ಪಿಎಂಒ, ಜಡ್ಜ್ ಹೆಸರಲ್ಲೂ ವಂಚಕ ದಂಪತಿ ಕರಾಮತ್ತು
Team Udayavani, Sep 24, 2021, 7:30 AM IST
ಕೊಚ್ಚಿ: ತಿಹಾರ್ ಜೈಲಲ್ಲಿದ್ದುಕೊಂಡೇ 200 ಕೋಟಿ ರೂ.ಹಗರಣ ನಡೆಸಿದ ವಂಚಕ ಸುಕೇಶ್ ಚಂದ್ರಶೇಖರ್ ಮತ್ತು ಆತನ ಪತ್ನಿ ಲೀನಾ ಮರಿಯಾ ಅವರು ಕೇಂದ್ರ ಗೃಹ ಸಚಿವಾಲಯ, ಪ್ರಧಾನಿ ಕಾರ್ಯಾಲಯ ಹಾಗೂ ಸುಪ್ರೀಂ ಕೋರ್ಟ್ ಜಡ್ಜ್ ಯೊಬ್ಬರ ದೂರವಾಣಿ ಸಂಖ್ಯೆಯನ್ನೇ ನಕಲು ಮಾಡಿ ಹಲವರನ್ನು ವಂಚಿಸುತ್ತಿದ್ದ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ.
ಕೇಂದ್ರ ತನಿಖಾ ಸಂಸ್ಥೆ ಸಿಬಿಐ ವರದಿಯಲ್ಲಿ ಈ ಅಂಶ ಉಲ್ಲೇಖೀಸಲಾಗಿದೆ. ಪ್ರಧಾನ ಮಂತ್ರಿಗಳ ಕಚೇರಿ, ಕೇಂದ್ರ ಗೃಹ ಸಚಿವಾ ಲಯ, ಸುಪ್ರೀಂ ಕೋರ್ಟ್ನ ನ್ಯಾಯ ಮೂರ್ತಿಯೊಬ್ಬರ ದೂರವಾಣಿ ಸಂಖ್ಯೆಯನ್ನು ನಕಲು (ಸ್ಪೂಫ್) ಮಾಡಿ, ವಿವಿಧ ಪ್ರಕರಣಗಳಲ್ಲಿ ಸಿಲುಕಿರುವ ಶ್ರೀಮಂತರಿಗೆ ಕರೆ ಮಾಡುತ್ತಿದ್ದರು. ಅನಂತರ ತಮಗಿರುವ ಪ್ರಭಾವ ಬೆಳೆಸಿ ನಿಮ್ಮನ್ನು ಕೇಸಿನಿಂದ ಪಾರು ಮಾಡುವುದಾಗಿ ಹೇಳಿ ನಂಬಿಸುತ್ತಿದ್ದರು.
ಸದ್ಯ ಜೈಲಲ್ಲಿರುವ ಹೈದರಾಬಾದ್ನ ಉದ್ಯಮಿ ಸಾಂಬಶಿವ ರಾವ್ ಅವರನ್ನು ತನಿಖೆಯಿಂದ ಪಾರು ಮಾಡುತ್ತೇವೆ ಎಂದು ಲೀನಾ ಮರಿಯಾ ನಂಬಿಸಿದ್ದಳು. ತನ್ನನ್ನು ಸಿಬಿಐ ಅಧಿಕಾರಿ ಎಂದು ಹೇಳಿಕೊಂಡು ನಂಬಿಸಿದ್ದ ಸುಕೇಶ್ ಚಂದ್ರಶೇಖರ್, ಉದ್ಯಮಿಯಿಂದ 3 ಕೋಟಿ ರೂ. ವಸೂಲು ಮಾಡಿದ್ದ. ಸಂಶಯಗೊಂಡ ರಾವ್ ತನಿಖಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾಗ ಸಿಬಿಐ ಹೆಸರಿನಲ್ಲಿ ವಂಚಿಸಿದ್ದು ದೃಢವಾ ಯಿತು. ಆತ ವಿಶೇಷ ಆ್ಯಪ್ಗ್ಳ ಮೂಲಕ ಪ್ರಮುಖರಿಗೆ ಕರೆಗಳನ್ನು ಮಾಡಿದ್ದಾನೆ .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ
Encounter: ಜಮ್ಮು – ಕಾಶ್ಮೀರದಲ್ಲಿ ಎನ್ಕೌಂಟರ್… ಮೂವರು ಭಯೋತ್ಪಾದಕರು ಹತ
UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ
Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ
Arvind Kejriwal ವಿರುದ್ಧ ಎನ್ಐಎ ತನಿಖೆಗೆ ಶಿಫಾರಸು
MUST WATCH
ಹೊಸ ಸೇರ್ಪಡೆ
Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ
Met Gala 2024: ಇವೆಂಟ್ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್ ಫೇಕ್ ಫೋಟೋ ವೈರಲ್
BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ
Encounter: ಜಮ್ಮು – ಕಾಶ್ಮೀರದಲ್ಲಿ ಎನ್ಕೌಂಟರ್… ಮೂವರು ಭಯೋತ್ಪಾದಕರು ಹತ
Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ