ಭಟ್ಕಳದಲ್ಲಿ ಅರಣ್ಯ ಸಿಬ್ಬಂದಿಗಳ ದೌರ್ಜನ್ಯ ಖಂಡನೀಯ: ರವೀಂದ್ರ ನಾಯ್ಕ


Team Udayavani, Oct 1, 2021, 3:09 PM IST

bhatkala news

ಭಟ್ಕಳ: ಅರಣ್ಯ ಸಿಬ್ಬಂದಿಗಳ ದೌರ್ಜನ್ಯ ಭಟ್ಕಳದಲ್ಲಿ ಮಿತಿ ಮೀರಿದ್ದು ಖಂಡನೀಯ ಎಂದು ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಅಭಿಪ್ರಾಯ ಪಟ್ಟಿದ್ದಾರೆ.

ಅವರು ಕಳೆದ ಮಂಗಳವಾರದಂದು ಹೆಬಳೆಯ ದುರ್ಗಮ್ಮ ಶನಿಯಾರ ನಾಯ್ಕ ಅವರ ಸುಮಾರು 45 ವರ್ಷ ಹಳೆಯ ಅಂಗಡಿ ಛಾವಣಿಯನ್ನು ಕೆಡವಿದ್ದನ್ನು ಪರಿಶೀಲಿಸಿ ಸಂತ್ರಸ್ತ ಮಹಿಳೆಗೆ ಸಾಂತ್ವನ ಹೇಳಿ ಮಾತನಾಡಿದರು.

ಬಡ ವಿಧವೆ ಮಹಿಳೆಗೆ ಅರಣ್ಯ ಇಲಾಖೆಯಿಂದ ಅನ್ಯಾಯವಾಗಿದೆ, ಆಕೆಗೆ ನ್ಯಾಯ ದೊರೆಯುವ ತನಕವೂ ಕೂಡಾ ನಮ್ಮ ವೇದಿಕೆ ಹೋರಾಟ ಮಾಡುತ್ತದೆ ಎಂದ ಅವರು ಮುಂದಿನ 48 ಗಂಟೆಗಳ ಒಳಗೆ ಇಲ್ಲಿಂದ ತೆಗೆದುಕೊಂಡು ಹೋಗಿದ್ದ ಶೀಟು ಹಾಗೂ ಇತರೆ ಸಾಮಗ್ರಿಗಳನ್ನು ಹಿಂತಿರುಗಿಸುವುದಕ್ಕೆ ಗಡುವು ನೀಡಿದ್ದೇವೆ ಎಂದರು.

ಕಾನೂನಿನ ವಿಧಿ ವಿಧಾನವನ್ನು ಅನುಸರಿಸದೆ ಬಡ ಮಹಿಳೆಯ ಮೇಲೆ ದೌರ್ಜನ್ಯ ಎಸಗಲಾಗಿದೆ, ಅರಣ್ಯ ಅತಿಕ್ರಮಣದಾರರ ಮೇಲೆ ದೌರ್ಜನ್ಯ, ಕಿರುಕುಳ ಖಂಡನಾರ್ಹವಾಗಿದ್ದು ಅರಣ್ಯಾಧಿಕಾರಿಗಳು ಕಾನೂನು ಬಾಹೀರ ಕೃತ್ಯ ನಡೆಸಿದರೂ ಕೂಡಾ ಜನಪ್ರತಿನಿಧಿಗಳು ನಿಯಂತ್ರಿಸಲು ವಿಫಲರಾಗಿದ್ದಾರೆ ಎಂದು ಅವರು ದೂರಿದರು.

ಜೀವನೋಪಾಯಕ್ಕಾಗಿ ದಿವಂಗತ ಶನಿಯಾರ ನಾಯ್ಕನ ಪತ್ನಿ ದುರ್ಗಮ್ಮ ಅನಾಧಿಕಾಲದಿಂದ ಇದ್ದ ಕಟ್ಟಡವನ್ನು ದ್ವಂಸಗೊಳಿಸುವ ಸಂದರ್ಭದಲ್ಲಿ ಯಾವುದೇ ಕಾನೂನು ವಿಧಿ ವಿಧಾನ ಅನುಸರಿಸದೆ, ಕಾನೂನಿನ ನೀತಿ ನಿಯಮವನ್ನು ಪಾಲಿಸದೆ, ಅರಣ್ಯ ಸಿಬ್ಬಂದಿಗಳ ವರ್ತನೆ ಕುರಿತು ಜನಪ್ರತಿನಿಧಿಗಳು ಮೌನವಾಗಿರುವುದು ವಿಷಾದಕರ. ಅರಣ್ಯವಾಸಿಗಳ ಸಹನೆ ಪರೀಕ್ಷಿಸುವ ಪ್ರವೃತ್ತಿಗೆ ಅರಣ್ಯ ಇಲಾಖೆಯು ಮುಂದಾಗಬಾರದು. ಅರಣ್ಯ ಸಿಬ್ಬಂದಿಗಳ ಧಮನಕಾರಿ ಕೃತ್ಯಕ್ಕೆ ಹೋರಾಟದಿಂದಲೇ ಉತ್ತರಿಸಬೇಕಾದೀತು ಎಂದು ಅವರು ಅರಣ್ಯ ಇಲಾಖೆಗೆ ಎಚ್ಚರಿಕೆ ನೀಡಿದರು.

ಈ ಕುರಿತು ಸ್ಥಳದಿಂದಲೇ ಡಿ.ಎಫ್.ಓ. ಗಣಪತಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಅವರು ಮುಂದಿನ 48 ಗಂಟೆಯೊಳಗೆ ಬಡ ಮಹಿಳೆಗೆ ನ್ಯಾಯ ದೊರಕದೆ ಇದ್ದಲ್ಲಿ ಬೃಹತ್ ಹೋರಾಟದ ಮೂಲಕ ಪ್ರತಿಭಟನೆ ಅನಿವಾರ್ಯ ಎಂದೂ ಹೇಳಿದರು.

ಇದನ್ನೂ ಓದಿ:ಜೆಡಿಎಸ್ ಬಿಟ್ಟು ಬಿಜೆಪಿಗೆ ಸೇರುತ್ತೇನೆ : ಎಂಎಲ್ ಸಿ ಸಂದೇಶ್ ನಾಗರಾಜ್

ಅರಣ್ಯ ಸಿಬ್ಬಂದಿಗಳಿಂದ ದೌರ್ಜನ್ಯಕ್ಕೆ ಒಳಗಾಗಿ, ಆಘಾತಕ್ಕೆ ಒಳಗಾಗಿರುವ ದುರ್ಗಮ್ಮ ಶನಿಯಾರ ನಾಯ್ಕ ಅವರನ್ನು ಹೋರಾಟಗಾರರ ವೇದಿಕೆಯು ಸಂತೈಸಿ ಬೆಂಬಲವನ್ನು ಸೂಚಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕ ದೇವರಾಜ ಗೋಡ, ಕಯೀಂ ಸಾಬ, ಪಾಂಡುರಂಗ ನಾಯ್ಕ ಬೆಳಕೆ, ರಿಜವಾನ ಸಾಬ, ಹತ್ಸಾಪ ದಾಮುದ್ದೀನ್ ಮುಂತಾದವರು ಉಪಸ್ಥಿತರಿದ್ದರು.

ಜಿಲ್ಲೆಯಲ್ಲಿಯೇ ಅತೀ ಹೆಚ್ಚು ಅರಣ್ಯ ಅತಿಕ್ರಮಣದಾರರು ಹಿಂಸೆಗೆ ಮತ್ತು ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸಂಖ್ಯೆಯಲ್ಲಿ ಭಟ್ಕಳ ಪ್ರಥಮ ಸ್ಥಾನದಲ್ಲಿರುವುದು. ಇದ್ದವರಿಗೆ ಒಂದು ಇಲ್ಲದಿದ್ದವರಿಗೆ ಒಂದು ನೀತಿ ಅನುಸರಿಸುವ ಅರಣ್ಯ ಇಲಾಖೆಯ ನೀತಿ ಖೇದಕರ. ಅಲ್ಲದೇ, ಒಕ್ಕಲೆಬ್ಬಿಸುವ ಸಂದರ್ಭದಲ್ಲಿ ಅರಣ್ಯ ಸಿಬ್ಬಂದಿಗಳ ವರ್ತನೆ ಅಮಾನವೀಯತೆಯಿಂದ ಕೂಡಿರುವುದು ದುಃಖಕರ ಸಂಗತಿಯಾಗಿದೆ.

ರವೀಂದ್ರ ನಾಯ್ಕ.

ಟಾಪ್ ನ್ಯೂಸ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.