ರೇಷ್ಮೆ ಉತ್ಪಾದನೆ ದ್ವಿಗುಣಗೊಳಿಸಿ, ಮಾರುಕಟ್ಟೆ ವಿಸ್ತರಿಸಿ: ಸಚಿವ ಡಾ. ನಾರಾಯಣ ಗೌಡ


Team Udayavani, Sep 28, 2021, 5:02 PM IST

ಸಚಿವ ಡಾ. ನಾರಾಯಣಗೌಡ

ಬೆಂಗಳೂರು: ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮದಲ್ಲಿ (ಕೆ.ಎಸ್.ಐ.ಸಿ) ವಹಿವಾಟು ವಿಸ್ತರಣೆಗೆ ಕ್ರಮವಹಿಸಿ, ಉತ್ಪಾದನೆ ಕೂಡ ದ್ವಿಗುಣಗೊಳಿಸಲು ಸೂಕ್ತ ಕ್ರಮಕ್ಕೆ ಸಚಿವರ ಸೂಚನೆ. ಹಾಗೂ ಇರುವ ನೌಕರರನ್ನೇ ಬಳಸಿಕೊಂಡು, ಮಾರುಕಟ್ಟೆ ವಿಸ್ತರಣೆಗೆ ಕ್ರಮ ವಹಿಸಬೇಕು ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ನಾರಾಯಣಗೌಡ ಸೂಚಿಸಿದರು.

ವಿಕಾಸ ಸೌಧದಲ್ಲಿ ಇಂದು ನಡೆಸಿದ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಕ.ಎಸ್.ಐ.ಸಿ.ಯಲ್ಲಿ ಕಾರ್ಯವೈಖರಿಗೆ ಸಚಿವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಈ ಹಿಂದೆಯೇ ಕೆ.ಎಸ್.ಎಮ್.ಬಿ.ನಿಂದ ಕಚ್ಚಾ ರೇಷ್ಮೆ ಖರೀದಿಸಬೇಕು ಎಂದು ಕೆ.ಎಸ್.ಐ.ಸಿ.ಗೆ ಸೂಚನೆ ನೀಡಲಾಗಿತ್ತು. ಆದರೆ ಸಲ್ಲದ ನೆಪವೊಡ್ಡಿ ಕೆ.ಎಸ್.ಎಂ.ಬಿ. ನಿಂದ ಖರೀದಿಸದೆ ಖಾಸಗಿಯವರಿಂದ ಖರಿದಿಸುತ್ತಿದ್ದಾರೆ. ಇನ್ನು ಮುಂದೆ ಅಗತ್ಯವಿರುವ ಕಚ್ಚಾ ರೇಷ್ಮೆಯನ್ನು ಕೆ.ಎಸ್.ಎಂ.ಬಿ. ನಿಂದಲೇ ಖರೀದಿಸಬೇಕು ಎಂದು ಸಚಿವರು ಖಡಕ್ಕಾಗಿ ಹೇಳಿದರು.

ಖಾಸಗಿಯವರಿಗೆ ಪೈಪೋಟಿ ನೀಡುವ ರೀತಿಯಲ್ಲಿ ಕ.ಎಸ್.ಐ.ಸಿ. ಮಾರ್ಕೆಟಿಂಗ್ ಮಾಡುವ ಕೆಲಸ ಆಗುತ್ತಿಲ್ಲ. ಮಾರುಕಟ್ಟೆ ನಿರ್ವಹಣೆಗೆ ಜವಾಬ್ದಾರಿ ವಹಿಸಿ ಒಬ್ಬರನ್ನು ನೇಮಿಸಬೇಕು. ಮಾರುಕಟ್ಟೆ ವಿಸ್ತರಣೆ ಆಗಬೇಕು. ಲಕ್ಷಾಂತರ ರೂಪಾಯಿ ಬೆಲೆಬಾಳುವ ರೇಷ್ಮೆ ಸೀರೆಯನ್ನು ಖರೀದಿಸಿದವರಿಗೆ, ಅತ್ಯುತ್ತಮವಾದ ಬ್ಯಾಗ್ ಅಥವಾ ಸೂಟ್‍ಕೇಸ್‍ನಲ್ಲಿ ಸೀರೆಯನ್ನು ಹಾಕಿ ಕೊಡಬೇಕು. ಗುಣಮಟ್ಟದ ಮತ್ತು ಆಕರ್ಷಕ ರೀತಿಯ ಮಾರ್ಕೆಟಿಂಗ್ ಅತಿ ಮುಖ್ಯ ಎಂದು ಹೇಳಿದರು.

ಮಾರ್ಕೆಟಿಂಗ್ ಜೊತೆಗೆ ಹೊಸ ಹೊಸ ಡಿಸೈನ್‍ ಕೂಡ ಬರಬೇಕು. ಅದಕ್ಕಾಗಿ ಓರ್ವ ಡಿಸೈನರ್‍ ಅನ್ನು ನೇಮಿಸಿ ಅಥವಾ ಇಲಾಖೆಯಲ್ಲಿ ಇರುವವರಿಗೆ ಜವಾಬ್ದಾರಿ ನೀಡಬೇಕು. ಮೈಸೂರು ಸಿಲ್ಕ್ ಗೆ ಬೇಡಿಕೆ ಇದೆ. ಆದರೆ ಉತ್ಪಾದನೆ ಕಡಿಮೆ ಪ್ರಮಾಣದಲ್ಲಿದೆ. ಎರಡು ಪಾಳಿಯಲ್ಲಿ ಕೆಲಸ ಮಾಡುವ ಮೂಲಕ, ಉತ್ಪಾದನೆಯನ್ನು ದ್ವಿಗುಣಗೊಳಿಸುವ ಕೆಲಸ ಮಾಡಬೇಕು. ಅದಕ್ಕಾಗಿ ಯುನಿಯನ್‍ ಲೀಡರ್‍ಗಳ ಜೊತೆ ಸಭೆ ಕರೆದು ಚರ್ಚೆ ನಡೆಸಬೇಕು. ರೇಷ್ಮೆ ಸೀರೆ ಎಲ್ಲ ವರ್ಗದವರಿಗೆ ಸಿಗುವ ಹಾಗೆ ವಿವಿಧ ಗುಣಮಟ್ಟದಲ್ಲಿ ಸಿದ್ದಪಡಿಸಬೇಕು ಎಂದು ಹೇಳಿದರು.

ರೇಷ್ಮೆ ನೂಲು ತೆಗೆಯುವ ಯಂತ್ರ ಹಾಸನ, ಬೆಳಗಾವಿ, ಗುಲ್ಬರ್ಗ, ಕೂಡ್ಲಗಿಯಲ್ಲಿ ಬಳಕೆಯಾಗದೆ ನಿರುಪಯುಕ್ತವಾಗಿ ಬಿದ್ದಿದೆ. ಅದನ್ನು ಸರಿಪಡಿಸಿ, ಮೈಸೂರು, ಕನಕಪುರ, ಚನ್ನಪಟ್ಟಣ ಹಾಗೂ ಟಿ.ನರಸಿಪುರದಲ್ಲಿರುವ ಕೆ.ಎಸ್.ಐ.ಸಿ.ಯ ಘಟಕಗಳಿಗೆ ತರಬೇಕು. ದುರಸ್ತಿ ಮಾಡಿ ಆ ಯಂತ್ರಗಳನ್ನು ಬಳಕೆ ಮಾಡಿಕೊಳ್ಳಬೇಕು. ಅನುಪಯುಕ್ತ ರೇಷ್ಮೆ (ಸ್ಕ್ರಾಪ್‍) ಯನ್ನು ಸರಿಯಾದ ರೀತಿಯಲ್ಲಿ ಹರಾಜು ಮಾಡದಿರುವುದು ಗಮನಕ್ಕೆ ಬಂದಿದೆ. ಇ ಟೆಂಡರ್ ಮೂಲಕವೇ ಹರಾಜು ಹಾಕಬೇಕು ಎಂದು ಹೇಳಿದರು.

ಏರ್ ಪೋರ್ಟ್‍ನಲ್ಲಿ ಮಳಿಗೆ: ಬೆಂಗಳೂರು ಹಾಗೂ ದೆಹಲಿ ವಿಮಾನ ನಿಲ್ದಾಣದಲ್ಲಿ ರೇಷ್ಮೆ ಉತ್ಪಾದನಾ ಮಾರಾಟ ಮಳಿಗೆ ಶೀಘ್ರವೇ ತೆರೆಯಬೇಕು. ಅದಕ್ಕಾಗಿ ಮುಖ್ಯಕಾರ್ಯದರ್ಶಿಯವರ ನೇತೃತ್ವದಲ್ಲಿ ಅಧಿಕಾರಿಗಳು ಸಭೆ ನಡೆಸಬೇಕು. ಮುಂಬೈನಲ್ಲಿ ಅತಿ ಹೆಚ್ಚು ಕನ್ನಡಿಗರು ಇರುವ ದಾದರ್ ಹಾಗೂ ಮಾಟುಂಗಾ ಪ್ರದೇಶದಲ್ಲಿ ಮಳಿಗೆ ಆರಂಭಿಸುವ ಬಗ್ಗೆ ಪರಿಶೀಲಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು. ಹುಬ್ಬಳ್ಳಿಯಲ್ಲಿ ರೇಷ್ಮೆ ಟೆಸ್ಟಿಂಗ್ ಲ್ಯಾಬ್, ಗುಲ್ಬರ್ಗದಲ್ಲಿ ಪರ್ಚೇಸಿಂಗ್ ಸೆಂಟರ್ ‍ಸ್ಥಾಪಿಸುವ ಸಂಬಂಧ ಸಚಿವರು ಅಧಿಕಾರಿಗಳ ಜೊತೆ ಚರ್ಚಿಸಿದರು.

ಟಾಪ್ ನ್ಯೂಸ್

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.