ಪಾಕ್ ಪ್ರವಾಸ ರದ್ದು ಮಾಡಿದವರು ಭಾರತಕ್ಕೆ ‘ನೋ’ ಎನ್ನಲ್ಲ: ಆಸೀಸ್ ಆಟಗಾರನ ಅಸಮಾಧಾನ


Team Udayavani, Sep 24, 2021, 1:26 PM IST

Nobody Would Say No To India

ಸಿಡ್ನಿ: ಭದ್ರತೆಯ ಕಾರಣದಿಂದ ಪಾಕಿಸ್ಥಾನದಲ್ಲಿ ಕ್ರಿಕೆಟ್ ಆಡಲು ಹಲವು ದೇಶಗಳು ಹಿಂದೆ ಮುಂದೆ ನೋಡುತ್ತಿದೆ. 18 ವರ್ಷಗಳ ಬಳಿಕ ಮೊದಲ ಬಾರಿಗೆ ಪಾಕಿಸ್ಥಾನ ಪ್ರವಾಸ ಕೈಗೊಂಡಿದ್ದ ನ್ಯೂಜಿಲ್ಯಾಂಡ್ ತಂಡವು ಮೊದಲ ಪಂದ್ಯಕ್ಕೆ ಆರಂಭಕ್ಕೆ ಮುನ್ನವೇ ಪ್ರವಾಸವನ್ನು ಮೊಟಕುಗೊಳಿಸಿತ್ತು. ಭದ್ರತೆ ಭೀತಿಯ ಕಾರಣಕ್ಕೆ ಮೈದಾನಕ್ಕೆ ಇಳಿಯದ ಕಿವೀಸ್ ಪಡೆ ಮರುದಿನವೇ ಹೊರಟು ನಿಂತಿತ್ತು.

ಇದಾದ ಕೆಲ ದಿನಗಳ ಬಳಿಕ ಇಂಗ್ಲೆಂಡ್ ಕೂಡಾ ತನ್ನ ಪಾಕ್ ಪ್ರವಾಸವನ್ನು ರದ್ದು ಮಾಡಿತ್ತು. ಅದೇ ಭಧ್ರತೆಯ ನೆಪವೊಡ್ಡಿದ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಮುಂದಿನ ತಿಂಗಳು ನಡೆಯಬೇಕಿದ್ದ ಸರಣಿಯನ್ನು ರದ್ದು ಮಾಡಿತ್ತು. ಇದು ಪಾಕ್ ಕ್ರಿಕೆಟ್ ಬೋರ್ಡ್ ಮತ್ತು ಪಾಕ್ ಸರ್ಕಾರ ಅಂತಾರಾಷ್ಟ್ರೀಯ ಮಟ್ಟದಲ್ಲಿ ತಲೆತಗ್ಗಿಸುವಂತೆ ಮಾಡಿತ್ತು.

ಈ ಘಟನೆಯ ಬಗ್ಗೆ ಹಲವಾರು ಕ್ರಿಕೆಟಿಗರು, ಮಾಜಿ ಕ್ರಿಕೆಟಿಗರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹಲವರು ನ್ಯೂಜಿಲ್ಯಾಂಡ್ ಮತ್ತು ಇಂಗ್ಲೆಂಡ್ ಕ್ರಿಕೆಟ್ ಮಂಡಳಿಯ ನಿರ್ಧಾರವನ್ನು ಜರೆದಿದ್ದಾರೆ. ಇದೀಗ ಆಸೀಸ್ ಕ್ರಿಕೆಟಿಗ ಉಸ್ಮಾನ್ ಖ್ವಾಜಾ ಕೂಡಾ ಧ್ವನಿಗೂಡಿಸಿದ್ದಾರೆ.

ಇದನ್ನೂ ಓದಿ:ಚೊಚ್ಚಲ ಟಿ20 ವಿಶ್ವಕಪ್ ಗೆಲುವಿಗೆ ಇಂದಿಗೆ 14 ವರ್ಷ: ಇಲ್ಲಿದೆ ಹೈಲೈಟ್ಸ್

ಆಟಗಾರರಿಗೆ ಮತ್ತು ಸಂಸ್ಥೆಗಳಿಗೆ ಪಾಕಿಸ್ಥಾನಕ್ಕೆ ‘ನೋ’ ಎನ್ನಲು ಬಹುಶಃ ಸುಲಭವಾಗಿರುತ್ತದೆ. ಯಾಕೆಂದರೆ ಅದು ಪಾಕಿಸ್ಥಾನ. ಬಹುಶಃ ಬಾಂಗ್ಲಾದೇಶಕ್ಕೂ ಇದು ಅನ್ವಯವಾಗುತ್ತದೆ. ಆದರೆ ಇದೇ ಭದ್ರತೆ ಭೀತಿಯಂತಹ ಪರಿಸ್ಥಿತಿ ಭಾರತದಲ್ಲಾದರೆ ಯಾವ ಆಟಗಾರ, ದೇಶವೂ ‘ನೋ’  ಎನ್ನುವುದಿಲ್ಲ ಎಂದು ಉಸ್ಮಾನ್ ಖ್ವಾಜಾ ಹೇಳಿದ್ದಾರೆ.

ಹಣದ ಮಹತ್ವವಿದು. ನಮಗೆಲ್ಲಾ ಗೊತ್ತಿರುವಂತೆ ಹಣ ದೊಡ್ಡ ಪ್ರಭಾವ ಬೀರುತ್ತದೆ. ಪಾಕಿಸ್ಥಾನವು ಕ್ರಿಕೆಟ್ ಆಡಲು ಸುರಕ್ಷಿತ ಸ್ಥಳ ಎಂದು ತಮ್ಮ ಪಂದ್ಯಾವಳಿಗಳ ಮೂಲಕ ಪದೇ ಪದೇ ಸಾಬೀತುಪಡಿಸುತ್ತಲೇ ಇದ್ದಾರೆ. ಹೀಗಾಗಿ ಯಾರೂ ಅಲ್ಲಿಗೆ ಹೋಗದಿರಲು ಯಾವುದೇ ಕಾರಣವಿಲ್ಲ ಎಂದು ಪಾಕಿಸ್ಥಾನದಲ್ಲಿ ಹುಟ್ಟಿ ಆಸೀಸ್ ಪರವಾಗಿ ಆಡುತ್ತಿರುವ ಉಸ್ಮಾನ್ ಖ್ವಾಜಾ ಹೇಳಿದ್ದಾರೆ.

ಟಾಪ್ ನ್ಯೂಸ್

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

Priyanka Gandhi

Election; ಪ್ರಧಾನಿ ಮೋದಿ ಯಾಕೆ ಮಂಗಳಸೂತ್ರ,ಧರ್ಮದ ಮೇಲೆ ಮತ ಕೇಳುತ್ತಾರೆ: ಪ್ರಿಯಾಂಕಾ ಗಾಂಧಿ

raghu bhat

Congress ಗಾಡ್ ಫಾದರ್ ಸಂಸ್ಕೃತಿ ಬಿಜೆಪಿಗೆ ಬಂದಿದೆ: ರಘುಪತಿ ಭಟ್

1-asasa

Cat ರಕ್ಷಣೆಗೆ ಭಾರೀ ಕಾರ್ಯಾಚರಣೆ ; ಕೊನೆಗೆ ಆಗಿದ್ದೆ ಬೇರೆ!: ವೈರಲ್ ವಿಡಿಯೋ ನೋಡಿ

priyanka-gandhi

Priyanka Gandhi ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ; ಇಲ್ಲಿದೆ ಅವರೇ ಕೊಟ್ಟ ಉತ್ತರ

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB (2)

RCB ಭವಿಷ್ಯ ಮಳೆಯ ಕೈಯಲ್ಲಿ

1-asdad

Cricket; ಭಾರತ ತಂಡಕ್ಕೆ ಗೌತಮ್‌ ಗಂಭೀರ್‌ ಕೋಚ್‌?

1-wewqwqe

Usain Bolt; ನನ್ನ ದಾಖಲೆಗಳಿಗೆ ಸದ್ಯ ಯಾವುದೇ ಗಂಡಾಂತರವಿಲ್ಲ

1—–ewqeqwe

Sunil Chhetri; ಬೆಂಗಳೂರು ಎಫ್ಸಿ ಪರ ಆಡುವೆ

1-reee

Chess: ಸೋತ ಕಾರಣಕ್ಕೆ ಕಂಪ್ಯೂಟರ್‌ ಸ್ಕ್ರೀನ್‌ ಒಡೆದ ಕಾರ್ಲ್ಸನ್‌

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

1-wqewqewe

Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

Priyanka Gandhi

Election; ಪ್ರಧಾನಿ ಮೋದಿ ಯಾಕೆ ಮಂಗಳಸೂತ್ರ,ಧರ್ಮದ ಮೇಲೆ ಮತ ಕೇಳುತ್ತಾರೆ: ಪ್ರಿಯಾಂಕಾ ಗಾಂಧಿ

raghu bhat

Congress ಗಾಡ್ ಫಾದರ್ ಸಂಸ್ಕೃತಿ ಬಿಜೆಪಿಗೆ ಬಂದಿದೆ: ರಘುಪತಿ ಭಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.