ಒಂದೇ ಕಾರಲ್ಲಿ ಗೌಪ್ಯ ಸ್ಥಳಕ್ಕೆ ತೆರಳಿದ ನಿರಾಣಿ-ಸತೀಶ
Team Udayavani, Sep 30, 2021, 12:58 PM IST
ಬೆಳಗಾವಿ: ಜಿಲ್ಲೆಗೆ ಭೇಟಿ ನೀಡಿರುವ ಬೃಹತ್ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಬುಧವಾರ ಒಂದೇ ಕಾರಿನಲ್ಲಿ ರಹಸ್ಯ ಸ್ಥಳಕ್ಕೆ ತೆರಳುವ ಮೂಲಕ ಕುತೂಹಲ ಮೂಡಿಸಿದರು.
ಇಬ್ಬರೂ ನಾಯಕರಿಗೆ ಸಕ್ಕರೆ ಕಾರ್ಖಾನೆ ಉದ್ಯಮವಿದ್ದು, ಉದ್ಯಮಕ್ಕೆ ಸಂಬಂಧಿಸಿದಂತೆ ಚರ್ಚೆಗೆ ತೆರಳಿದರೋ ಅಥವಾ ರಾಜಕೀಯ ವಿಷಯಕ್ಕೋ ಎಂಬುದು ನಿಗೂಢವಾಗಿದ್ದು, ಚರ್ಚೆಗೆ ಗ್ರಾಸವಾಗಿದೆ.
ಅವರಿಬ್ಬರೂ ಕಾರಿನಲ್ಲಿ ತೆರಳುತ್ತಿದ್ದಂತೆ ನೆರೆದ ಜನರು ಒಂದು ಕ್ಷಣ ನಿಬ್ಬೆರಗಾದರು. ಬಿಜೆಪಿ ಹಾಗೂ ಕಾಂಗ್ರೆಸ್ನ ಇಬ್ಬರು ನಾಯಕರು ಕಾರಿನಲ್ಲಿ ನಿಗೂಢ ಸ್ಥಳಕ್ಕೆ ತೆರಳುತ್ತಿರುವುದನ್ನು ಕಂಡು ಅಚ್ಚರಿಪಟ್ಟರು. ಈ ಬಗ್ಗೆ ಸತೀಶ ಜಾರಕಿಹೊಳಿ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದರೆ ಅವರು ಕರೆ ಸ್ವೀಕರಿಸಲಿಲ್ಲ. ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಮುರುಗೇಶ ನಿರಾಣಿ, ಸತೀಶ ಜಾರಕಿಹೊಳಿ ಅವರೊಂದಿಗೆ ಊಟಕ್ಕೆ ಹೋಗಿದ್ದೆ. ಇದಕ್ಕೆ ಬೇರೆ ಅರ್ಥ ಕಲ್ಪಿಸಬೇಕಾದ ಅಗತ್ಯವಿಲ್ಲ. ರಾಜಕೀಯ ವಿಷಯದ ಬಗ್ಗೆ ಚರ್ಚೆ ಆಗಿಲ್ಲ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ