11 ಟನ್ ಪ್ಲಾಸ್ಟಿಕ್ ಸಂಗ್ರಹಿಸಿ
Team Udayavani, Sep 28, 2021, 1:54 PM IST
ಬಳ್ಳಾರಿ: ಸ್ವತ್ಛ ಭಾರತ ಆಂದೋಲನದಅಂಗವಾಗಿ ಅ. 1ರಿಂದ 31ರವರೆಗೆಜಿಲ್ಲೆಯಾದ್ಯಂತ ಒಂದು ಬಾರಿ ಬಳಕೆ ಮಾಡಬಹುದಾದ 11 ಟನ್ ಪ್ಲಾಸ್ಟಿಕ್ಗಳನ್ನು ಸಂಗ್ರಹಿಸಬೇಕು. ಇದಕ್ಕೆ ಸಂಬಂಧಿಸಿದಂತೆ ಸಮಿತಿಯೊಂದನ್ನು ರಚಿಸಿ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ಪವವಕುಮಾರ ಮಾಲಪಾಟಿ ಅ ಧಿಕಾರಿಗಳಿಗೆಸೂಚನೆ ನೀಡಿದರು.
ನಗರದ ಜಿಲ್ಲಾ ಧಿಕಾರಿಗಳ ಕಚೇರಿಯಲ್ಲಿಸೋಮವಾರ ನಡೆದ ನೆಹರು ಯುವಕೇಂದ್ರದ ಯುವ ಕಾರ್ಯಕ್ರಮಗಳಜಿಲ್ಲಾ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಜಿಲ್ಲಾನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ಮತ್ತು ಜಿಪಂ ಅಧಿ ಕಾರಿಗಳು,ನೆಹರು ಯುವಕೇಂದ್ರದ ಅ ಧಿಕಾರಿಗಳುಹಾಗೂ ಇನ್ನಿತರೆ ಅ ಧಿಕಾರಿಗಳ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿ 11 ಸಾವಿರ ಕೆಜಿಒಂದು ಬಾರಿ ಬಳಕೆ ಮಾಡಬಹುದಾದ ಪ್ಲಾಸ್ಟಿಕ್ ಸಂಗ್ರಹಿಸಬೇಕು ಎಂದು ಅವರು ತಿಳಿಸಿದರು.
ಕ್ಯಾಚ್ ದೀ ರೇನ್ ಹಾಗೂ ಜಲಸಂರಕ್ಷಣೆಗೆಸಂಬಂ ಧಿಸಿದಂತೆ ಸುದೀರ್ಘವಾಗಿ ಚರ್ಚಿಸಿದಜಿಲ್ಲಾಧಿ ಕಾರಿ ಪವನಕುಮಾರ ಮಾಲಪಾಟಿ ಅವರು ಜಲಸಂರಕ್ಷಣೆ ಮತ್ತು ನೀರಿನಮಿತ ಬಳಕೆಗೆ ಸಂಬಂಧಿಸಿದಂತೆ ಹೆಚ್ಚಿನಅರಿವು ಮೂಡಿಸುವ ಕೆಲಸ ಮಾಡಬೇಕು ಎಂದು ಅವರು ತಿಳಿಸಿದರು. ಇದೇಸಂದರ್ಭದಲ್ಲಿ ಡಿಸಿ ಮಾಲಪಾಟಿ ಅವರುನೆಹರು ಯುವ ಕೇಂದ್ರದ 2020-21ರಕ್ರಿಯಾಯೋಜನೆಗೆ ಅನುಮೋದನೆ ನೀಡಿದರು.
ನೆಹರು ಯುವ ಕೇಂದ್ರದಿಂದ ನೀಡಲಾಗುವ ಬೆಸ್ಟ್ ಯುಥ್ ಕ್ಲಬ್ ಅವಾಡ್ìಗೆ ಸಂಬಂಧಿ ಸಿದಂತೆಯೂ ಸಭೆಯಲ್ಲಿಚರ್ಚಿಸಲಾಯಿತು.ಈ ಸಂದರ್ಭದಲ್ಲಿ ನೆಹರು ಯುವ ಕೇಂದ್ರದ ಅಧಿ ಕಾರಿ ಮಾಂಟು ಪಾತರ್, ಜಿಲ್ಲಾಕೌಶಲ್ಯ ಅಭಿವೃದ್ಧಿ ಅಧಿಕಾರಿ ಪಿ.ಎಸ್. ಹಟ್ಟಪ್ಪ,ಕ್ಷೇತ್ರ ಜನಸಂಪರ್ಕ ಕಾರ್ಯಾಲಯದಉಪನಿರ್ದೇಶಕ ಜಿ.ಡಿ. ಹಳ್ಳಿಕೇರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿ ಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
HDK ಹೇಳುತ್ತಿದ್ದದ್ದು ಪ್ರಜ್ವಲ್ ಪೆನ್ಡ್ರೈವ್ ಇರಬೇಕು: ಜಮೀರ್
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್