ಮಳೆಗಾಲದ ನಿಷೇಧ ತೆರವು; ಪ್ರವಾಸಿಗರಿಗೆ ಮುಕ್ತ


Team Udayavani, Sep 25, 2021, 4:10 AM IST

ಮಳೆಗಾಲದ ನಿಷೇಧ ತೆರವು; ಪ್ರವಾಸಿಗರಿಗೆ ಮುಕ್ತ

ಮಲ್ಪೆ:  ದೇಶ ವಿದೇಶಗಳ ಪ್ರವಾಸಿಗರ ಆಕರ್ಷಣೀಯ ತಾಣವಾದ ಮಲ್ಪೆ ಸೈಂಟ್‌ ಮೇರೀಸ್‌ ದ್ವೀಪಕ್ಕೆ ಮಳೆ ಗಾಲದಲ್ಲಿ 4 ತಿಂಗಳ ಕಾಲ ಹೇರಲಾಗಿದ್ದ ಪ್ರವೇಶ ನಿರ್ಬಂಧ ತೆರವಾಗಿದ್ದು, ಇದೀಗ ಮತ್ತೆ ದ್ವೀಪಯಾನ ಆರಂಭ ಗೊಳ್ಳುತ್ತಿದೆ.

ಮಳೆಗಾಲದಲ್ಲಿ ಸಮುದ್ರದ ಅಬ್ಬರ ಹೆಚ್ಚಾಗಿರುವುದರಿಂದ ದ್ವೀಪಕ್ಕೆ ತೆರಳುವುದು ಅಪಾಯಕಾರಿ ಎಂದು ಪ್ರತೀ ವರ್ಷ ಮೇ 15ರಿಂದ ಸೆ. 15ರ ವರೆಗೆ ಇಲ್ಲಿನ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ಹೇರುತ್ತದೆ. ಆದರೆ ಕಳೆದ ಎರಡು ವರ್ಷಗಳಿಂದ ಕೊರೊನಾ ಲಾಕ್‌ಡೌನ್‌ನಿಂದಾಗಿ ನಿಗದಿತ ನಿಷೇಧದ ಅವಧಿಯ ಮೊದಲೇ ಪ್ರವಾಸಿ ಬೋಟ್‌ಗಳು ಪ್ರಯಾಣವನ್ನು ಅರ್ಧದಲ್ಲೇ ಸ್ಥಗಿತಗೊಳಿಸಿತ್ತು. ಸೆ. 19ರಿಂದ ಮತ್ತೆ ಬೋಟ್‌ ಯಾನ ಆರಂಭಗೊಂಡಿದ್ದು ಪ್ರವಾಸಿಗರನ್ನು ಕರೆದೊಯ್ಯಲು ಸಿದ್ಧªವಾಗಿದೆ.

ಐಲ್ಯಾಂಡ್‌ನ‌ಲ್ಲಿ ಸ್ವಚ್ಛತ ಕಾರ್ಯ:

ಕಳೆದ ನಾಲ್ಕೈದು ತಿಂಗಳು ಸ್ತಬ್ಧವಾಗಿದ್ದ ದ್ವೀಪದಲ್ಲಿ ಗಿಡಗಂಟಿಗಳು ಎತ್ತರಕ್ಕೆ ಬೆಳೆದು ನಿಂತಿದ್ದು ಅದನ್ನು ತೆರವುಗೊಳಿಸುವ ಕೆಲಸ ನಡೆಯುತ್ತಿದೆ. ದ್ವೀಪದ ಸುತ್ತಲೂ ತ್ಯಾಜ್ಯಗಳು ಸಂಗ್ರಹವಾಗಿದ್ದು ಕ್ಲೀನಿಂಗ್‌ ಮೆಶಿನ್‌ ಮೂಲಕ 4 ಮಂದಿ ಸ್ವತ್ಛತೆಯಲ್ಲಿ ತೊಡಗಿದ್ದಾರೆ. ದ್ವೀಪದ ಪಶ್ಚಿಮ ಭಾಗದ ಅಪಾಯಕಾರಿ ಪ್ರದೇಶದಲ್ಲಿ ಸಮುದ್ರಕ್ಕೆ ಇಳಿಯದಂತೆ 20 ಫ್ಲ್ಯಾಗ್‌ಗಳನ್ನು ಅಳವಡಿಸಿ, ಎಚ್ಚರಿಕೆ ಬೋರ್ಡ್‌ ಹಾಕಲಾಗಿದೆ. ಈಗ ಬರುತ್ತಿರುವ ಪ್ರವಾಸಿಗರ ಕಣ್ಗಾವಲಿಗೆ ಪ್ರಸ್ತುತ 2 ಮಂದಿ ಜೀವರಕ್ಷಕ ಸಿಬಂದಿ ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ.

ಐಲ್ಯಾಂಡ್‌ ಅನ್ನು  ಪೂರ್ಣ ಹಸುರು  ಮ ಯವಾಗಿಸುವ ಮತ್ತು ಪ್ರವಾಸಿಗರಿಗೆ ನೆರಳು ನೀಡುವ ಉದ್ದೇಶದಿಂದ ಖಾಲಿ ಜಾಗವಿದ್ದಲ್ಲಿ ಎಲ್ಲ ಕಡೆ ಗಿಡ ಮರಗಳನ್ನು ಬೆಳೆಸಲಾಗುತ್ತದೆ. ಪ್ರವೇಶ ದ್ವಾರದಲ್ಲಿ ತಪಾಸಣೆಯ ಕಾರ್ಯವನ್ನು ಅ. 1ರಿಂದಲೇ ನಡೆಸಲಾಗುತ್ತದೆ ಎಂದು ನಿರ್ವಾಹಕ ಸುದೇಶ್‌ ಶೆಟ್ಟಿ ತಿಳಿಸಿದ್ದಾರೆ.

ಇನ್ನು ಮಲ್ಪೆ ಬೀಚ್‌ನಿಂದ ದ್ವೀಪಕ್ಕೆ ಹೋಗಲು 4 ಪ್ರವಾಸಿ ಸ್ಪೀಡ್‌ ಬೋಟ್‌ಗಳಿದ್ದು, ಒಂದು ಬೊಟ್‌ನಲ್ಲಿ 10 ಮಂದಿಗೆ ಮಾತ್ರ ತೆರಳಲು ಅವಕಾಶವಿದೆ. ಇದರಿಂದ ಕೇವಲ 15 ನಿಮಿಷಗಳಲ್ಲಿ  ತಲುಪಬಹುದಾಗಿದೆ.

ಅ. 1ರಿಂದ ವಾಟರ್‌ ಸ್ಪೋರ್ಟ್ಸ್ ಆರಂಭ:

ಜಲಸಾಹಸ ಕ್ರೀಡೆಗಳು, ಫುಡ್‌ಕೋರ್ಟ್‌, ಲಗೇಜ್‌ ರೂಮ್‌, ಶೌಚಾಲಯ ಸೇರಿದಂತೆ ಪೂರ್ಣ ಪ್ರಮಾಣದ ಸೌಲಭ್ಯಗಳೊಂದಿಗೆ ಅ. 1ರಿಂದ ಐಲ್ಯಾಂಡ್‌ ಪ್ರವಾಸಿಗರಿಗೆ ತೆರೆದುಕೊಳ್ಳಲಿದೆ. ಪ್ರವಾಸಿಗರಿಗೆ ಕುಳಿತುಕೊಳ್ಳಲು ಮರದ ಬೆಂಚು, ನೆರಳಿಗಾಗಿ ಶೆಲ್ಟರ್‌, ಪ್ರವೇಶ ದ್ವಾರವನ್ನು ನಿರ್ಮಿಸುವ ಇನ್ನಿತರ ಕೆಲಸ ಕಾರ್ಯಗಳು ನಡೆಯುತ್ತಿವೆ.

2 ಕಡೆ ಬೋಟಿನ ವ್ಯವಸ್ಥೆ  :

ಮಲ್ಪೆ  ಸೀವಾಕ್‌ ಬಳಿ, ಮಲ್ಪೆ ಬೀಚ್‌ ಎರಡೂ ಕಡೆಯಲ್ಲೂ  ಐಲ್ಯಾಂಡ್‌ಗೆ  ತೆರಳಲು ಪ್ರವಾಸಿ ಬೋಟಿನ ವ್ಯವಸ್ಥೆ ಇದೆ. ಆಧುನಿಕ ಸೌಕರ್ಯದೊಂದಿಗೆ, ಲೈಫ್‌ ಜಾಕೆಟ್‌, ಲೈಫ್‌ಬಾಯ್‌, ಪ್ರಥಮ ಚಿಕಿತ್ಸೆ ವ್ಯವಸ್ಥೆ, ನುರಿತ ಈಜುಗಾರರನ್ನೊಳ ಗೊಂಡ ರಕ್ಷಣ ತಂಡವನ್ನು ಹೊಂದಿದೆ. ಸೀವಾಕ್‌ ಬಳಿ ದ್ವೀಪಕ್ಕೆ ತೆರಳಲು 4 ದೊಡ್ಡ ಬೋಟುಗಳಿದ್ದು, ಇದರಲ್ಲಿ ಸುಮಾರು 120 ಮಂದಿ ಕರೆದೊಯ್ಯುವ ಸಾಮರ್ಥ್ಯವನ್ನು ಹೊಂದಿದೆ. ದ್ವೀಪಕ್ಕೆ ತೆರಳಲು ಕನಿಷ್ಠ 30 ಮಂದಿಯಾದರೂ ಭರ್ತಿಯಾಗಬೇಕು. ಬೆಳಗ್ಗೆ  10.30 ಮತ್ತು ಅಪರಾಹ್ನ 3.30ಕ್ಕೆ ರೆಗ್ಯುಲರ್‌ ಟ್ರಿಪ್‌ ಆಲ್ಲದೆ ಅಪಾರ ಸಂಖ್ಯೆಯಲ್ಲಿ ಪ್ರವಾಸಿಗರು ಬಂದರೆ ಬೆಳಗ್ಗೆ 9ರಿಂದ ಸಂಜೆ 5ರ ವರೆಗೂ ನಿರಂತರವಾಗಿರುತ್ತದೆ.

ಟಾಪ್ ನ್ಯೂಸ್

1-wewqewewq

H.D. Revanna ಎಸ್ ಐಟಿ ವಶಕ್ಕೆ ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewewq

H.D. Revanna ಎಸ್ ಐಟಿ ವಶಕ್ಕೆ ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

1-wewqewq

Belagavi; ಶೆಟ್ಟರ್ ಅವರಿಗೆ ಆಶೀರ್ವಾದ ಮಾಡಿದ ವಿವಿಧ ಮಠಾಧೀಶರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.