‘ಕಾಗೆ ಮೊಟ್ಟೆ’ ಚಿತ್ರವಿಮರ್ಶೆ: ಕಾಗೆ ಗೂಡಲ್ಲೊಂದು ಕೃಷ್ಣನ್‌ ಲವ್‌ಸ್ಟೋರಿ


Team Udayavani, Oct 2, 2021, 12:37 PM IST

‘ಕಾಗೆ ಮೊಟ್ಟೆ’ ಚಿತ್ರವಿಮರ್ಶೆ: ಕಾಗೆ ಗೂಡಲ್ಲೊಂದು ಕೃಷ್ಣನ್‌ ಲವ್‌ಸ್ಟೋರಿ

ಚಿತ್ರಮಂದಿರಗಳಲ್ಲಿ ಪೂರ್ಣ ಪ್ರವೇಶಾತಿ ಸಿಕ್ಕ ಮೊದಲ ದಿನ ಬಿಡುಗಡೆಯಾಗಿರುವ ಚಿತ್ರ “ಕಾಗೆ ಮೊಟ್ಟೆ’. ತುಂಬಾ ದಿನಗಳಿಂದ ಚಿತ್ರಮಂದಿರಗಳಿಂದ ದೂರ ಉಳಿದಿರುವ ಪ್ರೇಕ್ಷಕರನ್ನು ಮತ್ತೆ ಕರೆತರಬೇಕಾದರೆ ಸಿನಿಮಾಗಳಲ್ಲಿ ಒಂದಾ ಮಾಸ್‌ ಅಂಶ ಇರಬೇಕು ಅಥವಾ ಔಟ್‌ ಅಂಡ್‌ ಔಟ್‌ಲವ್‌ಸ್ಟೋರಿ ಇರಬೇಕು.

ಹಾಗೆ ನೋಡಿದರೆ “ಕಾಗೆಮೊಟ್ಟೆ’ ಅವೆರಡನ್ನೂ ಜೊತೆ ಜೊತೆಯಾಗಿ ನೀಡುವ ಚಿತ್ರ ಎಂದರೆ ತಪ್ಪಾಗಲಾರದು. ಅದರಲ್ಲೂ ಮಾಸ್‌ ಎಲಿಮೆಂಟ್ಸ್‌ ಸ್ವಲ್ಪ ಹೆಚ್ಚೇ ಇರುವ ಈ ಚಿತ್ರ ಮೊದಲ ದಿನವೇ ಸಿನಿಮಾ ಪ್ರೇಮಿಗಳನ್ನು ಚಿತ್ರಮಂದಿರದೊಳಗೆ ಎರಡು ಸ್ಟೆಪ್‌ ಹಾಕುವಂತೆ ಮಾಡಿದೆ.

“ಕಾಗೆ ಮೊಟ್ಟೆ’ ಒಂದು ರೌಡಿಸಂ ಹಿನ್ನೆಲೆಯ ಸಿನಿಮಾ. ಬೆಂಗಳೂರಿನ ಅಂಡರ್‌ವರ್ಲ್ಡ್ಗೆ ತಾವೇ ಅಧಿಪತಿಯಾಗಬೇಕೆಂಬ ಆಸೆಯಿಂದ ಹಳ್ಳಿಯಿಂದ ಬೆಂಗಳೂರಿಗೆ ಬರುವ ಯುವಕರ ಕಥೆಯನ್ನು “ಕಾಗೆಮೊಟ್ಟೆ’ ಒಳಗೊಂಡಿದೆ. ಬಿಸಿ ರಕ್ತದ ಯುವಕರ ಹುಮ್ಮಸ್ಸು, ಕರಾಬ್‌ ದುನಿಯಾದಲ್ಲಿ ಮೆರೆದಾಡಬೇಕೆಂಬ ಕನಸು, ಜೊತೆಗೊಂದು ಲವ್‌ಸ್ಟೋರಿ… ಈ ಅಂಶಗಳೊಂದಿಗೆ ಸಾಗುವ ಸಿನಿಮಾ, ಮನರಂಜನೆಗೆ ಮೋಸ ಮಾಡುವುದಿಲ್ಲ.

ಒಂದು ಅಂಡರ್‌ವರ್ಲ್ಡ್ ಹಿನ್ನೆಲೆಯ ಸಿನಿಮಾವನ್ನು ಹೇಗೆ ಕಟ್ಟಿಕೊಡಬೇಕೆಂಬ ಕಲ್ಪನೆ ನಿರ್ದೇಶಕ ಚಂದ್ರಹಾಸ್‌ ಅವರಿಗೆ ಚೆನ್ನಾಗಿಯೇ ಇದೆ ಎಂಬುದು ಚಿತ್ರ ನೋಡಿದಾಗ ಗೊತ್ತಾಗುತ್ತದೆ. ಮುಖ್ಯವಾಗಿ ಇಂತಹ ಕಥೆಗೆ ಲೊಕೇಶನ್‌ ಕೂಡಾ ಪ್ರಮುಖ ಪಾತ್ರ ವಹಿಸುತ್ತದೆ. ಆ ನಿಟ್ಟಿನಲ್ಲಿ ನಿರ್ದೇಶಕರು ಚಿತ್ರಕ್ಕೆ ತುಂಬಾ ಚೆನ್ನಾಗಿ ಹೊಂದಿಕೊಳ್ಳುವ ಪರಿಸರದೊಂದಿಗೆ ಕಟ್ಟಿಕೊಟ್ಟಿದ್ದಾರೆ.

ಇದನ್ನೂ ಓದಿ:ಜಗದೀಶ್‌ ಮಾತನಾಡಿದ್ದು ತಪ್ಪಾಯ್ತು…ಕರ್ನಾಟಕದಲ್ಲಿ ನಾನು ಭಿಕ್ಷುಕಿನೇ: ನಟಿ ವಿಜಯಲಕ್ಷ್ಮೀ

ರೌಡಿಸಂ ಸಿನಿಮಾ ಎಂದಮೇಲೆ ಸಹಜವಾಗಿ ಸ್ನೇಹ, ಜಿದ್ದು, ಸ್ಕೆಚ್‌, ಹೊಡೆದಾಟ, ಬಡಿದಾಟ ಸಹಜ. ಆದರೆ, ಈ ಅಂಶಗಳನ್ನೇ “ಕಾಗೆ ಮೊಟ್ಟೆ’ಯಲ್ಲಿ ಭಿನ್ನ ರೀತಿಯಲ್ಲಿ ಹೇಳಲು ಪ್ರಯತ್ನಿಸಲಾಗಿದೆ. ಚಿತ್ರದಲ್ಲಿ ತಣ್ಣನೆ ಕಾಡುವ ಪ್ರೀತಿಯ ಜೊತೆಗೆ ರೌಡಿಸಂ ಕ್ರೇಜ್‌ನ ಯುವಕರಿಗೆ ಒಂದು ಸಂದೇಶ ಕೂಡಾ ಇದೆ. ವಿ.ನಾಗೇಂದ್ರ ಪ್ರಸಾದ್‌ ಸಂಭಾಷಣೆ ಕಥೆಗೆ ಪೂರಕವಾಗಿದೆ.

ನಟ ಗುರುರಾಜ್‌ ಪಕ್ಕಾ ರಗಡ್‌ ಲುಕ್‌ನಲ್ಲಿ ಕಾಣಿಸಿಕೊಂಡು ಪಾತ್ರಕ್ಕೆ ನ್ಯಾಯ ಒದಗಿಸಿದ್ದಾರೆ. ಉಳಿದಂತೆ ಶರತ್‌ ಲೋಹಿತಾಶ್ವ, ಸತ್ಯಜಿತ್‌ ಹಾಗೂ ಇತರರು ಪಾತ್ರಕ್ಕೆ ಹೊಂದಿಕೊಂಡಿದ್ದಾರೆ. ಚಿತ್ರದ ಹಾಡೊಂದು ಗುನುಗುವಂತಿದೆ. ಪಿ.ಎಲ್‌.ರವಿ ಛಾಯಾಗ್ರಹಣದಲ್ಲಿ “ಕಾಗೆ ಮೊಟ್ಟೆ’ ಸುಂದರ. ಅವರ ಛಾಯಾಗ್ರಹಣದ ಶ್ರಮ ಅಲ್ಲಲ್ಲಿ ಎದ್ದು ಕಾಣುತ್ತದೆ.

 ರವಿ ರೈ

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.