ಆರೋಗ್ಯಕ್ಕೆ ಡಿಜಿ ಕ್ರಾಂತಿ; ಆಯುಷ್ಮಾನ್‌ ಭಾರತ್‌ ಡಿಜಿಟಲ್‌ ಮಿಷನ್‌ಗೆ ಮೋದಿ ಚಾಲನೆ


Team Udayavani, Sep 28, 2021, 6:45 AM IST

ಆರೋಗ್ಯಕ್ಕೆ ಡಿಜಿ ಕ್ರಾಂತಿ; ಆಯುಷ್ಮಾನ್‌ ಭಾರತ್‌ ಡಿಜಿಟಲ್‌ ಮಿಷನ್‌ಗೆ ಮೋದಿ ಚಾಲನೆ

ಹೊಸದಿಲ್ಲಿ: ದೇಶದ ಪ್ರತಿಯೊಬ್ಬ ನಾಗರಿಕನಿಗೂ ವಿಶಿಷ್ಟ ಡಿಜಿಟಲ್‌ ಆರೋಗ್ಯ ಸಂಖ್ಯೆ ಒದಗಿಸುವಂಥ “ಆಯುಷ್ಮಾನ್‌ ಭಾರತ್‌ ಡಿಜಿಟಲ್‌ ಮಿಷನ್‌’ಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಚಾಲನೆ ನೀಡಿದ್ದಾರೆ. ಈ ಯೋಜನೆಯು ದೇಶದ ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆಯನ್ನು ತರಲಿದೆ ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ.

ವೀಡಿಯೋ ಕಾನ್ಫರೆನ್ಸ್‌ ಮೂಲಕ ಯೋಜನೆ ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ, “ಡಿಜಿಟಲ್‌ ಮೂಲಸೌಕರ್ಯವು ಈಗ ಭಾರತೀಯ ಜನಸಾಮಾನ್ಯನಿಗೆ ಪಡಿತರದಿಂದ ಆಡಳಿತದವರೆಗೆ ಎಲ್ಲವನ್ನೂ ಅತ್ಯಂತ ತ್ವರಿತ ಹಾಗೂ ಪಾರದರ್ಶಕವಾಗಿ ಒದಗಿಸುತ್ತಿದೆ. ಆಡಳಿತಾತ್ಮಕ ಸುಧಾರಣೆಯಲ್ಲಿ ಹಿಂದೆಂದೂ ಕಂಡಿರದಂತೆ ತಂತ್ರಜ್ಞಾನವನ್ನು ಬಳಕೆ ಮಾಡಲಾಗುತ್ತಿದೆ. ಆರೋಗ್ಯ ಸೇವೆಗಳನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಈ ಆಯುಷ್ಮಾನ್‌ ಭಾರತ್‌ ಡಿಜಿಟಲ್‌ ಯೋಜನೆಯು ಮಹತ್ವದ ಮೈಲುಗಲ್ಲು’ ಎಂದು ಹೇಳಿದ್ದಾರೆ.

ಈ ಯೋಜನೆಯಿಂದಾಗಿ ದೇಶದ ಯಾವುದೇ ಮೂಲೆಯಲ್ಲಿರುವ ವೈದ್ಯನಿಗೂ ತನ್ನ ರೋಗಿಯ ಆರೋಗ್ಯದ ಸಂಪೂರ್ಣ ವಿವರವನ್ನು ಪಡೆಯಲು ಸಾಧ್ಯವಾಗುತ್ತದೆ. ಇದು ಬಡ ಮತ್ತು ಮಧ್ಯಮವರ್ಗದವರಿಗೆ ಅತಿ ಹೆಚ್ಚು ಪ್ರಯೋಜನಕಾರಿ ಎಂದೂ ಮೋದಿ ಹೇಳಿದ್ದಾರೆ.

2020ರ ಆಗಸ್ಟ್‌ 15ರಂದು ಕೆಂಪುಕೋಟೆಯಲ್ಲಿ ದೇಶವನ್ನುದ್ದೇಶಿಸಿ ಭಾಷಣ ಮಾಡಿದ್ದ ವೇಳೆ ಪ್ರಧಾನಿ ಮೋದಿ ಅವರು ಈ ಯೋಜನೆಯನ್ನು ಘೋಷಿಸಿದ್ದರು. ತದನಂತರ 6 ಕೇಂದ್ರಾಡಳಿತ ಪ್ರದೇಶಗಳಲ್ಲಿ ಈ ಯೋಜನೆಯನ್ನು ಪ್ರಾಯೋಗಿಕವಾಗಿ ಜಾರಿ ಮಾಡಲಾಗಿತ್ತು. ಸೋಮವಾರದಿಂದ ಇದು ದೇಶಾದ್ಯಂತ ಅನುಷ್ಠಾನಗೊಂಡಿದೆ. ಆಯುಷ್ಮಾನ್‌ ಭಾರತ್‌ ಪ್ರಧಾನಮಂತ್ರಿ ಜನಾರೋಗ್ಯ ಯೋಜನೆಗೆ 3 ವರ್ಷ ತುಂಬು ತ್ತಲೇ ಈ ಹೊಸ ಯೋಜನೆ ಜಾರಿ ಮಾಡಲಾಗಿದೆ.

ಇದನ್ನೂ ಓದಿ:ಒಂದೇ ದೋಣಿಯಲ್ಲಿ ಮುಂಬೈ ಇಂಡಿಯನ್ಸ್‌ -ಪಂಜಾಬ್‌ ಕಿಂಗ್ಸ್‌

ಆರೋಗ್ಯ-ಆತಿಥ್ಯ
ಸೋಮವಾರ ವಿಶ್ವ ಪ್ರವಾಸಿ ದಿನವೂ ಆಗಿದ್ದ ಹಿನ್ನೆಲೆಯಲ್ಲಿ ಆ ಕುರಿತೂ ಪ್ರಸ್ತಾಪಿಸಿದ ಮೋದಿ, “ಆರೋಗ್ಯ ಮೂಲಸೌಕರ್ಯವನ್ನು ಬಲಿಷ್ಠಗೊಳಿಸುವುದರಿಂದ ಪ್ರವಾಸೋದ್ಯಮ ಕ್ಷೇತ್ರಕ್ಕೂ ಉತ್ತೇಜನ ಸಿಗುತ್ತದೆ. ಗೋವಾ, ಹಿಮಾಚಲ ಪ್ರದೇಶದಂಥ ಪ್ರವಾಸಿ ತಾಣಗಳಲ್ಲಿ ಬಹುತೇಕ ಎಲ್ಲ ವಯಸ್ಕರೂ ಕೊರೊನಾ ಲಸಿಕೆಯ ಕನಿಷ್ಠ 1 ಡೋಸ್‌ ಪಡೆದಿದ್ದಾರೆ. ಹೀಗಾಗಿ ಅಂಥ ಪ್ರದೇಶಗಳಿಗೆ ತೆರಳಲು ಪ್ರವಾಸಿಗರು ಇಷ್ಟಪಡುತ್ತಾರೆ. ಸುರಕ್ಷತೆಯ ಭಾವ ಅವರಲ್ಲಿ ಮೂಡುತ್ತದೆ’ ಎಂದು ಹೇಳಿದ್ದಾರೆ.

ಆರೋಗ್ಯಸೇತು, ಕೊವಿನ್‌, ಪ್ರಮಾಣಪತ್ರಕ್ಕೆ ಮೆಚ್ಚುಗೆ
ಭಾರತದಲ್ಲಿ ಸುಮಾರು 130 ಕೋಟಿ ಆಧಾರ್‌ ಬಳಕೆದಾರರು, 118 ಕೋಟಿ ಮೊಬೈಲ್‌ ಚಂದಾದಾರರು, 80 ಕೋಟಿ ಇಂಟರ್ನೆಟ್‌ ಬಳಕೆದಾರರು ಮತ್ತು 43 ಕೋಟಿ ಜನಧನ ಬ್ಯಾಂಕ್‌ ಖಾತೆದಾರರು ಇದ್ದಾರೆ. ಇಂಥದ್ದೊಂದು ಪರಸ್ಪರ ಸಂಪರ್ಕಿತ ಮೂಲಸೌಕರ್ಯವನ್ನು ಜಗತ್ತಿನ ಯಾವ ಮೂಲೆಯಲ್ಲೂ ಕಾಣಲು ಸಾಧ್ಯವಿಲ್ಲ. ಈಗ ಭಾರತದ ಜನರು ಡಿಜಿಟಲ್‌ ಆರೋಗ್ಯ ಗುರುತಿನ ಸಂಖ್ಯೆಯನ್ನೂ ಪಡೆಯಲಿದ್ದಾರೆ ಎಂದೂ ಮೋದಿ ಹೇಳಿದ್ದಾರೆ. ಇದೇ ವೇಳೆ, ತಂತ್ರಜ್ಞಾನದ ಮಹತ್ವದ ಕುರಿತು ಮಾತನಾಡಿದ ಪ್ರಧಾನಿ, “ಆರೋಗ್ಯಸೇತು ಆ್ಯಪ್‌ ಕೊರೊನಾ ಸೋಂಕು ಹರಡುವಿಕೆ ತಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಈಗಾಗಲೇ ಭಾರತವು 90 ಕೋಟಿ ಡೋಸ್‌ ಲಸಿಕೆ ವಿತರಿಸಿದೆ. ಇದರಲ್ಲಿ ಕೊವಿನ್‌ ಅಪ್ಲಿಕೇಶನ್‌ ಮತ್ತು ಅದರ ಪೋರ್ಟಲ್‌ನ ಪಾತ್ರ ದೊಡ್ಡದಿದೆ. ನೋಂದಣಿಯಿಂದ ಪ್ರಮಾಣಪತ್ರದವರೆಗೆ ಇಷ್ಟೊಂದು ಅದ್ಭುತವಾದ ವ್ಯವಸ್ಥೆ ಎಲ್ಲಿಯೂ ಇಲ್ಲ’ ಎಂದೂ ಹೇಳಿದ್ದಾರೆ. ಕಳೆದ ವಾರವಷ್ಟೇ ಯುಕೆ ಸರಕಾರವು ಭಾರತದ ಲಸಿಕೆ ಪ್ರಮಾಣಪತ್ರದ ಬಗ್ಗೆ ತಕರಾರು ಎತ್ತಿರುವ ಹಿನ್ನೆಲೆಯಲ್ಲಿ ಮೋದಿ ಅವರ ಈ ಮಾತುಗಳು ಮಹತ್ವ ಪಡೆದಿವೆ.

 

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.