ಶಾಲಾರಂಭಕ್ಕೂ ಮುನ್ನವೇ ಪಠ್ಯ ಸರಬರಾಜು


Team Udayavani, Sep 23, 2021, 6:43 PM IST

ಶಾಲಾರಂಭಕ್ಕೂ ಮುನ್ನವೇ ಪಠ್ಯ ಸರಬರಾಜು

ರಾಯಚೂರು: ಸರ್ಕಾರ ಇನ್ನೂ ಒಂದರಿಂದ ಐದನೇ ತರಗತಿಗಳನ್ನು ಆರಂಭಿಸಿಲ್ಲ. ಆದರೆ, ಅಷ್ಟರೊಳಗೆ ಪಠ್ಯ-ಪುಸ್ತಕ ಸರಬರಾಜು ಮಾಡುತ್ತಿದ್ದು, ಈಗಾಗಲೇ ಜಿಲ್ಲೆಗೆ ಬೇಡಿಕೆಯ ಶೇ.61.39ರಷ್ಟು ಪಠ್ಯ-ಪುಸ್ತಕಗಳನ್ನು ಸರಬರಾಜು ಮಾಡಲಾಗಿದೆ. ಕೋವಿಡ್‌-19 ಕಾರಣಕ್ಕೆ ಕಳೆದೆರಡು ವರ್ಷಗಳಿಂದ ಶೈಕ್ಷಣಿಕ ವ್ಯವಸ್ಥೆ ತಾಳ ಮೇಳ ತಪ್ಪಿ ಹೋದಂತಾಗಿತ್ತು.

ಆದರೆ, ಪಠ್ಯ-ಪುಸ್ತಕದ ವಿಚಾರದಲ್ಲಿ ಮಾತ್ರ ಸರ್ಕಾರ ಹಿಂದಡಿ ಇಟ್ಟಿರಲಿಲ್ಲ. ಮೊದಲನೇ ಲಾಕ್‌ಡೌನ್‌ ವೇಳೆ ಮಕ್ಕಳು ಶಾಲೆಗೆ ಬಾರದಿದ್ದರೂ ಅವರ ಮನೆಗೆ ಪಠ್ಯಪುಸ್ತಕ ಸರಬರಾಜು ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಬಾರಿಯೂ ಶಾಲೆಗಳ ಪರಿಸ್ಥಿತಿ ಏನು ಎಂಬ ಜಿಜ್ಞಾಸೆಯಲ್ಲಿಯೇ ಪಾಲಕರು ಕಾಲ ಕಳೆಯುತ್ತಿರುವಾಗ ಸರ್ಕಾರ ಶಾಲೆಗಳ ಪುನಾರಂಭಕ್ಕೆ ಮುಂದಾಗಿದೆ. ಈಗಾಗಲೇ ಆರನೇ ತರಗತಿಯಿಂದ ಶಾಲಾ-ಕಾಲೇಜುಗಳು ಶುರುವಾಗಿದೆ.

ದಸರಾ ರಜೆ ಬಳಿಕ ಒಂದನೇ ತರಗತಿಯಿಂದ ಶಾಲೆಗಳನ್ನು ಆರಂಭಿಸುವುದಾಗಿ ಶಿಕ್ಷಣ ಸಚಿವರು ತಿಳಿಸಿದ್ದು, ಅದರ ಭಾಗವಾಗಿ ಈಗಾಗಲೇ ಪುಸ್ತಕಗಳ ಪೂರೈಕೆ ಪ್ರಕ್ರಿಯೆಯೂ ಜೋರಾಗಿಯೇ ನಡೆಯುತ್ತಿದೆ. ಸರ್ಕಾರದಿಂದ ಉಚಿತವಾಗಿ ಪಠ್ಯ-ಪುಸ್ತಕಗಳನ್ನು ವಿತರಿಸುತ್ತಿದ್ದು, ಖಾಸಗಿ ಶಾಲೆಗಳು ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಪಠ್ಯ-ಪುಸ್ತಕಗಳನ್ನು ಖರೀದಿಸಿ ವಿದ್ಯಾರ್ಥಿಗಳಿಗೆ ವಿತರಿಸುವ ವ್ಯವಸ್ಥೆ ಮಾಡಲಾಗಿದೆ.

ಜಿಲ್ಲೆಯ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಒಂದರಿಂದ ಹತ್ತನೇ ತರಗತಿವರೆಗೆ ವಿಷಯವಾರು ಸರ್ಕಾರಿ ಶಾಲೆಗಳಿಗೆ ಉಚಿತ ವಿತರಣೆಗಾಗಿ 31,72,851 ಹಾಗೂ ಖಾಸಗಿ ಶಾಲೆಗಳ ಖರೀದಿಗಾಗಿ 2,98,332 ಪಠ್ಯ-ಪುಸ್ತಕಗಳ ಬೇಡಿಕೆಯನ್ನು ಸಲ್ಲಿಸಲಾಗಿತ್ತು. ಈವರೆಗೂ ಜಿಲ್ಲೆಗೆ ಉಚಿತ ವಿತರಣೆಗಾಗಿ 19,47,931 ಹಾಗೂ ಖಾಸಗಿ ಶಾಲೆಗಳ ಖರೀದಿಗಾಗಿ 1,90,040 ಪಠ್ಯ-ಪುಸ್ತಕಗಳನ್ನು ಕೇಂದ್ರ ಕಚೇರಿಯಿಂದ ಸರಬರಾಜು ಮಾಡಲಾಗಿದೆ.

ಆಯಾ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮೂಲಕ ಶಾಲೆಗಳಿಗೆ ರವಾನೆ ಕೂಡ ಮಾಡಲಾಗುತ್ತಿದೆ. ಇನ್ನೂ ಕೆಲವೊಂದು ಪುಸ್ತಕಗಳು ಬರುವುದು ಬಾಕಿಯಿದ್ದು, ಈ ತಿಂಗಳ ಕೊನೆ ವೇಳೆಗೆ ಪೂರೈಸುವ ಸಾಧ್ಯತೆಗಳಿವೆ.

ಕಾನ್ವೆಂಟ್‌ ಶಾಲೆಗಳು ಆರಂಭ
ಒಂದೆಡೆ ಸರ್ಕಾರ ದಸರಾ ಬಳಿಕವೇ ಒಂದರಿಂದ ಐದನೇ ತರಗತಿವರೆಗಿನ ಮಕ್ಕಳ ಶಾಲೆ ಆರಂಭಿಸಲಾಗುವುದು ಎಂದು ತಿಳಿಸಿದೆ. ಆದರೆ, ಜಿಲ್ಲೆಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಆಗಲೇ ಎಕ್‌ಕೆಜಿ, ಯುಕೆಜಿಯಿಂದ ಹಿಡಿದು 10ನೇ ತರಗತಿವರೆಗೆ ಶಾಲೆಗಳನ್ನು ಆರಂಭಿಸುವ ಮೂಲಕ ಸರ್ಕಾರದ ಆದೇಶವನ್ನೇ ಕಡೆಗಣಿಸಿವೆ.

ನಿತ್ಯ ಕಾನ್ವೆಂಟ್‌ಗೆ ವ್ಯಾನ್‌, ಆಟೋಗಳಲ್ಲಿ ಮಕ್ಕಳನ್ನು ಕರೆದೊಯ್ಯಲಾಗುತ್ತಿದೆ. ಆದರೆ, ಈ ಬಗ್ಗೆ ಯಾವುದೇ ಅಧಿಕಾರಿಗಳಾಗಲಿ, ಪೊಲೀಸರಾಗಲಿ ಪ್ರಶ್ನಿಸುತ್ತಿಲ್ಲ. ಈಗ ಸರ್ಕಾರ ಹೇಗಿದ್ದರೂ ಪಠ್ಯ ಪುಸ್ತಕ ಪೂರೈಸಿರುವುದು ಮಕ್ಕಳ ಕಲಿಕೆಗೆ ಅನುಕೂಲವೇ ಆಗಿದೆ. ಕೊರೊನಾ ಹೇಗಿದ್ದರೂ ಕಡಿಮೆಯಾಗಿದೆ. ಅಲ್ಲದೇ, ಸರ್ಕಾರವೆ ದಸರಾ ಬಳಿಕ ಶಾಲೆ ಆರಂಭಿಸುವುದಾಗಿ ತಿಳಿಸಿದ್ದರಿಂದ ಒಂದರಿಂದ ಶಾಲೆ ಆರಂಭಿಸಿದ್ದಾಗಿ ಸಮಜಾಯಿಷಿ ನೀಡುತ್ತಾರೆ ಖಾಸಗಿ ಕಾಲೇಜಿನ ಆಡಳಿತ ಮಂಡಳಿಗಳು. ಆದರೆ, ಸರ್ಕಾರಿ ಶಾಲೆಗಳಲ್ಲಿ ಮಾತ್ರ ಮಕ್ಕಳು ಶಾಲೆಗೆ ಬಂದು ಹೋಮ್‌ ವರ್ಕ್‌ ಬರೆಯಿಸಿಕೊಂಡು ಹೋಗುತ್ತಿದ್ದಾರೆ.

ಈಗಾಗಲೇ ಶೇ.61ರಷ್ಟು ಪಠ್ಯಪುಸ್ತಕ ಪೂರೈಕೆಯಾಗಿದೆ. ಉಳಿದ ಪುಸ್ತಕಗಳು ಕೂಡ ಶೀಘ್ರದಲ್ಲೇ ಬರಲಿದೆ. ಆಯಾ ಬಿಇಒ ಕಚೇರಿಗಳಿಗೆ ನೇರವಾಗಿ ಸರಬರಾಜು ಮಾಡಲಾಗುತ್ತಿದೆ. ನಮಗೆ ಅಗತ್ಯವಿರುವಷ್ಟು ಪುಸ್ತಕ ಬಂದಿದ್ದು, ಯಾವುದೇ ಕೊರತೆ ಆಗಿಲ್ಲ.
ವೃಷಭೇಂದ್ರಯ್ಯ ಸ್ವಾಮಿ,
ಡಿಡಿಪಿಐ, ರಾಯಚೂರು

ಟಾಪ್ ನ್ಯೂಸ್

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.