ಮೀನು ಹಿಡಿಯಲು ಹೋಗಿ ಕಡಲ ಪಾಲದ ನೌಕಾನೆಲೆ ಉದ್ಯೋಗಿ
Team Udayavani, Sep 26, 2021, 3:24 PM IST
ಅಂಕೋಲಾ:ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಸಮುದ್ರದಲ್ಲಿ ಮುಳುಗಿ ನೌಕಾನೆಲೆ ಉದ್ಯೋಗಿಯೋರ್ವ ಮೃತ ಪಟ್ಟ ಘಟನೆ ಭಾನುವಾರ ಬೆಲೇಕೆರಿಯಲ್ಲಿ ನಡೆದಿದೆ.
ನೌಕಾನೆಲೆ ಉದ್ಯೋಗಿಯಾಗಿರುವ ತಾಲೂಕಿನ ಬಾವಿಕೇರಿ ಗ್ರಾಮದ ನಿವಾಸಿ ಪುರಂದರ ಶಿವಾನಂದ ನಾಯ್ಕ ಎಂಬಾತನೇ ಮೃತಪಟ್ಟ ವ್ಯಕ್ತಿ.
ಈತನು ಭಾನುವಾರ ರಜೆ ಇದ್ದ ಕಾರಣ ತನ್ನ ಸ್ನೇಹಿತರೊಂದಿಗೆ ಬೆಲೇಕೆರಿ ತೀರದಲ್ಲಿ ಮೀನುಗಾರಿಕೆ ನಡೆಸಲು ಹೋಗಿದ್ದನು. ಸಮುದ್ರದಲ್ಲಿ ಆಕಸ್ಮಿಕವಾಗಿ ಬಿದ್ದು ಕೆಲ ಕಾಲ ಕಣ್ಮರೆಯಾದ ಇತನನ್ನು ಅಂಕೋಲಾ ಪೊಲೀಸರು ಮತ್ತು ಕರಾವಳಿ ಕಾವಲು ಪಡೆ ತಂಡ, ಸ್ಥಳೀಯರು ಹುಡುಕಾಟ ನಡೆಸಿದ ಬಳಿಕ ಮೃತ ದೇಹ ಪತ್ತೆ ಹಚ್ಚಿದ್ದಾರೆ.
ಇದನ್ನೂ ಓದಿ:ಬೆಳಗಾವಿ ಮಾದರಿ ಯಶಸ್ವಿಯಾದರೆ ಪ್ರತಿ ಪಾಲಿಕೆಯಲ್ಲೂ ಇ-ಗ್ರಂಥಾಲಯ ನಿರ್ಮಾಣ: ಸಿಎಂ
ಕರಾವಳಿ ಕಾವಲು ಪಡೆಯ ಬೋಟ್ ಕ್ಯಾಪ್ಟನ್ ಆನಂದ ಗಾಂವಕರ್, ಎಎಸ್ಐ ರವಿಂದ್ರ ನಾಯ್ಕ. ಸಿಬ್ಬಂದಿ ರತ್ನಾಕರ ನಾಯ್ಕ ಹುಡುಕಾಟ ನಡೆಸಿದ್ದಾರೆ. ಅಂಕೋಲಾ ಪಿಎಸ್ಐ ಪ್ರವೀಣ ಕುಮಾರ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ