’ಎದೆ ತುಂಬಿ ಹಾಡುವೆನು’ ಮೂಲಕ ಮನೆಮಾತಾದ ಸಂದೇಶ್‌ ನೀರುಮಾರ್ಗ

ಗ್ರಾಮೀಣ ಪ್ರತಿಭೆ ಸಂದೇಶ್‌ ಕರುನಾಡಿನ ಫೆವರಿಟ್‌!

Team Udayavani, Sep 27, 2021, 7:06 AM IST

ಗ್ರಾಮೀಣ ಪ್ರತಿಭೆ ಸಂದೇಶ್‌ ಕರುನಾಡಿನ ಫೆವರಿಟ್‌!

ಮಹಾನಗರ: ಸಾಧಿಸುವ ಛಲ ಇದ್ದರೆ ಯಾವುದೇ ಅಡೆ ತಡೆ ಮೀರಿ ಗೆಲುವು ಸಾಧಿಸಬಹುದು ಎಂಬುವುದಕ್ಕೆ ಇವರು ಉತ್ತಮ ಉದಾಹರಣೆ. ಮನೆಯಲ್ಲಿ ಕಡು ಬಡತನ ಇದ್ದರೂ ಸಂಗೀತಕ್ಕೆ ಇದು ಅಡ್ಡಿಯಾಗಲಿಲ್ಲ. ತನ್ನ ಸ್ವ -ಆಸಕ್ತಿಯಿಂದ ಸಂಗೀತ ಕಲಿತು ಇದೀಗ ಕರುನಾಡಿನಲ್ಲಿ ಮನೆಮಾತಾದ ಕರಾವಳಿಯ ಹಾಡುಗಾರ ಸಂದೇಶ್‌ ನೀರುಮಾರ್ಗ ಅಪ್ಪಟ ಗ್ರಾಮೀಣ ಪ್ರತಿಭೆ.

ಕಲರ್ ಕನ್ನಡ ವಾಹಿನಿಯಲ್ಲಿ ಪ್ರಸಾರ ವಾಗುತ್ತಿರುವ “ಎದೆ ತುಂಬಿ ಹಾಡುವೆನು’ ರಿಯಾಲಿಟಿ ಶೋ ಮುಖೇನ ತನ್ನ ವಿಶಿಷ್ಟ ಹಾಡುಗಳ ಮೂಲಕ ಮೋಡಿ ಮಾಡುತ್ತಿದ್ದಾರೆ ಸಂದೇಶ್‌.

ಭಜನೆಯತ್ತ ಆಸಕ್ತಿ
ನೀರುಮಾರ್ಗದ ತನ್ನ ಮನೆಯ ಪಕ್ಕದಲ್ಲಿಯೇ ಸುಬ್ರಹ್ಮಣ್ಯ ಭಜನ ಮಂದಿರ ಇದ್ದ ಕಾರಣ ಅದೇ ಅವರಿಗೆ ಮೊದಲ ಕಲಿಕಾ ಶಾಲೆಯಾಗಿತ್ತು. ಬಾಲ್ಯದಲ್ಲಿಯೇ ಭಜನೆಯತ್ತ ಆಸಕ್ತಿ ಹೊಂದಿದ ಇವರು ಬಳಿಕ ಹಲವಾರು ಏಳು ಬೀಳು ಕಂಡು ಸದ್ಯ ಈ ಶೋನ ಟಾಪ್‌ ಸಿಂಗರ್‌ ಆಗಿ ಹೊರಹೊಮ್ಮುತ್ತಿದ್ದಾರೆ.

ಗಾಯನಕ್ಕೆ ಸಂಗೀತ ದಿಗ್ಗಜರಾದ ರಾಜೇಶ್‌ ಕೃಷ್ಣನ್‌, ಗುರುಕಿರಣ್‌, ಹರಿಕೃಷ್ಣ, ರಘು ದೀಕ್ಷಿತ್‌ ಅವರ ಬಳಿ ಶಹಭಾಸ್‌ ಎನಿಸಿಕೊಂಡ ಸಂದೇಶ್‌ ಅವರು ಹಾಡುಗಾರಿಕೆ ಜತೆ ನಟನೆ ಕೂಡ ಮಾಡಬಲ್ಲರು. ಸಾಹಿತ್ಯದಲ್ಲಿಯೂ ನಿಸ್ಸೀ ಮರು. ಈಗಾಗಲೇ ಹಲವು ಹಾಡುಗಳನ್ನು ಬರೆದಿದ್ದು, ಕಿರುಚಿತ್ರ ನಟನೆಯಲ್ಲಿಯೂ ತನ್ನನ್ನು ಗುರುತಿಸಿಕೊಂಡಿದ್ದಾರೆ.

21 ವರ್ಷಗಳಿಂದ ಭಜನೆಯಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದು, ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಇವರ ಸಾಧನೆಗೆ ಪತ್ನಿ ಮನಿಷಾ ಸಂದೇಶ್‌ ಕೂಡ ಬೆಂಬಲ ನೀಡುತ್ತಿದ್ದಾರೆ.

ಇದನ್ನೂ ಓದಿ:65 ಗಂಟೆಗಳಲ್ಲಿ 20 ಸಭೆ ನಡೆಸಿದ ಮೋದಿ : ವಿಮಾನ ಪ್ರಯಾಣದ ವೇಳೆಯೂ 4 ಮೀಟಿಂಗ್‌

ಸಾಧನೆಗೆ‌ ಬಡತನ ಅಡ್ಡಿಯಾಗಲಿಲ್ಲ
ತನ್ನ ಪದವಿ ಪೂರ್ಣಗೊಂಡ ಬಳಿಕ ಖಾಸಗಿ ಕೊರಿಯರ್‌ ಸಂಸ್ಥೆಯೊಂದರಲ್ಲಿ ಉದ್ಯೋಗಕ್ಕೆ ಸೇರಿದರು. ಬಳಿಕ ಇವರ ಕೈ ಹಿಡಿದದ್ದು ಚಾಲಕ ವೃತ್ತಿ. ರಿಕ್ಷಾದಲ್ಲಿ ದಿನವಿಡೀ ಬಾಡಿಗೆಗೆ ತೆರಳುತ್ತಿದ್ದರು. ಆದರೆ ಆ ವೇಳೆ ಅಪ್ಪಳಿಸಿದ ಕೋವಿಡ್‌ನಿಂದಾಗಿ ಹೆಚ್ಚಿನ ಬಾಡಿಗೆ ಸಿಗದೇ ಮತ್ತೆ ಸಂಕಷ್ಟ ಅನುಭವಿಸಬೇಕಾಯಿತು. ಆ ವೇಳೆ ರಿಕ್ಷಾ ಚಾಲಕ ದುಡಿಮೆ ಬಿಟ್ಟು, ಕುಲಶೇಖರ ಕೈಕಂಬದಲ್ಲಿ ಮೀನು ಮಾರಾಟ ಮಾಡಲು ಸಂದೇಶ್‌ ಮುಂದಾದರು.

ಕೋವಿಡ್‌ ಅನ್‌ಲಾಕ್‌ ಬಳಿ ಆಹಾರ ಡೆಲಿವರಿ ಬಾಯ್‌ ಆಗಿಯೂ ಕೆಲಸ ನಿರ್ವಹಿಸುತ್ತಿದ್ದರು. ಆಗ ಕಲರ್ ಕನ್ನಡ ವಾಹಿನಿಯ “ಎದೆ ತುಂಬಿ ಹಾಡುವೆನು’ ರಿಯಾಲಿಟಿ ಶೋ ಆಫರ್‌ ಬಂತು.

ಹಾಡುಗಾರನಾಗುವ ಆಸೆಯಿತ್ತು
ನಾನೊಬ್ಬ ಉತ್ತಮ ಹಾಡುಗಾರ ಆಗಬೇಕೆಂಬ ಆಸೆ ಬಾಲ್ಯದಿಂದಲೇ ಇತ್ತು. ಸದ್ಯ ನನಗೆ ದೊಡ್ಡ ವೇದಿಕೆ ಸಿಕ್ಕಿದೆ. ಸಂಗೀತ ಗುರುಗಳ ಮಾರ್ಗದರ್ಶನದಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪ್ರದರ್ಶನ ನೀಡುತ್ತೇನೆ. ಜೀವನದಲ್ಲಿ ಅನೇಕ ಏಳು ಬೀಳುಗಳನ್ನು ನೋಡಿದ್ದು, ಮುಂದಿನ ದಿನಗಳಲ್ಲಿ ಸಂಗೀತ ಕ್ಷೇತ್ರದಲ್ಲೇ ಮುಂದುವರಿಯುತ್ತೇನೆ.
-ಸಂದೇಶ್‌ ನೀರುಮಾರ್ಗ, ಗಾಯಕರು

ಟಾಪ್ ನ್ಯೂಸ್

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.