ಕೋಲ್ಕತಾಕ್ಕೆ  ಶರಣಾದ ಮುಂಬೈ


Team Udayavani, Sep 23, 2021, 11:25 PM IST

ಕೋಲ್ಕತಾಕ್ಕೆ  ಶರಣಾದ ಮುಂಬೈ

ದುಬಾೖ: ಹಾಲಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ಎದುರಿನ ಗುರುವಾರದ ಐಪಿಎಲ್‌ ಪಂದ್ಯದಲ್ಲಿ ಕೆಕೆಆರ್‌ 7 ವಿಕೆಟ್‌ಗಳ ಗೆಲುವು ದಾಖಲಿಸಿದೆ.

ಟಾಸ್‌ ಸೋತು ಬಾಟಿಂಗಿಗೆ ಇಳಿಸಲ್ಪಟ್ಟ ಮುಂಬೈ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟಿಗೆ 155 ರನ್‌ ಗಳಿಸಿದರೆ. ಕೋಲ್ಕತಾ 15.1 ಓವರ್‌ಗಳಲ್ಲಿ 3 ವಿಕೆಟಿಗೆ 159 ರನ್‌ ಬಾರಿಸಿತು. ಚೇಸಿಂಗ್‌ ವೇಳೆ ಯುವ ಆಟಗಾರ ವೆಂಕಟೇಶ್‌ ಅಯ್ಯರ್‌ 53 (4 ಬೌಡಂರಿ, 3 ಸಿಕ್ಸರ್‌), ರಾಹುಲ್‌ ತ್ರಿಪಾಠಿ ಅಜೇಯ 74 ರನ್‌ ಪೇರಿಸಿ ಅರ್ಧಶತಕ ಪೂರ್ತಿಗೊಳಿಸಿದರು.  ಶುಭಮನ್‌ ಗಿಲ್‌ (13), ನಾಯಕ ಮಾರ್ಗನ್‌ (7) ಅಗ್ಗಕ್ಕೆ ಔಟಾದರು. ಜಸ್‌ಪ್ರೀತ್‌ ಬುಮ್ರಾ ಮೂರು ವಿಕೆಟ್‌ ಕಿತ್ತು ಮಿಂಚಿದರು.

ಮುಂಬೈಗೆ ಉತ್ತಮ ಆರಂಭ:

ಕ್ವಿಂಟನ್‌ ಡಿ ಕಾಕ್‌ ಅವರ ಅರ್ಧ ಶತಕ, ಅವರು ತಂಡಕ್ಕೆ ಮರಳಿದ ನಾಯಕ ರೋಹಿತ್‌ ಶರ್ಮ ಅವರೊಂದಿಗೆ ಮೊದಲ ವಿಕೆಟಿಗೆ ದಾಖಲಿಸಿದ 78 ರನ್‌ ಜತೆಯಾಟ ಮುಂಬೈ ಸರದಿಯ ಆಕರ್ಷಣೆಯಾಗಿತ್ತು.

ರೋಹಿತ್‌-ಡಿ ಕಾಕ್‌ 10ನೇ ಓವರ್‌ ತನಕ ಕ್ರೀಸ್‌ ಆಕ್ರಮಿಸಿಕೊಂಡು ಕೆಕೆಆರ್‌ಗೆ ಸವಾಲಾದರು. ಆದರೆ ಸೂರ್ಯಕುಮಾರ್‌ ಯಾದವ್‌, ಇಶಾನ್‌ ಕಿಶನ್‌, ಕೈರನ್‌ ಪೊಲಾರ್ಡ್‌ ಅವರಂಥ ಬಿಗ್‌ ಹಿಟ್ಟರ್‌ಗಳಿದ್ದರೂ ದ್ವಿತೀಯಾ ರ್ಧದಲ್ಲಿ ಮುಂಬೈ ಇಂಡಿಯನ್ಸ್‌ ಬ್ಯಾಟಿಂಗ್‌ ನಿರೀಕ್ಷಿತ ಬಿರುಸು ಪಡೆಯಲಿಲ್ಲ. ಕೊನೆಯ 5 ಓವರ್‌ಗಳಲ್ಲಿ 49 ರನ್‌ ಗಳಿಸಿದ್ದರಿಂದ ತಂಡದ ಮೊತ್ತ ನೂರೈವತ್ತರ ಗಡಿ ದಾಟಿತು.

ಡಿ ಕಾಕ್‌ 16ನೇ ಫಿಫ್ಟಿ:

ಕ್ವಿಂಟನ್‌ ಡಿ ಕಾಕ್‌ 42 ಎಸೆತಗಳಿಂದ 55 ರನ್‌ ಹೊಡೆದರು. 4 ಫೋರ್‌, 3 ಸಿಕ್ಸರ್‌ ಸಿಡಿಸಿ ಅಬ್ಬರಿಸಿದರು. ಇದು ಐಪಿಎಲ್‌ನಲ್ಲಿ ಡಿ ಕಾಕ್‌ ಬಾರಿಸಿದ 16ನೇ ಅರ್ಧ ಶತಕ.

ರೋಹಿತ್‌ ಶರ್ಮ ಗಳಿಕೆ 30 ಎಸೆತಗಳಿಂದ 33 ರನ್‌ (4 ಬೌಂಡರಿ). ಮುಂಬೈ ಕಪ್ತಾನನನ್ನು ಔಟ್‌ ಮಾಡಿದ ಸುನೀಲ್‌ ನಾರಾಯಣ್‌ ಕೋಲ್ಕತಾಕ್ಕೆ ಮೊದಲ ಯಶಸ್ಸು ತಂದಿತ್ತರು. ಜತೆಗೆ ರೋಹಿತ್‌ ಅವರನ್ನು ಅತೀ ಹೆಚ್ಚು 7 ಸಲ ಔಟ್‌ ಮಾಡಿದ ಸಾಧನೆಯೂ ವಿಂಡೀಸ್‌ ಸ್ಪಿನ್ನರ್‌ನದ್ದಾಯಿತು.

ಸೂರ್ಯಕುಮಾರ್‌ ಯಾದವ್‌ ರನ್ನಿಗಾಗಿ ಪರದಾಡಿದರು. 10 ಎಸೆತಗಳಿಂದ 5 ರನ್‌ ಮಾಡಿ ಪ್ರಸಿದ್ಧ್ ಕೃಷ್ಣ ಅವರಿಗೆ ವಿಕೆಟ್‌ ಒಪ್ಪಿಸಿದರು. ಇಶಾನ್‌ ಕಿಶನ್‌ ಗಳಿಕೆ 13 ಎಸೆತಗಳಿಂದ 14 ರನ್‌ (1 ಸಿಕ್ಸರ್‌). ಪೊಲಾರ್ಡ್‌ ಅಬ್ಬರಿಸುವ ಸೂಚನೆ ನೀಡಿದರೂ ಆಗಲೇ ಮುಂಬೈ ಇನ್ನಿಂಗ್ಸ್‌ ಅಂತಿಮ ಹಂತಕ್ಕೆ ಬಂದಿತ್ತು. 15 ಎಸೆತಗಳಿಂದ 21 ರನ್‌ ಮಾಡಿದ ಪೊಲಾರ್ಡ್‌ ಕೊನೆಯ ಓವರ್‌ನಲ್ಲಿ ರನೌಟಾದರು. ಕೃಣಾಲ್‌ ಪಾಂಡ್ಯ (12) ವಿಕೆಟ್‌ ಕೂಡ ಅಂತಿಮ ಓವರ್‌ನಲ್ಲಿ ಉರುಳಿತು. ಕೋಲ್ಕತಾ ಪರ ಫರ್ಗ್ಯುಸನ್‌ ಮತ್ತು ಪ್ರಸಿದ್ಧ್ ಕೃಷ್ಣ ತಲಾ 2 ವಿಕೆಟ್‌ ಉರುಳಿಸಿದರು.

ಕೆಕೆಆರ್‌ ವಿರುದ್ಧ ರೋಹಿತ್‌ ಸಾವಿರ ರನ್‌:

ಗುರುವಾರದ ಕೆಕೆಆರ್‌ ವಿರುದ್ಧದ ಪಂದ್ಯದ ವೇಳೆ ಮುಂಬೈ ಇಂಡಿಯನ್ಸ್‌ ನಾಯಕ ರೋಹಿತ್‌ ಶರ್ಮ ವಿಶಿಷ್ಟ ದಾಖಲೆಯೊಂದನ್ನು ಸ್ಥಾಪಿಸಿದರು. ಅವರು ಒಂದೇ ಐಪಿಎಲ್‌ ತಂಡದ ವಿರುದ್ಧ ಸಾವಿರ ರನ್‌ ಪೂರೈಸಿದ ಮೊದಲ ಬ್ಯಾಟ್ಸ್‌ ಮನ್‌ ಎನಿಸಿದರು.

ಕೆಕೆಆರ್‌ ವಿರುದ್ಧ ಈ ಮೈಲುಗಲ್ಲು ನೆಡಲು ರೋಹಿತ್‌ 18 ರನ್‌ ಗಳಿಸಬೇಕಿತ್ತು. ಪಂದ್ಯದ ಪ್ರಥಮ ಎಸೆತದಲ್ಲೇ ಬೌಂಡರಿ ಸಿಡಿಸುವ ಮೂಲಕ ರೋಹಿತ್‌ ಅಬ್ಬರಿಸತೊಡಗಿದರು. 18 ರನ್‌ ಗಳಿಸುವಷ್ಟರಲ್ಲಿ 4 ಸಲ ಚೆಂಡನ್ನು ಬೌಂಡರಿಗೆ ಬಡಿದಟ್ಟಿದರು. ಕೆಕೆಆರ್‌ ವಿರುದ್ಧ ರೋಹಿತ್‌ ಈ ವರೆಗೆ ಒಂದು ಶತಕ ಹಾಗೂ 6 ಅರ್ಧ ಶತಕ ಬಾರಿಸಿದ್ದಾರೆ.

ರೋಹಿತ್‌ ಹೊರತುಪಡಿಸಿದರೆ  ವಾರ್ನರ್‌ ಪಂಜಾಬ್‌ ವಿರುದ್ಧ 943, ಕೆಕೆಆರ್‌ ವಿರುದ್ಧ 915; ಕೊಹ್ಲಿ ಡೆಲ್ಲಿ ವಿರುದ್ಧ 909, ಚೆನ್ನೈ ವಿರುದ್ಧ 895; ಧವನ್‌ ಪಂಜಾಬ್‌ ವಿರುದ್ಧ 894 ರನ್‌ ಬಾರಿಸಿದ್ದಾರೆ.

ಟಾಪ್ ನ್ಯೂಸ್

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

T20 World Cup: India jersey sold for Rs 6000!

T20 World Cup: ಭಾರತದ ಜೆರ್ಸಿ 6000 ರೂ.ಗೆ ಮಾರಾಟ!

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.