ಮೂರೂವರೆ ತಿಂಗಳಲ್ಲಿ 21 ಕೆ.ಜಿ.ಗೂ ಅಧಿಕ ಜಪ್ತಿ;

ಮಂಗಳೂರು ವಿಮಾನ ನಿಲ್ದಾಣ ಚಿನ್ನ ಸ್ಮಗ್ಲರ್‌ಗಳ ರಹದಾರಿ

Team Udayavani, Sep 29, 2021, 6:20 AM IST

ಮೂರೂವರೆ ತಿಂಗಳಲ್ಲಿ 21 ಕೆ.ಜಿ.ಗೂ ಅಧಿಕ ಜಪ್ತಿ;

ಮಂಗಳೂರು: ಕೋವಿಡ್‌ ಎರಡನೇ ಅಲೆ, ಲಾಕ್‌ಡೌನ್‌ ಬಳಿಕ ದುಬಾೖ-ಮಂಗಳೂರು ನಡುವೆ ನೇರ ವಿಮಾನ ಯಾನ ಪುನರಾರಂಭಗೊಂಡ ಅನಂತರ ಮಂಗಳೂರು ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ ಪ್ರಕರಣ ಮತ್ತೆ ಹೆಚ್ಚಾಗಿದೆ.

ಸುಮಾರು ಒಂದು ತಿಂಗಳ ಅವಧಿಯಲ್ಲಿ ವಿಮಾನ ನಿಲ್ದಾಣದಲ್ಲಿ ಒಂದೂವರೆ ಕೆ.ಜಿ.ಗೂ ಅಧಿಕ ಅಕ್ರಮ ಚಿನ್ನ ಸಾಗಾಟ ಪತ್ತೆಯಾಗಿದ್ದು, ಒಂದು ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳಲ್ಲಿ ಹೆಚ್ಚಿನವರು ಕಾಸರಗೋಡಿನವರು. ಆಟಿಕೆ, ಶೂ, ಅಡುಗೆ ಸಾಮಗ್ರಿ, ಹೇರ್‌ಬ್ಯಾಂಡ್‌, ಗುದದ್ವಾರ, ಬಟ್ಟೆ ಮೊದಲಾದವುಗಳಲ್ಲಿ ಬಚ್ಚಿಟ್ಟು ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

ಅಕ್ರಮಕ್ಕೆ ಆಫ‌ರ್‌ !
ದುಬಾೖ ಮತ್ತು ಭಾರತದಲ್ಲಿರುವ ಕೆಲವು ಮಂದಿ ಸ್ಮಗ್ಲರ್‌ಗಳು ಅಕ್ರಮವಾಗಿ ಚಿನ್ನವನ್ನು ಸಾಗಿಸಲು ಕೆಲವು ಪ್ರಯಾಣಿಕರನ್ನು ಬಳಸುತ್ತಿರುವ ಬಗ್ಗೆಯೂ ಅಧಿಕಾರಿಗಳು ಬಲವಾದ ಸಂಶಯ ವ್ಯಕ್ತಪಡಿಸಿದ್ದಾರೆ. ಇಂತಹ ಸ್ಮಗ್ಲರ್‌ಗಳು ಅಕ್ರಮ ಚಿನ್ನ ಸಾಗಾಟ ಮಾಡುವ ಪ್ರಯಾಣಿಕರಿಗೆ ಉಚಿತ ವಿಮಾನಯಾನ ಟಿಕೆಟ್‌, ಹಣದ ಆಫ‌ರ್‌ ನೀಡುತ್ತಾರೆ ಎನ್ನಲಾಗಿದೆ. ಇನ್ನು ಕೆಲವು ಮಂದಿ ಸ್ವತಃ ಅವರಾಗಿಯೇ ಚಿನ್ನದ ಆಸೆಗೆ ಬಿದ್ದು ಕಸ್ಟಮ್ಸ್‌ ಇಲಾಖೆಯ ಕೈಗೆ ಸಿಕ್ಕಿಬಿದ್ದು ಅಪಾಯ ತಂದುಕೊಳ್ಳುತ್ತಿದ್ದಾರೆ.

ಇದನ್ನೂ ಓದಿ:ಬೂಸ್ಟರ್‌ ಡೋಸ್‌ ಪಡೆದುಕೊಂಡ ಅಧ್ಯಕ್ಷ ಬೈಡೆನ್‌

2 ತಂಡಗಳಿಂದ ತಪಾಸಣೆ
ಮಂಗಳೂರು ವಿಮಾನ ನಿಲ್ದಾಣಲ್ಲಿ ಕಸ್ಟಮ್ಸ್‌ ಇಲಾಖೆಯ ಒಟ್ಟು 20 ಅಧಿಕಾರಿ, ಸಿಬಂದಿಯನ್ನೊಳಗೊಂಡ 2 ತಂಡಗಳು ತಪಾಸಣೆ ನಡೆಸುತ್ತಿವೆ. ಇತ್ತೀಚಿನ ದಿನಗಳಲ್ಲಿ ಅಕ್ರಮ ಚಿನ್ನ ಸಾಗಾಟಗಾರರು ಚಿನ್ನವನ್ನು ಬಚ್ಚಿಟ್ಟುಕೊಳ್ಳಲು ಹೊಸ ಮಾರ್ಗಗಳನ್ನು ಹುಡುಕುತ್ತಿದ್ದಾರೆ. ಅದನ್ನು ಕೂಡ ಇಲಾಖೆ ಪತ್ತೆ ಹಚ್ಚುತ್ತಿದೆ. ಅಕ್ರಮವಾಗಿ ಸಾಗಿಸಿದ ಚಿನ್ನದ ಮೌಲ್ಯ 20 ಲ.ರೂ.ಗಳಿಗಿಂತ ಅಧಿಕವಿದ್ದರೆ ಆರೋಪಿಗಳನ್ನು ಬಂಧಿಸಲಾಗುತ್ತದೆ. ಅದಕ್ಕಿಂತ ಕಡಿಮೆ ಇದ್ದರೆ ಪ್ರಕರಣ ದಾಖಲಿಸಿ ದಂಡ ವಿಧಿಸಿ ತನಿಖೆ ನಡೆಸಲಾಗುತ್ತದೆ. – ಇಮಾಮುದ್ದೀನ್‌ ಅಹಮ್ಮದ್‌,
ಕಸ್ಟಮ್ಸ್‌ ಆಯುಕ್ತರು, ಮಂಗಳೂರು

12 ಮಂದಿಯ ಬಂಧನ
ಮಂಗಳೂರು ವಿಮಾನ ನಿಲ್ದಾಣದಲ್ಲಿ ಈ ಹಿಂದಿನ ಎಲ್ಲ ವರ್ಷಗಳಿಗಿಂತಲೂ ಈ ವರ್ಷ ಅತ್ಯಧಿಕ ಪ್ರಮಾಣದಲ್ಲಿ ಪ್ರಕರಣಗಳು ಪತ್ತೆಯಾಗುತ್ತಿವೆ. 2021ರ ಜನವರಿಯಿಂದ ಎ. 19ರ ವರೆಗೆ ಕೇವಲ ಮೂರೂವರೆ ತಿಂಗಳಲ್ಲಿ 21 ಕೆ.ಜಿ.ಗೂ ಅಧಿಕ ತೂಕದ ಹಾಗೂ 10 ಕೋ.ರೂ.ಗಳಿಗೂ ಅಧಿಕ ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಈ ವರ್ಷ ಇದುವರೆಗೆ 12 ಮಂದಿಯನ್ನು ಬಂಧಿಸಲಾಗಿದೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.