ನೂತನ ಎನ್ಇಪಿ ಪಠ್ಯದಲ್ಲಿ ಇಸ್ರೋ, ಬಾಹ್ಯಾಕಾಶ ವಿಜ್ಞಾನದ ಅಂಶಗಳು: ಸಚಿವ ಬಿ.ಸಿ ನಾಗೇಶ್


Team Udayavani, Sep 29, 2021, 5:51 PM IST

ನೂತನ ಎನ್ಇಪಿ ಪಠ್ಯದಲ್ಲಿ ಇಸ್ರೋ, ಬಾಹ್ಯಾಕಾಶ ವಿಜ್ಞಾನದ ಅಂಶಗಳು: ಸಚಿವ ಬಿ.ಸಿ ನಾಗೇಶ್

ಬೆಂಗಳೂರು: ‘ರಾಷ್ಟ್ರೀಯ ಶಿಕ್ಷಣ ನೀತಿ-2020’ ಅನುಸಾರ ರಚನೆಯಾಗುವ ನೂತನ ಪಠ್ಯಕ್ರಮದಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಸಾಧನೆಗಳು, ಯೋಜನೆಗಳ ವಿಚಾರಗಳನ್ನು ಸೇರ್ಪಡೆಗೊಳಿಸಲು ಇಸ್ರೋದಿಂದ ಸಲಹೆ ಸೂಚನೆಗಳನ್ನು ಪಡೆಯಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.

ಬೆಂಗಳೂರಿನ ನ್ಯೂ ಬಿಇಎಲ್ ರಸ್ತೆಯಲ್ಲಿರುವ ಇಸ್ರೋ ಅಂತರಿಕ್ಷ ಭವನದಲ್ಲಿ ಬುಧವಾರ ಇಸ್ರೋ ಅಧ್ಯಕ್ಷ ಡಾ. ಕೆ. ಶಿವನ್ ಹಾಗೂ ಹಿರಿಯ ವಿಜ್ಞಾನಿಗಳು ಮತ್ತು ಅಧಿಕಾರಿಗಳನ್ನು ಭೇಟಿ ಮಾಡಿ ಸಚಿವರು ಮಾತುಕತೆ ನಡೆಸಿದರು.

‘ವಿಜ್ಞಾನ-ತಂತ್ರಜ್ಞಾನ, ಕೌಶಲ್ಯಾಧಾರಿತ ಶಿಕ್ಷಣ, ಸಂಶೋಧನೆ ಮತ್ತು ಅಭಿವೃದ್ಧಿ, ಮಕ್ಕಳಲ್ಲಿ ವೈಜ್ಞಾನಿಕ ಚಿಂತನೆ, ಮನೋಭಾವ ಮೂಡಿಸುವುದರ ಮೇಲೆ ಭಾರತದ ಭವಿಷ್ಯವಿದೆ. ಶಾಲಾ ಶಿಕ್ಷಣದಲ್ಲಿ ಸರಳವಾಗಿ ಅರ್ಥವಾಗುವಂತೆ ವಿಜ್ಞಾನ, ಗಣಿತವನ್ನು ಪಾಠ ಮಾಡಬೇಕು. ಮಕ್ಕಳಲ್ಲಿ ವಿಜ್ಞಾನದ ಕುರಿತು ಆಸಕ್ತಿ ಮತ್ತು ಕುತೂಹಲ ಮೂಡಿಸುವ ಶಿಕ್ಷಣಕ್ಕೆ ಒತ್ತು ನೀಡಬೇಕಿದೆ ಎಂದು ಡಾ. ಕೆ. ಶಿವನ್ ಅವರು ಹಲವು ಕಾರ್ಯಕ್ರಮಗಳಲ್ಲಿ ಹೇಳಿದ್ದಾರೆ. ಹೀಗಾಗಿ, ಡಾ.ಕೆ ಶಿವನ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಾಯಿತು. ರಾಜ್ಯದಲ್ಲಿ ಎನ್ಇಪಿ ಜಾರಿಗೆ ಅಗತ್ಯವಾದ ಎಲ್ಲ ರೀತಿಯ ಸಲಹೆ, ಸೂಚನೆ, ಮಾರ್ಗದರ್ಶನವನ್ನು ನೀಡಿ ಸಹಕಾರ ನೀಡುವ ಭರವಸೆಯನ್ನು ಕೆ. ಶಿವನ್ ನೀಡಿದ್ದಾರೆ. ಅದಕ್ಕಾಗಿ ಇಸ್ರೋದಿಂದ ಸಮಿತಿಯೊಂದನ್ನು ರಚಿಸುವುದಾಗಿ ತಿಳಿಸಿದ್ದಾರೆ’ಎಂದು ಸಚಿವ ನಾಗೇಶ್ ತಿಳಿಸಿದರು.

‘ಗ್ರಾಮಾಂತರ ಪ್ರದೇಶಗಳು, ಸರ್ಕಾರಿ ಶಾಲೆಗಳ ಮಕ್ಕಳಲ್ಲಿ ಅಪಾರ ಪ್ರತಿಭೆ ಇದೆ. ಉತ್ತಮ ವೇದಿಕೆ, ಅವಕಾಶಗಳು, ಜ್ಞಾನಾರ್ಜನೆಗೆ ಬೇಕಾದ ಸೌಕರ್ಯಗಳನ್ನು ಒದಗಿಸಬೇಕು. ವಿಷಯಗಳನ್ನು ಸರಳವಾಗಿ ಅರ್ಥೈಸಬೇಕು. ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ಸರಳವಾಗಿ ಅರ್ಥವಾಗುವಂತೆ ಪಾಠ ಮಾಡಬೇಕು. ಅದಕ್ಕೆ ತಕ್ಕಂತೆ ಪಠ್ಯಗಳನ್ನು ಸಿದ್ದಪಡಿಸಲು ಸೂಚಿಸಿದ್ದಾರೆ. ಈ ನಿಟ್ಟಿನಲ್ಲಿ ಟಾಸ್ಕ್‌ಫೋರ್ಸ್ ಕಾರ್ಯ ನಿರ್ವಹಿಸುತ್ತಿದೆ ಎಂದು ಸಚಿವ ನಾಗೇಶ್ ತಿಳಿಸಿದರು.

‘ಕೌಶಲ್ಯದ ಶಿಕ್ಷಣ ಇಂದಿನ ಅಗತ್ಯವಾಗಿದೆ. ವಿಜ್ಞಾನ, ಬಾಹ್ಯಾಕಾಶದ ಕುರಿತು ಮಕ್ಕಳಲ್ಲಿ ಆಸಕ್ತಿ ಮೂಡಿಸಬೇಕು. ಎನ್ಇಪಿ ಜಾರಿ ಕುರಿತು ರಾಜ್ಯ ಸರಕಾರಕ್ಕೆ ಅಗತ್ಯವಿರುವ ಎಲ್ಲ ರೀತಿಯ ನೆರವು, ಸಲಹೆಗಳನ್ನು ನೀಡುತ್ತೇವೆ’ ಎಂದು ಸಚಿವರೊಂದಿಗೆ ಮಾತುಕತೆ ವೇಳೆ ಇಸ್ರೋ ಅಧ್ಯಕ್ಷ ಕೆ.ಶಿವನ್ ತಿಳಿಸಿದರು.

Space on Wheels ರಾಜ್ಯದ ಇತರ ಭಾಗಗಳಿಗೆ:

ಇಸ್ರೋದ ಸಾಧನೆಗಳು, ಭವಿಷ್ಯದ ಯೋಜನೆಗಳು, ಸೌರಮಂಡಲ, ಬಾಹ್ಯಾಕಾಶದ ಕುರಿತು ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಮಾಹಿತಿ ಒದಗಿಸಿ, ಆಸಕ್ತಿ ಮೂಡಿಸಲು ಇಸ್ರೋ ಆರಂಭಿಸಿರುವ Space on Wheels ವಾಹನವು ರಾಜ್ಯದ ವಿವಿಧ ಜಿಲ್ಲೆಗಳ ಗ್ರಾಮಾಂತರ ಭಾಗಗಳ ಶಾಲೆಗಳಿಗೂ ತೆರಳಲಿದೆ.

ಈವರೆಗೆ Space on Wheels ವಾಹನವು ಬೆಂಗಳೂರು ನಗರ ಮತ್ತು ಸುತ್ತ ಮುತ್ತಲಿನ ಭಾಗಗಳಲ್ಲಿ ಮಾತ್ರ ಸಂಚರಿಸುತ್ತಿತ್ತು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.