ಕಾಂಗ್ರೆಸ್‌ನಿಂದ ದಲಿತರ ಉದ್ಧಾರ ಅಸಾಧ್ಯ; ಬಿಜೆಪಿ

ದಲಿತರನ್ನು ರಾಜಕೀಯ ಗಾಳವಾಗಿಸಿಕೊಳ್ಳುತ್ತ ವಂಚಿಸುತ್ತಲೇ ಬರುತ್ತಿದೆ.

Team Udayavani, Sep 24, 2021, 6:37 PM IST

ಕಾಂಗ್ರೆಸ್‌ನಿಂದ ದಲಿತರ ಉದ್ಧಾರ ಅಸಾಧ್ಯ; ಬಿಜೆಪಿ

ವಿಜಯಪುರ: ಸ್ವಾತಂತ್ರ್ಯಾ ನಂತರ 75 ವರ್ಷಗಳಿಂದ ಸ್ವಾರ್ಥ ರಾಜಕಾರಣ ಮಾಡುತ್ತಲೇ ಇರುವ ಕಾಂಗ್ರೆಸ್‌ ಪಕ್ಷ, ದಲಿತರಿಗೆ ಅಭ್ಯುದಯಕ್ಕೆ ಕಾರ್ಯಕ್ರಮ ಅನುಷ್ಠಾನಕ್ಕೆ ತರದೇ ವಂಚಿಸುವ ಕೆಲಸ ಮಾಡುತ್ತಿದೆ ಎಂದು ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಹೇಳಿದರು.

ನಗರದಲ್ಲಿ ಬಿಜೆಪಿ ಎಸ್‌.ಸಿ. ಮೋರ್ಚಾದ ನಗರ ಮಂಡಲದಿಂದ ಗ್ಯಾಂಗಬಾವುಡಿ ಯಂತ್ರೋದ್ಧಾರ ಹನುಮಾನ ಮಂದಿರದಲ್ಲಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನಿಂದ ದಲಿತೋದ್ಧಾರ ಅಸಾಧ್ಯ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಆರ್‌.ಎಸ್‌. ಪಾಟೀಲ ಮಾತನಾಡಿ, ಕೇಂದ್ರ-ರಾಜ್ಯ ಸರ್ಕಾರದ ಯೋಜನೆಗಳನ್ನು ಪ್ರತಿ ಮನೆ-ಮನೆಗೆ ಮುಟ್ಟವಂತೆ ನಮ್ಮ ಎಸ್‌.ಸಿ ಮೋರ್ಚಾ ಕಾರ್ಯಕರ್ತರು ಮುಂದಾಗಬೇಕು ಎಂದು ಸಲಹೆ ನೀಡಿದರು. ಬೆಳಗಾವಿ ವಿಭಾಗದ ಸಂಘಟನಾ ಕಾರ್ಯದರ್ಶಿ ಪ್ರಕಾಶ ಅಕ್ಕಲಕೋಟ ಪ್ರತಿಜ್ಞೆ ಬೋಧಿ ಸಿ ಮಾತನಾಡಿ, ಭಾರತದ 75ನೇ ಸ್ವಾತಂತ್ರ್ಯಾ ಅಮೃತ ಮಹೋತ್ಸವದ ಸಂದರ್ಭದಲ್ಲೇ ಪ್ರಧಾನಿ ನರೇಂದ್ರ ಮೋದಿ 20 ವರ್ಷಗಳ ಅ ಧಿಕಾರವಧಿ  ಪೂರ್ಣಗೊಳಿಸುತ್ತಿದ್ದಾರೆ.

ಈ ಸಂದರ್ಭದಲ್ಲಿ ಸೇವಾ ಮತ್ತು ಸಮರ್ಪಣೆ ಅಭಿಯಾನದದ ಪ್ರತಿಜ್ಞೆ ಮಾಡಿ, ದೇಶದ ಅಖಂಡತೆ, ಪರಿಸರ ಸಂಕರಣೆ ಹಾಗೂ ಸಕಲ ಜೀವ ರಾಶಿಗಳ ಮಧ್ಯೆ ಸಹಜವಾಗಿ ಬದುಕುತ್ತೇನೆ. ಏಕ ಬಳಿಕೆಯ ಪ್ಲಾಸ್ಟಿಕ್‌ ತ್ಯಜಿಸಿ, ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ದುರಭ್ಯಾಸಗಳಿಂದ ಮುಕ್ತವಾಗಿ ಜೀವಿಸುತ್ತೇನೆ. ಹಿರಿಯರನ್ನು ಗೌರವಿಸಿ ಮತ್ತು ಕಿರಿಯನ್ನು ಪ್ರೀತಿಸುವ ಮೂಲಕ ಸಮಾಜದಲ್ಲಿ ಹೊಣೆಗಾರಿಕೆ ಪ್ರಜೆಯಾಗಿ ಬದುಕುವ ಪ್ರತಿಜ್ಞೆ ಮಾಡಬೇಕಿದೆ ಎಂದರು.

ನಗರ ಅಧ್ಯಕ್ಷ ವಿಠuಲ ನಡುವಿನಕೇರಿ ಮಾತನಾಡಿ, ಡಾ| ಬಿ.ಆರ್‌. ಅಂಬೇಡ್ಕರ್‌ ಅವರನ್ನು ಕಾಂಗ್ರೆಸ್‌ ಮತ ಬ್ಯಾಂಕ್‌ಗಾಗಿ ಬಳಸಿಕೊಂಡು ದಲಿತರನ್ನು ರಾಜಕೀಯ ಗಾಳವಾಗಿಸಿಕೊಳ್ಳುತ್ತ ವಂಚಿಸುತ್ತಲೇ ಬರುತ್ತಿದೆ. ಪ್ರಸ್ತುತ ಬಿಜೆಪಿಯಿಂದ ಕಾಂಗ್ರೆಸ್‌ ಪಕ್ಷದಿಂದ ಅನ್ಯಾಯಕ್ಕೀಡಾದ ದಲಿತರನ್ನು ಬಲಿಷ್ಠಗೊಳಿಸುವ ಕೆಲಸ ನಡೆಯುತ್ತಿದೆ. ಹೀಗಾಗಿ ಶೋಷಿತ ಸಮುದಾಯಗಳ ಜನರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಕಾರ್ಯ ಮಾಡುವ ಹೊಣೆಗಾರಿಕೆ ನಮ್ಮ ಮೇಲಿದೆ. ದಲಿತರನ್ನು ವಿದ್ಯಾವಂತರನ್ನಾಗಿ ಮಾಡಿ, ದೇಶದಲ್ಲೇ ಮಾದರಿ ಜೀವನ ನಡೆಸುವಂತೆ ಮಾಡಬೇಕಿದೆ ಎಂದರು.

ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಗೋಪಾಲ ಘಟಕಾಂಬಳೆ ಮಾತನಾಡಿ, ಕಾಂಗ್ರೆಸ್‌ ಸರ್ಕಾರ ದಲಿತರ ವಿರೋ ಧಿಯಾಗಿದೆ. ದಲಿತರನ್ನು ದುರ್ಬಳಕೆ ಮಾಡಿಕೊಂಡ ಕಾಂಗ್ರೆಸ್‌ಗೆ ದಲಿತರೆಲ್ಲ ತಕ್ಕ ಪಾಠ ಕಲಿಸಬೇಕಿದೆ. ಇದಕ್ಕಾಗಿ ಬಿಜೆಪಿ ಸರ್ಕಾರ ರೂಪಿಸಿರುವ ಯೋಜನೆ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ನಗರ ಮಂಡಲ ಅಧ್ಯಕ್ಷ ಮಳುಗೌಡ ಪಾಟೀಲ, ಮಲ್ಲಮ್ಮ ಜೋಗೂರ, ಗೀತಾ ಕುಗ್ಗುನೂರ, ಭರತ ಕೋಳಿ, ಪಾಪುಸಿಂಗ್‌ ರಜಪೂತ, ರಾಜೇಶ ತವಸೆ, ಸಂಪತ್ತ ಕೋಹಳ್ಳಿ, ರಾಜೇಂದ್ರ ವಾಲಿ, ವಿನಾಯಕ ದಹಿಂಡೆ, ಅಭಿಷೇಕ ಸಾವಂತ, ಶ್ರೀನಿವಾಸ ಕಂದಗಲ, ಮುತ್ತಣ್ಣ ಸಾಸನೂರ, ಉದಯ ಕನ್ನೋಳ್ಳಿ, ಸದಾಶಿವ ಚಲವಾದಿ, ಪ್ರಹ್ಲಾದ ಕಾಂಬಳೆ, ಸಚಿನ್‌ ಸವನಳ್ಳಿ, ಬಾಬು ಜಾಧವ, ಸತೀಶ ರಾಠೊಡ, ದುಗೇಶ ತಿಕೋಟಿಕರ, ಶ್ರೀಕಾಂತ ಗಚ್ಚಿನಮನಿ, ಸಾಗರ ಶೇರಖಾನಿ, ಬಾಬು ಮನಗೂಳಿ, ರಮೇಶ ದೇವಕರ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ದೇಶದಲ್ಲಿ ಅಧಿಕಾರಕ್ಕೆ ಬಂದ ನಂತರ ದಲಿತರಿಗೆ ಮೂಲಭೂತ ಸೌಲಭ್ಯ ಮಾತ್ರವಲ್ಲ ಎಲ್ಲ ಕ್ಷೇತ್ರಗಳಲ್ಲೂ ದಲಿತರು ಮುಂದಿದ್ದಾರೆ. ಆದರೆ ದೀರ್ಘ‌ಕಾಲ ದೇಶದಲ್ಲಿ ಆಡಳಿತ ಚುಕ್ಕಾಣಿ ಹಿಡಿದ ಕಾಂಗ್ರೆಸ್‌ ಪಕ್ಷ ದಲಿತರನ್ನು ರಾಜಕೀಯವಾಗಿ ಬಳಸಿಕೊಂಡಿತೇ ಹೊರತು ಅವರ ಅಭಿವೃದ್ಧಿ ಮಾಡಲಿಲ್ಲ.

ಅಪ್ಪು ಪಟ್ಟಣಶೆಟ್ಟಿ, ಮಾಜಿ ಸಚಿವ

ಟಾಪ್ ನ್ಯೂಸ್

voter

Odisha; ಒಂದೇ ವಿಧಾನಸಭಾ ಕ್ಷೇತ್ರಕ್ಕೆ 3 ಪಕ್ಷಗಳಿಂದ ಒಂದೇ ಕುಟುಂಬದ ಅಭ್ಯರ್ಥಿಗಳು!

HDK 2

JDSನಿಂದ ಅಂತರಕ್ಕೆ ಬಿಜೆಪಿ ಚಿಂತನೆ? ಶಾ-ಎಚ್‌ಡಿಕೆ ಭೇಟಿ ಇಲ್ಲ

UTK

Revanna ಬಂಧನ: ಸ್ಪೀಕರ್‌ ಯು.ಟಿ.ಖಾದರ್‌ಗೆ ಇ ಮೇಲ್‌?

1-modi

Ayodhya;ಮೋದಿ ಭರ್ಜರಿ ರೋಡ್‌ ಶೋ: ಜನರ ಹೃದಯ ರಾಮನಷ್ಟೇ ವಿಶಾಲ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

voter

Odisha; ಒಂದೇ ವಿಧಾನಸಭಾ ಕ್ಷೇತ್ರಕ್ಕೆ 3 ಪಕ್ಷಗಳಿಂದ ಒಂದೇ ಕುಟುಂಬದ ಅಭ್ಯರ್ಥಿಗಳು!

HDK 2

JDSನಿಂದ ಅಂತರಕ್ಕೆ ಬಿಜೆಪಿ ಚಿಂತನೆ? ಶಾ-ಎಚ್‌ಡಿಕೆ ಭೇಟಿ ಇಲ್ಲ

UTK

Revanna ಬಂಧನ: ಸ್ಪೀಕರ್‌ ಯು.ಟಿ.ಖಾದರ್‌ಗೆ ಇ ಮೇಲ್‌?

1-modi

Ayodhya;ಮೋದಿ ಭರ್ಜರಿ ರೋಡ್‌ ಶೋ: ಜನರ ಹೃದಯ ರಾಮನಷ್ಟೇ ವಿಶಾಲ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.