ಷಿಕ ಸರಾಸರಿ  136 ಮಕ್ಕಳ ದತ್ತು:

ದ.ಕ. ಜಿಲ್ಲೆಯ ದತ್ತು ಕೇಂದ್ರದಿಂದ 2010ರಿಂದ ಇದುವರೆಗೆ ಒಟ್ಟು 136 ಮಕ್ಕಳನ್ನು ದತ್ತು ನೀಡಲಾಗಿದ್ದು ಅದರಲ್ಲಿ ಒಂದು ವಿಶೇಷ ಮಗುವನ್ನು ಭಾರತೀಯರಿಗೆ ದತ್ತು ನೀಡಲಾಗಿದೆ. ಕಳೆದ ವರ್ಷ 12 ಮಕ್ಕಳನ್ನು ದತ್ತು ನೀಡಲಾಗಿತ್ತು. ಈ ವರ್ಷ ಇದುವರೆಗೆ 4 ಮಕ್ಕಳನ್ನು ದತ್ತು ನೀಡಲಾಗಿದೆ. ವರ್ಷಕ್ಕೆ ಸುಮಾರು ಸರಾಸರಿ 10-12 ಮಕ್ಕಳನ್ನು ದತ್ತು ನೀಡಲಾಗುತ್ತಿದೆ.

ಉಡುಪಿ: 3 ಮಕ್ಕಳು ಅಮೆರಿಕಕ್ಕೆ  :

ಉಡುಪಿ ಸಂತೆಕಟ್ಟೆಯ ಕೃಷ್ಣಾಶ್ರಮ ದತ್ತು ಕೇಂದ್ರದಿಂದ ಈ ವರ್ಷ ಇದುವರೆಗೆ ಒಟ್ಟು 7 ಮಕ್ಕಳನ್ನು ದತ್ತು ನೀಡಲಾಗಿದೆ. ಸಂಸ್ಥೆಯು ಮಕ್ಕಳ ದತ್ತು ಪ್ರಕ್ರಿಯೆಯನ್ನು 2008ರಲ್ಲಿ ಆರಂಭಿಸಿದ್ದು ಇದುವರೆಗೆ 80 ಮಕ್ಕಳನ್ನು ದತ್ತು ನೀಡಲಾಗಿದೆ. ಮೂರು ವರ್ಷಗಳಲ್ಲಿ ಮೂವರು ವಿಶೇಷ ಅಗತ್ಯದ ಮಕ್ಕಳನ್ನು ಅಮೆರಿಕದ ಪ್ರಜೆಗಳಿಗೆ ನೀಡಲಾಗಿದೆ. ಐವರು ವಿಶೇಷ ಅಗತ್ಯದ ಮಕ್ಕಳನ್ನು ಭಾರತೀಯರೇ ಪಡೆದುಕೊಂಡಿದ್ದಾರೆ.

7 ತಿಂಗಳಲ್ಲಿ ಪ್ರಕ್ರಿಯೆ ಪೂರ್ಣ ವಿಶೇಷ ಅಗತ್ಯದ ಮಕ್ಕಳನ್ನು  ನಮ್ಮ ದೇಶದವರು ದತ್ತು ಪಡೆಯಲು ಮುಂದೆ ಬರದಿದ್ದಾಗ ಕೇಂದ್ರ ದತ್ತು ಸಂಪನ್ಮೂಲ ಪ್ರಾಧಿಕಾರ (ಕಾರಾ) ಮಾರ್ಗಸೂಚನೆಯಂತೆ ಅಂತಾರಾಷ್ಟ್ರೀಯ ದತ್ತು ಸ್ವೀಕಾರ ಏಜೆನ್ಸಿ (ಆಫಾ) ಮೂಲಕ ಅಂತಾರಾಷ್ಟ್ರೀಯ ದತ್ತು ಪ್ರಕ್ರಿಯೆ ನಡೆಯುತ್ತದೆ. ಅಮೆರಿಕ, ಇಟೆಲಿಯ ದಂಪತಿ ನೋಂದಣಿ ಮಾಡಿಕೊಂಡಿದೆ. ಮ್ಯಾಚಿಂಗ್‌ ಆಗಿದೆ. ಅಂತಾರಾಷ್ಟ್ರೀಯ ದತ್ತು ಸ್ವೀಕಾರ ಪ್ರಕ್ರಿಯೆ 7 ತಿಂಗಳಲ್ಲಿ ಪೂರ್ಣಗೊಳ್ಳುವ  ಸಾಧ್ಯತೆ ಇದೆ. ಮಂಜುಳಾ,  ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ದ.ಕ.

-ಸಂತೋಷ್‌ ಬೊಳ್ಳೆಟ್ಟು

 

ಟಾಪ್ ನ್ಯೂಸ್

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.