ಎರಡೂವರೆ ಸಾವಿರ ಬಲ್ಬ್ ಅಳವಡಿಕೆ ಪೂರ್ಣ

ಮಂಗಳೂರಿನ ರಸ್ತೆಗಳಿಗೆ ಎಲ್‌ಇಡಿ ಬೀದಿದೀಪ

Team Udayavani, Sep 26, 2021, 4:02 AM IST

ಎರಡೂವರೆ ಸಾವಿರ ಬಲ್ಬ್ ಅಳವಡಿಕೆ ಪೂರ್ಣ

ಮಹಾನಗರ: ನಗರದಲ್ಲಿ ಈಗಿರುವ ಬೀದಿ ದೀಪಗಳನ್ನು ಎಲ್‌ಇಡಿ ಬೀದಿ ದೀಪಗಳಾಗಿ ಪರಿವರ್ತಿಸುವ ಕಾಮಗಾರಿ ಈಗಾಗಲೇ ಆರಂಭಗೊಂಡಿದ್ದು, ಮೊದಲ ಹಂತದಲ್ಲಿ ಬೀಚ್‌ ಪ್ರದೇಶದಿಂದ ಅನುಷ್ಠಾನಕ್ಕೆ ತರಲು ನಿರ್ಧರಿಸಲಾಗಿದೆ.

ನಗರದಲ್ಲಿ ಈಗಾಗಲೇ 2,500ಕ್ಕೂ ಹೆಚ್ಚಿನ ಎಲ್‌ಇಡಿ ಬೀದಿದೀಪ ಅಳವಡಿಕೆ ಕೆಲಸ ಪೂರ್ಣಗೊಂಡಿದೆ. ಸದ್ಯ ತಣ್ಣೀರುಬಾವಿ ಸುತ್ತಮುತ್ತ ಎಲ್‌ಇಡಿ ಬೀದಿ ದೀಪ ಅಳವಡಿಕೆ ಕಾರ್ಯ ನಡೆಯುತ್ತಿದೆ. ಮಂಗಳೂರಿನ ಬೀಚ್‌ ಪ್ರದೇಶದಲ್ಲಿರುವ ಬೀದಿ ದೀಪಗಳು ನಿರ್ವಹಣೆ ಸರಿಯಿಲ್ಲ ಎಂಬ ದೂರುಗಳು ಬರುತ್ತಿದ್ದವು. ಸಮುದ್ರದ ಉಪ್ಪಿನಾಂಶದಿಂದಾಗಿ ಬೀದಿ ದೀಪಗಳಲ್ಲಿ ತುಕ್ಕು ಹಿಡಿದು ಆಗಾಗ್ಗೆ ಸಮಸ್ಯೆ ಉಂಟಾಗುತ್ತಿತ್ತು. ಈ ನಿಟ್ಟಿನಲ್ಲಿ ಬೀಚ್‌ ಪ್ರದೇಶದಲ್ಲಿ ಎಲ್‌ಇಡಿ ಅಳವಡಿಸುವ ಕೆಲಸಕ್ಕೆ ಮೊದಲು ಆದ್ಯತೆ ನೀಡಲಾಗಿದೆ. ಅದೇ ರೀತಿ ಇತರ ವಾರ್ಡ್‌ಗಳಲ್ಲಿಯೂ ಕಾಮಗಾರಿ ಸಾಗುತ್ತಿದೆ.

ಒಟ್ಟು 67,000 ಎಲ್‌ಇಡಿ ಬೀದಿ ದೀಪ ಅಳವಡಿಕೆ
ಸ್ಮಾರ್ಟ್‌ಸಿಟಿ ವತಿಯಿಂದ ಮಂಗಳೂರು ನಗರದಲ್ಲಿ ಎಲ್ಲ ವಾರ್ಡ್‌ ಗಳಲ್ಲಿ ಸೇರಿ ಒಟ್ಟು 67,000 ಎಲ್‌ಇಡಿ ಬೀದಿ ದೀಪಗಳನ್ನು ಅಳವಡಿಸಲು ನಿರ್ಧರಿಸಲಾಗಿದೆ. ಕಳೆದ ಮಾರ್ಚ್‌ನಿಂದ ಆರಂಭಗೊಂಡ ಕಂಬಗಳ ಸಮೀಕ್ಷೆ ಕಾರ್ಯ ಈಗಾಗಲೇ ಪೂರ್ಣಗೊಂಡಿದೆ. ಹೊಸದಾಗಿ ಅಳವಡಿಸಲಾಗುವ ಎಲ್‌ಇಡಿ ಬಲ್ಬ್ ಗಳನ್ನು ನಗರದ ರಸ್ತೆಗಳಿಗೆ ಅನುಗುಣವಾಗಿ ಬದಲಾವಣೆ ಮಾಡಲು ನಿರ್ಧರಿಸಲಾಗಿದೆ. ನಗರದ ಜನನಿಬಿಡ ರಸ್ತೆ, ಒಳರಸ್ತೆ, ಸದಾ ವಾಹನ ಸಂಚಾರದ ರಸ್ತೆ ಹೀಗೆ ವಿವಿಧ ಪ್ರಾಕಾರಗಳಲ್ಲಿ ವಿಂಗಡಿಸಲಾಗುತ್ತದೆ. ಅದಕ್ಕೆ ಅನುಗುಣವಾಗಿ ವೈಜ್ಞಾನಿಕ ರೀತಿಯಲ್ಲಿ ಸಾಮರ್ಥ್ಯಕ್ಕೆ ತಕ್ಕಂತೆ ಬಲ್ಬ್ ಗಳನ್ನು ಅಳವಡಿಸಲಾಗುತ್ತದೆ. ಈ ವರ್ಷಾಂತ್ಯಕ್ಕೆ ಎಲ್‌ಇಡಿ ಬೀದಿ ದೀಪ ಅಳವಡಿಕೆ ಪೂರ್ಣಗೊಳಿಸುವ ಇರಾದೆ ಯನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ. 7 ವರ್ಷಗಳ ಕಾಲ ಬೀದಿ ದೀಪಗಳ ನಿರ್ವಹಣೆಯ ಈಗಾಗಲೇ ಟೆಂಡರ್‌ ವಹಿಸಿಕೊಂಡಿರುವ ಸಂಸ್ಥೆಗಳ ಜವಾಬ್ದಾರಿಯಾಗಿರುತ್ತದೆ.

ಇದನ್ನೂ ಓದಿ:ದಲಿತ ಬಾಲಕ ದೇವಸ್ಥಾನ ಪ್ರವೇಶ ಪ್ರಕರಣ |ಅಸ್ಪೃಶ್ಯತೆ ಮುಕ್ತ ಗ್ರಾಮಕ್ಕಾಗಿ ಜನತೆ ಪ್ರತಿಜ್ಞೆ 

ಸ್ಮಾರ್ಟ್‌ ಮೀಟರ್‌ ಅಳವಡಿಕೆ
ಮಂಗಳೂರಿನ ಎಲ್‌ಇಡಿ ಬೀದಿ ದೀಪಗಳುಳ್ಳ ವಿದ್ಯುತ್‌ ಕಂಬಗಳಿಗೆ ಮುಂದಿನ ದಿನಗಳಲ್ಲಿ ಸ್ಮಾರ್ಟ್‌ ಮೀಟರ್‌ ಅಳವಡಿಸಲು ಚಿಂತನೆ ನಡೆಯುತ್ತಿದೆ. ಈ ರೀತಿ ಸ್ಮಾರ್ಟ್‌ ಮೀಟರ್‌ ಅಳವಡಿಸಿದರೆ ಎಲ್‌ಇಡಿ ಬಲ್ಬ್ಗಳ ಮೇಲ್ವಿಚಾರಣೆ ನಡೆಸಲು ಸುಲಭವಾಗುತ್ತದೆ. ಮೀಟರ್‌ ರೀಡಿಂಗ್‌, ಯಾವ ಪ್ರದೇಶದಲ್ಲಿ ಲೈಟ್‌ ಉರಿಯುತ್ತಿಲ್ಲ, ಯಾವ ಕಂಬದಲ್ಲಿ ಬಲ್ಬ್ ಸರಿಯಿಲ್ಲ ಎಂಬಿತ್ಯಾದಿ ಮಾಹಿತಿಯನ್ನು ಜಿಪಿಎಸ್‌ ಆಧಾರಿತವಾಗಿ ಮೊಬೈಲ್‌ನಲ್ಲಿಯೇ ಪಡೆಯಲು ಸಾಧ್ಯವಾಗುತ್ತದೆ. ಸ್ಮಾರ್ಟ್‌ ಮೀಟರ್‌ ಅಳವಡಿಸುವ ಕುರಿತು ಸ್ಮಾರ್ಟ್‌ಸಿಟಿ, ಸ್ಥಳೀಯಾಡಳಿತದಿಂದ ಮೆಸ್ಕಾಂನ ಅನುಮತಿ ಪಡೆಯುವ ಕೆಲಸ ನಡೆಯುತ್ತಿದೆ.

ಮತ್ತಷ್ಟು ವೇಗ
ನಗರದಲ್ಲಿ ಈಗಾಗಲೇ ಅಳವಡಿಸಿದ ಬೀದಿ ದೀಪಗಳನ್ನು ಎಲ್‌ಇಡಿ ಬೀದಿದೀಪಗಳಾಗಿ ಬದಲಾಯಿಸುವ ಕೆಲಸ ಸ್ಮಾರ್ಟ್‌ಸಿಟಿ ವತಿಯಿಂದ ನಡೆಯುತ್ತಿದೆ. ಈಗಾಗಲೇ ನಗರದಲ್ಲಿ 2,500 ಎಲ್‌ಇಡಿ ಬೀದಿ ದೀಪಗಳನ್ನು ಅಳವಡಿಸಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟ ವೇಗ ನೀಡಲಾಗುತ್ತದೆ. ಎಲ್‌ಇಡಿ ಬೀದಿ ದೀಪ ಅಳವಡಿಕೆಯಿಂದ ವಿದ್ಯುತ್‌ ದರದ ಹೊರೆ ಕಡಿಮೆಯಾಗಲಿದೆ.
-ಪ್ರೇಮಾನಂದ ಶೆಟ್ಟಿ, ಮನಪಾ ಮೇಯರ್‌

 

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.