ಶಾಲಾ ಶಿಕ್ಷಕಿಯ ಶಪಥ: ಅಂತೂ ರಾಂಪುರಕ್ಕೆ ಬಂತು ಸರ್ಕಾರಿ ಬಸ್!
ರಸ್ತೆ ಆಗುವವರೆಗೆ ಮದುವೆ ಆಗುವುದಿಲ್ಲ; ಶಿಕ್ಷಕಿಯ ಶಪಥ
Team Udayavani, Sep 24, 2021, 4:29 PM IST
ದಾವಣಗೆರೆ: “ರಸ್ತೆ ಆಗುವವರೆಗೆ ಮದುವೆ ಆಗುವುದಿಲ್ಲ’ ಎಂದು ಶಪಥ ಮಾಡುವ ಜೊತೆಗೆ ಪ್ರಧಾನಿ ಮತ್ತು ಮುಖ್ಯಮಂತ್ರಿ ಒಳಗೊಂಡಂತೆ ಅನೇಕರ ಗಮನ ಸೆಳೆದಿದ್ದ ಖಾಸಗಿ ಶಾಲಾ ಶಿಕ್ಷಕಿ ಬಿಂದು ಅವರ ಸ್ವಗ್ರಾಮ ದಾವಣಗೆರೆ ತಾಲೂಕಿನ ಎಚ್. ರಾಂಪುರ ಗ್ರಾಮಕ್ಕೆ ಸಾರಿಗೆ ಸಂಸ್ಥೆ ಬಸ್ ಸಂಚಾರ ಪ್ರಾರಂಭವಾಗಿದೆ.
ಖಾಸಗಿ ಶಾಲಾ ಶಿಕ್ಷಕಿ ಬಿಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆಯುವ ಮೂಲಕ ಗಮನ ಸೆಳೆದಿದ್ದರು. ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸೆ. 16 ರಂದು ರಾಂಪುರ ಗ್ರಾಮಕ್ಕೆ ಭೇಟಿ ನೀಡಿ ರಸ್ತೆ ನಿರ್ಮಾಣದ ಜೊತೆಗೆ ಬಸ್ ಸೌಲಭ್ಯ ಪ್ರಾರಂಭಿಸುವ ಬಗ್ಗೆ ಗ್ರಾಮಸ್ಥರಿಗೆ ಭರವಸೆ ನೀಡಿದ್ದರು. ಬಿಂದು ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಬೇಡಿಕೆ ಈಡೇರಿಸುವುದಾಗಿ ತಿಳಿಸಿದ್ದರು.
ಜಿಲ್ಲಾಧಿಕಾರಿ ಗ್ರಾಮಕ್ಕೆ ಭೇಟಿ ನೀಡಿದ ಮರುದಿನವೇ ರಸ್ತೆ ಕಾಮಗಾರಿ ಪ್ರಾರಂಭವಾಗಿದ್ದು, ಮುಕ್ತಾಯ ಹಂತದಲ್ಲಿದೆ. ಕಳೆದ ಎರಡು ದಿನಗಳಿಂದ ಸಂಜೆ 5:30ಕ್ಕೆ ರಾಂಪುರಕ್ಕೆ ಬಸ್ ಬಂದು ಹೋಗುತ್ತಿದೆ. ನಮ್ಮ ಊರಿಗೆ ಪ್ರತಿ ದಿನ ಸಾಯಂಕಾಲ ಸಂಜೆ 5:30ಕ್ಕೆ ಗೌರ್ಮೆಂಟ್ ಬಸ್ ಬಂದು ಹೋಗುತ್ತಿದೆ. ರಸ್ತೆ ಕೆಲಸಾನೂ ನಡೆಯುತ್ತಿದೆ. ಬೆಳಗ್ಗೆ ಹೊತ್ತೂ ಬಸ್ ಬಂದು ಹೋದರೆ ಬಹಳ ಅನುಕೂಲ ಆಗುತ್ತದೆ ಎಂದು ಶಾಲಾಭಿವೃದ್ಧಿ ಸಮಿತಿ ಸದಸ್ಯ ರಮೇಶ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ