ಡಿಎಲ್‌, ಆರ್‌ಸಿ ಪಡೆಯಲು ಹರಸಾಹಸ


Team Udayavani, Sep 25, 2021, 4:00 AM IST

ಡಿಎಲ್‌, ಆರ್‌ಸಿ ಪಡೆಯಲು ಹರಸಾಹಸ

ಉಡುಪಿ: ಜಾಗತಿಕ ಮಟ್ಟದಲ್ಲಿ ಸೆಮಿಕಂಡಕ್ಟರ್‌ ಉತ್ಪಾದನೆ ಕೊರತೆಯಿಂದಾಗಿ ಬ್ಯಾಂಕಿಂಗ್‌ ಹಾಗೂ ಅಟೋಮೊಬೈಲ್‌ ಕ್ಷೇತ್ರದಲ್ಲಿಯೂ ಕಾರ್ಡ್‌ಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತಿದೆ.  ಅದರಲ್ಲೂ  ರಾಜ್ಯದ ಆರ್‌ಟಿಒ ಕಚೇರಿಗಳಲ್ಲಿ ಡಿಎಲ್‌ ಹಾಗೂ ಆರ್‌ಸಿ ಸ್ಮಾರ್ಟ್‌ ಕಾರ್ಡ್‌ ಗಳನ್ನು ಪಡೆಯಲು ಸಾರ್ವಜನಿಕರು ದಿನನಿತ್ಯ ಪರದಾಡುತ್ತಿದ್ದಾರೆ.

ಆರ್‌ಟಿಒ ಸ್ಮಾರ್ಟ್‌ಕಾರ್ಡ್‌ ಸರಬರಾಜು ಗುತ್ತಿಗೆ ಯನ್ನು ರೋಸ್‌ಮಾರ್ಟ್‌ ಕಂಪೆನಿಗೆ ವಹಿಸಿಕೊಡಲಾಗಿದೆ. ಆದರೆ ಬೇಡಿಕೆ ಇರುವಷ್ಟು ಲಭ್ಯ ಇಲ್ಲದ ಕಾರಣ ಪೂರೈಕೆಯೂ ಕುಂಠಿತಗೊಂಡಿದೆ.

ಉತ್ಪಾದನ ಘಟಕ ಸ್ಥಗಿತ:

ಭಾರತಕ್ಕೆ ವಿದೇಶದಿಂದ ಸ್ಮಾರ್ಟ್‌ ಕಾರ್ಡ್‌ಗಳು ಪೂರೈಕೆಯಾಗುತ್ತಿದ್ದು, ಕೊರೊನಾ ಅಲೆಯಿಂದಾಗಿ ಹಲವಾರು ಸೆಮಿಕಂಡಕ್ಟರ್‌ ಉತ್ಪಾದನ ಘಟಕಗಳು ಸ್ಥಗಿತಗೊಂಡಿರುವ ಕಾರಣ ವಿಶ್ವಾದ್ಯಂತ ಹಲವು ಸೆಮಿಕಂಡಕ್ಟರ್‌ ಉತ್ಪಾದನ ಘಟಕಗಳಿಗೆ ಬೀಗ ಬಿದ್ದಿದೆ. ಮಾರುಕಟ್ಟೆ ವ್ಯವಸ್ಥೆ ಪುನರಾರಂಭಗೊಂಡರೂ ಬೇಡಿಕೆಗೆ ತಕ್ಕಂತೆ ಕಾರ್ಡ್‌ ತಯಾರಾಗುತ್ತಿಲ್ಲ ಎನ್ನಲಾಗಿದೆ.

ಅಧಿಕಾರಿಗಳಿಗೆ ಸಂಕಷ್ಟ:

ಕಾರ್ಡ್‌ಗಳ ಅಸಮರ್ಪಕ ಪೂರೈಕೆಯಿಂದಾಗಿ ಇಲಾಖೆಯ ಅಧಿಕಾರಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ನಿರ್ದಿಷ್ಟ ದಿನದೊಳಗೆ ಗ್ರಾಹಕರಿಗೆ ವಿತರಿಸಬೇಕೆಂಬ ನಿಯಮವಿರುವ ಕಾರಣ ಗ್ರಾಹಕರು ಅಧಿಕಾರಿಗಳ ವಿರುದ್ಧ ಪ್ರಶ್ನೆ ಮಾಡುವ ಘಟನೆ ನಡೆಯುತ್ತಿದೆ. ಈ ಬಗ್ಗೆ ಗುತ್ತಿಗೆ ವಹಿಸಿಕೊಂಡಿರುವ ಕಂಪೆನಿಗೆ ಹಲವಾರು ಬಾರಿ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂಬುವುದು ಅಧಿಕಾರಿಗಳ ಅಳಲು.

ವಾಹನ ಉತ್ಪಾದನೆಗೂ ಹೊಡೆತ:

ಸೆಮಿಕಂಡಕ್ಟರ್‌ ಜಾಗತಿಕ ಉತ್ಪಾದನೆ ಕೊರತೆ ಯಿಂದಾಗಿ ಕೆಲವೊಂದು ಬಿಡಿಭಾಗಗಳ ಪೂರೈಕೆಯೂ ಕಡಿಮೆ ಯಾಗಿದೆ. ಅಟೋಮೊಬೈಲ್‌, ಬ್ಯಾಂಕಿಂಗ್‌ ಕ್ಷೇತ್ರಕ್ಕೂ ಇದರ ಪರಿಣಾಮ ತಟ್ಟುತ್ತಿದೆ. ಭಾರತ ದೇಶದಲ್ಲಿ ಸೆಮಿಕಂಡಕ್ಟರ್‌ಗಳ ಉತ್ಪಾದನ ಘಟಕಗಳು ನಿರ್ಮಾಣ ಗೊಂಡರೆ ಇಂತಹ ಸಮಸ್ಯೆ ಉದ್ಭವಿಸುವುದು ತಪ್ಪಲಿದೆ.

ಜಿಲ್ಲೆಗೂ ಸ್ಮಾರ್ಟ್‌ ಕಾರ್ಡ್‌ ಬೇಡಿಕೆ :

ಉಡುಪಿ ಜಿಲ್ಲೆಯ ಪ್ರಾದೇಶಿಕ ಸಾರಿಗೆ ಕಚೇರಿ ಯಲ್ಲಿ ತಿಂಗಳಿಗೆ 7ರಿಂದ 8 ಸಾವಿರ ದಷ್ಟು ಸ್ಮಾರ್ಟ್‌ ಕಾರ್ಡ್‌ಗಳ ಆವಶ್ಯಕತೆಯಿದೆ.15ರಿಂದ 30 ದಿನದೊಳಗೆ ಪರವಾನಿಗೆದಾರರಿಗೆ ನೀಡಬೇಕಾ ಗುತ್ತದೆ. ಆದರೆ ಈಗ ಈ ಪ್ರಕ್ರಿಯೆ ವಿಳಂಬ ವಾಗುತ್ತಿರುವುದರಿಂದ ತೊಂದರೆ ಉಂಟಾಗುತ್ತಿದೆ ಎನ್ನುತ್ತಾರೆ ಇಲಾಖೆಯ ಅಧಿಕಾರಿಗಳು.

ಸ್ಮಾರ್ಟ್‌ ಕಾರ್ಡ್‌ಗೆ ಬೇಡಿಕೆ ಇಟ್ಟಷ್ಟು ಪೂರೈಕೆ ಯಾಗುತ್ತಿಲ್ಲ. ಆಗಸ್ಟ್‌ನಿಂದಲೇ ಈ ಸಮಸ್ಯೆ ಇತ್ತು. ಈಗ ಈ ಸಮಸ್ಯೆ ಮತ್ತಷ್ಟು ಬಿಗಡಾಯಿಸಿದೆ. ಹಿಂದಿನಂತೆ ಸಮರ್ಪಕವಾಗಿ ಪೂರೈಕೆಯಾದರೆ ತ್ವರಿತ ಸೇವೆ ನೀಡಲು ಸಹಕಾರಿಯಾಗಲಿದೆ. ಜೆ.ಪಿ.ಗಂಗಾಧರ್‌, ಪ್ರಾದೇಶಿಕ ಸಾರಿಗೆ ಅಧಿಕಾರಿ

 

ಪುನೀತ್‌ ಸಾಲ್ಯಾನ್‌

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.