ಹನುಮಾನ್ ಸಂಸ್ಥೆಯ ಹರಿಕಾರ ಪಿ. ರಬೀಂದ್ರ ನಾಯಕ್ ಇನ್ನಿಲ್ಲ
Team Udayavani, Oct 2, 2021, 11:28 AM IST
ಉಡುಪಿ: ಸಾರಿಗೆ ಉದ್ಯಮಿ ಹಾಗೂ ಸಮಾಜ ಸೇವಕರಾಗಿದ್ದ ಪಾಂಗಾಳ ರಬೀಂದ್ರ ನಾಯಕ್ (99) ಇಂದು ಮುಂಜಾನೆ ನಿಧನರಾಗಿದ್ದಾರೆ.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಶನಿವಾರ(ಅ.2) ರಂದು ಇಹಲೋಕ ತ್ಯಜಿಸಿದ್ದಾರೆ.
ಇದನ್ನೂ ಓದಿ: ರೋಹಿತ್ ಹುಡುಗರ ಪ್ಲೇ ಆಫ್ ಕನಸಿಗೆ ಅಡ್ಡಿಯಾಗುವುದೇ ಡೆಲ್ಲಿ ಕ್ಯಾಪಿಟಲ್ಸ್
ಸಾರಿಗೆ ಉದ್ಯಮಿಯಾಗಿ ಮೊದಲು ಗುರುತಿಸಿಕೊಂಡಿದ್ದ ಅವರು, ಕರಾವಳಿ ಭಾಗದಲ್ಲಿ ಗಜಾನನ ಹಾಗೂ ಹನುಮಾನ್ ಟ್ರಾನ್ಸ್ ಪೋರ್ಟ್ ಸಂಸ್ಥೆಯನ್ನು ಪ್ರಾರಂಭಿಸಿ ಸಾರಿಗೆ ಉದ್ಯಮಕ್ಕೆ ಕಾಲಿಟ್ಟವರು. ಹತ್ತು ಹಲವು ಸಾಮಾಜಿಕ ಸೇವಾ ಕಾರ್ಯದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದ ಅವರು, ಉಡುಪಿ ಜಿಲ್ಲಾಸ್ಪತ್ರೆ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ, ಜಿಲ್ಲಾಸ್ಪತ್ರೆಯ ಅಭಿವೃದ್ಧಿಗೆ ದೇಣಿಗೆಯನ್ನು ನೀಡಿದ್ದರು. ಉಡುಪಿಯ ಹಿರಿಯ ನಾಗರಿಕರ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.