2023 ಚುನಾವಣೆಯಲ್ಲಿ ಜೆಡಿಎಸ್ ನಿಂದ 30-35 ಮಹಿಳೆಯರಿಗೆ ಟಿಕೆಟ್: ಹೆಚ್ ಡಿ ಕೆ ಘೋಷಣೆ


Team Udayavani, Sep 29, 2021, 1:13 PM IST

2023 ಚುನಾವಣೆಯಲ್ಲಿ ಜೆಡಿಎಸ್ ನಿಂದ 30-35 ಮಹಿಳೆಯರಿಗೆ ಟಿಕೆಟ್: ಹೆಚ್ ಡಿ ಕೆ ಘೋಷಣೆ

ರಾಮನಗರ: 2023ರ ಚುನಾವಣೆಯಲ್ಲಿ 30-35 ವಿಧಾನಸಭೆ ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಟಿಕೆಟ್ ಮೀಸಲು ಇಡುತ್ತೇವೆ ಎಂದು ಜೆಡಿಎಸ್ ಪಕ್ಷದ ವರಿಷ್ಠ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು  ಘೋಷಣೆ ಮಾಡಿದರು.

ಜನತಾ ಪರ್ವ 1.O ಹಾಗೂ ಮಿಷನ್ 123 ಗುರಿಯೊಂದಿಗೆ ಬಿಡದಿಯ ಕೇತಗಾನಹಳ್ಳಿಯ  ತೋಟದಲ್ಲಿ ಹಮ್ಮಿಕೊಳ್ಳಲಾಗಿರುವ 3ನೆ ದಿನದ ಸಂಘಟನಾ ಕಾರ್ಯಗಾರ ಆರಂಭವಾಗುವುದಕ್ಕೆ ಮುನ್ನ ಅವರು  ಮಾಧ್ಯಮಗಳ ಜತೆ ಮಾತನಾಡಿದರು.

ಈಗಾಗಲೇ ಮೊದಲ ಹಂತದಲ್ಲಿ 7-8 ಜನ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದೇವೆ. ಮಹಿಳೆಯರಿಗೂ ಹೆಚ್ಚಿನ ಶಕ್ತಿ ತುಂಬಲು ಈ ಬಾರಿ 30-35 ಸೀಟುಗಳನ್ನು  ಮಹಿಳೆಯರಿಗೆ ಕೊಡಲಾಗುವುದು ಎಂದು ಅವರು ತಿಳಿಸಿದರು.

ಬಿಜೆಪಿ, ಕಾಂಗ್ರೆಸ್ ಪಕ್ಷಗಳಿಗೆ ಹೋಲಿಕೆ ಮಾಡಿದರೆ ನಮ್ಮ ಮಹಿಳಾ ಘಟಕ ಸ್ವಲ್ಪ ಹಿಂದೆ ಉಳಿದಿದೆ. ಇದನ್ನು ಸರಿ‌ ಮಾಡುವ ಕೆಲಸ ಮಾಡಲಾಗುವುದು ಎಂದ ಅವರು, ಮಹಿಳಾ ಘಟಕಕ್ಕೆ ಹೆಚ್ಚಿನ ಶಕ್ತಿ ತುಂಬುವ ಕೆಲಸ ಈ ಕಾರ್ಯಾಗಾರದಿಂದ ಪ್ರಾರಂಭ ಮಾಡುತ್ತೇವೆ ಎಂದರು.

ಮಹಿಳೆಯರಿಗೂ ಟಾಸ್ಕ್:

ಬೂತ್ ಮಟ್ಟದಿಂದ ಮಹಿಳಾ ಘಟಕಕ್ಕೆ ಶಕ್ತಿ ತುಂಬುವ ಟಾಸ್ಕ್ ಕೊಡಲಾಗುವುದು. 3ನೇ ದಿನ‌ದ ಇಂದಿನ  ಕಾರ್ಯಾಗಾರದಲ್ಲಿ ಮಹಿಳಾ ಘಟಕದ ಸದಸ್ಯರಿಗೆ ಪಕ್ಷ ಹಾಗೂ ಚುನಾವಣೆಗಾಗಿ ಒಂದು ದಿಕ್ಸೂಚಿ ನಿಗದಿ ಮಾಡಲಾಗುವುದು.30 ಜಿಲ್ಲೆಗಳಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ಗೆದ್ದಿರುವ ಮಹಿಳಾ ಸದಸ್ಯರು ಕಾರ್ಯಾಗಾರದಲ್ಲಿ ಇದ್ದಾರೆ ಎಂದು ಕುಮಾರಸ್ವಾಮಿ ಅವರು ತಿಳಿಸಿದರು.

ಇದನ್ನೂ ಓದಿ: ಅಪ್ರಾಪ್ತೆಯ ಮೇಲೆ ಅತ್ಯಾಚಾರ ಪ್ರಕರಣ; ದೀಪಕ್ ರಾವ್ ಕೊಲೆ ಆರೋಪಿಯ ಬಂಧನ

ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆ ಬಗ್ಗೆ ಇಂದು ಚರ್ಚೆ ಮಾಡುವುದರ ಜತೆಗೆ, ಎಲ್ಲ ಮಹಿಳಾ ನಾಯಕಿಯರಿಗೆ ಸೂಕ್ತ ತರಬೇತಿ ಕೊಡಲಾಗುವುದು. ಪ್ರತಿ ಕ್ಷೇತ್ರದಲ್ಲಿ 100 ಕುಟುಂಬಗಳ ಸಮಸ್ಯೆಗೆ ಪರಿಹಾರ ನೀಡುವ ಜವಾಬ್ದಾರಿಯನ್ನ ಪ್ರತಿ ಮಹಿಳಾ ನಾಯಕಿಯರಿಗೆ ನೀಡಲಾಗುತ್ತದೆ.

ಮಹಿಳೆಯರಿಗೆ 33% ಮೀಸಲು ವಿಧೇಯಕ:

ಮಾಜಿ ಪ್ರಧಾನಮಂತ್ರಿಗಳಾದ ದೇವೇಗೌಡರು  ಮಹಿಳೆಯರಿಗೆ ಚುನಾವಣೆಯಲ್ಲಿ 33% ಮೀಸಲಾತಿ ಕೊಡಬೇಕು ಅಂತ ಧ್ವನಿ ಎತ್ತಿದ್ದರು. ಆದರೆ ಕಾಂಗ್ರೆಸ್- ಬಿಜೆಪಿ ಸರ್ಕಾರಗಳು ಮೀಸಲಾತಿ ಜಾರಿ ಮಾಡಲಿಲ್ಲ. ಕರ್ನಾಟಕದಿಂದಲೇ ಮಹಿಳಾ ಮೀಸಲಾತಿಗೆ ಧ್ವನಿ ಎತ್ತುವ ಕೆಲಸ ನಾವು ಮಾದುತ್ತೇವೆ. 2023 ರಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ 33% ಮೀಸಲಾತಿ ವಿಧೇಯಕಕ್ಕೆ ಜೀವ ತುಂಬುತ್ತೇವೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಹೇಳಿದರು.

ಮಹಿಳಾ ಕಾರ್ಯಾಗಾರಕ್ಕೆ ಚಾಲನೆ:

ಇದೇ ವೇಳೆ ಶಾಸಕರಾದ ಶ್ರೀಮತಿ ಅನಿತಾ ಕುಮಾರಸ್ವಾಮಿ ಹಾಗೂ ಮಹಿಳಾ ಜೆಡಿಎಸ್ ರಾಜ್ಯಾಧ್ಯಕ್ಷೆಯಾದ ಲೀಲಾದೇವಿ ಆರ್ ಪ್ರಸಾದ್ ಅವರು ಕಾರ್ಯಗಾರವನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟನೆ ನೆರವೇರಿಸಿದರು. ಈ ಕ್ಷಣಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಸಾಕ್ಷಿಯಾದರು.

ಪ್ರಾಸ್ತಾವಿಕವಾಗಿ ಲೀಲಾದೇವಿ ಆರ್ ಪ್ರಸಾದ್ ಅವರು ಮಾತನಾಡಿದರು. ದೇವದುರ್ಗದ ಮುಂದಿನ ಅಭ್ಯರ್ಥಿ ಕರಿಯಮ್ಮ, ಮಹಿಳಾ ಜನತಾದಳದ ಬೆಂಗಳೂರು ಘಟಕದ ಅಧ್ಯಕ್ಷೆ ರುತ್ ಮನೋರಮಾ ವೇದಿಕೆಯ ಮೇಲಿದ್ದರು.

ಪ್ರತಿ ವಿಧಾನಸಭೆ ಕ್ಷೇತ್ರದಿಂದ ತಲಾ ಇಬ್ಬರಂತೆ ಮಹಿಳಾ ಪ್ರತಿನಿಧಿಗಳು ಕಾರ್ಯಗಾರದಲ್ಲಿ ಭಾಗಿಯಾಗಿದ್ದರು.

ಟಾಪ್ ನ್ಯೂಸ್

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Parameshwara; ಪ್ರಜ್ವಲ್‌ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ

Parameshwara; ಪ್ರಜ್ವಲ್‌ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.