ಪಂಜಾಬ್ ರಾಜಕೀಯ ಬೆಳವಣೆಗೆಗೆ ಬಿಗ್ ಟ್ವಿಸ್ಟ್ | ಕುತೂಹಲ ಮೂಡಿಸಿದ ಶಾ-ಕ್ಯಾಪ್ಟನ್ ಭೇಟಿ
Team Udayavani, Sep 29, 2021, 8:07 PM IST
ನವದೆಹಲಿ: ಪಂಜಾಬ್ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣೆಗೆಗೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಅಮರೀಂದರ್ ಸಿಂಗ್ ಅವರು ಇಂದು ಸಂಜೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ.
ಪಂಜಾಬ್ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣೆಗೆಯ ನಡುವೆಯೇ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು ಬಿಜೆಪಿ ಸೇರಲಿದ್ದಾರೆ ಎನ್ನುವ ವದಂತಿ ಮಂಗಳವಾರದಿಂದ ಕೇಳಿ ಬರುತ್ತಿದೆ. ಇದರ ಬೆನ್ನಲ್ಲೆ ಸಿಂಗ್ ಅವರು ಅಮಿತ್ ಶಾ ಅವರನ್ನು ಭೇಟಿಯಾಗಿರುವುದು ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ.
ಇಂದು ಸಂಜೆ 6 ಗಂಟೆಗೆ ಅಮಿತ್ ಶಾ ಅವರ ಮನೆಗೆ ತೆರಳಿದ ಅಮರೀಂದರ್ ಅವರು ಒಂದು ಗಂಟೆಗಳ ಕಾಲ ಮಾತುಕತೆ ನಡೆಸಿದರು. ಬಳಿಕ ಬಿಜೆಪಿ ಸೇರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.