ಗ್ರಾ.ಪಂ.ಗಳಿಂದ ಗ್ರಾಮಸೇವೆ
Team Udayavani, Sep 24, 2021, 7:10 AM IST
ಬೆಂಗಳೂರು: ರಾಜ್ಯ ಸರಕಾರದ ವಿವಿಧ ಸೇವೆಗಳನ್ನು ಗ್ರಾಮ ಪಂಚಾಯತ್ಗಳ ಮೂಲಕ ಜನರಿಗೆ ಒದಗಿಸುವುದಕ್ಕಾಗಿ ಹೊಸ ಯೋಜನೆ ಜಾರಿಗೊಳ್ಳಲಿದೆ. ಇದನ್ನು ಜ. 26ರಂದು ಪ್ರಾಯೋಗಿಕವಾಗಿ ಅನಾವರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ಪಂ.ರಾಜ್ ಮತ್ತು ಗ್ರಾಮೀಣಾಭಿ ವೃದ್ಧಿ ಇಲಾಖೆಯ “ಅಮೃತ ಗ್ರಾ.ಪಂ. ಯೋಜನೆ’ಗೆ ವಿಧಾನಸೌಧದಲ್ಲಿ ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಗಿರಿರಾಜ್ ಸಿಂಗ್ ಅವರೊಂದಿಗೆ ಚಾಲನೆ ನೀಡಿ ಸಿಎಂ ಮಾತನಾಡಿದರು.
ರಾಜ್ಯದ ಜನರು ಸರಕಾರದ ವಿವಿಧ ಯೋಜನೆಗಳಿಗಾಗಿ ವಿವಿಧ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಬೇಕು. ಇದಕ್ಕಾಗಿ ಗ್ರಾ.ಪಂ. ಮೂಲಕ ಜನರಿಗೆ ಸರಕಾರದ ಅಗತ್ಯ ಸೇವೆಗಳನ್ನು ಆನ್ಲೈನ್ ಅಥವಾ ಆಫ್ಲೈನ್ ಮೂಲಕ ನೀಡಲು ಯೋಜನೆ ರೂಪಿಸು ತ್ತಿದ್ದೇವೆ. ಜ. 26ರಿಂದ 5 ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಜಾರಿಗೆ ತರಲಿದ್ದೇವೆ ಎಂದು ವಿವರ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!