ಶಾರುಖ್ ಖಾನ್ ಪುತ್ರನ ಮಾದಕ ನಂಟು: ಎನ್ ಸಿಬಿ ಬಲೆಗೆ ಬಿದ್ದ ಆರ್ಯನ್ ಖಾನ್
Team Udayavani, Oct 3, 2021, 9:06 AM IST
ಮುಂಬೈ: ಮಹಾರಾಷ್ಟ್ರ ರಾಜಧಾನಿ ಮುಂಬೈನಿಂದ ದೂರದ ಸಮುದ್ರ ಮಧ್ಯದಲ್ಲಿ ವಿಲಾಸಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ನಡೆದಿದೆ. ಈ ಬಗ್ಗೆ ಸುಳಿವು ಸಿಕ್ಕ ರಾಷ್ಟ್ರೀಯ ಮಾದಕ ದ್ರವ್ಯ ನಿಯಂತ್ರಣ ಮಂಡಳಿ (ಎನ್ಸಿಬಿ) ಅಧಿಕಾರಿಗಳು ಹತ್ತು ಮಂದಿಯನ್ನು ಶನಿವಾರ ರಾತ್ರಿ ಬಂಧಿಸಿದ್ದಾರೆ.
ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಪುತ್ರ ಕೂಡಾ ಈ ರೇವ್ ಪಾರ್ಟಿಯಲ್ಲಿದ್ದ ಎನ್ನಲಾಗಿದೆ. ಆರ್ಯನ್ ಖಾನ್ ಸೇರಿ 10 ಮಂದಿಯನ್ನು ಎನ್ ಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬಂಧಿತರೆಲ್ಲರೂ ಹೈ ಪ್ರೊಫೈಲ್ ವ್ಯಕ್ತಿಗಳು ಎನ್ನಲಾಗಿದೆ.
ಎರಡು ವಾರಗಳ ಹಿಂದಷ್ಟೇ ಉದ್ಘಾಟನೆಯಾಗಿದ್ದ ಕಾರ್ಡೆಲಿಯಾ ಕ್ರೂಸ್ ಲೈನರ್ನ “ದಿ ಎಂಪ್ರಸ್’ ಹಡಗಿನೊಳಗೆ ಡ್ರಗ್ಸ್ ಪಾರ್ಟಿ ನಡೆಸಲಾಗುತ್ತಿತ್ತು. ಈ ಹಡಗು ಮುಂಬೈನಿಂದ ಗೋವಾಕ್ಕೆ ತೆರಳುತ್ತಿತ್ತು ಎನ್ನಲಾಗಿದೆ. ಸಮುದ್ರ ತೀರ ಬಿಟ್ಟು ಸ್ವಲ್ಪ ಸಮಯದಲ್ಲೇ ಪಾರ್ಟಿ ಆರಂಭಿಸಲಾಗಿದೆ.
ಇದನ್ನೂ ಓದಿ:ಕ್ರೂಸ್ ಶಿಪ್ ನಲ್ಲಿ ರೇವ್ ಪಾರ್ಟಿ: ಬಾಲಿವುಡ್ ಸೂಪರ್ ಸ್ಟಾರ್ ಪುತ್ರ ಸೇರಿ 10 ಜನರ ಬಂಧನ
ಎನ್ಸಿಬಿಯ ವಲಯ ನಿರ್ದೇಶಕರಾದ ಸಮೀರ್ ವನ್ಪೆಡೆ ನೇತೃತ್ವದ ತಂಡ ಹಡಗನ್ನೇರಿ ದಾಳಿ ನಡೆಸಿದೆ. ಪಾರ್ಟಿಯ ಸ್ಥಳದಿಂದ ಮಾದಕ ವಸ್ತುಗಳಾದ ಕೊಕೇನ್, ಹಶೀಶ್, ಎಂಡಿಎಂಎ ಅನ್ನು ವಶಪಡಿಸಿಕೊಳ್ಳಲಾಗಿದೆ. ಅವರನ್ನೆಲ್ಲ ಶೀಘ್ರದಲ್ಲಿಯೇ ಮುಂಬೈಗೆ ಕರೆ ತರಲಾಗುತ್ತದೆ ಎಂದು ಎನ್ಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.
ಮುಂಬೈನಲ್ಲಿ ಕಳೆದ ವರ್ಷ ಬೆಳಕಿಗೆ ಬಂದಿದ್ದ ಬಾಲಿವುಡ್ ನಟ ಸುಶಾಂತ್ ರಜಪೂತ್ ಸಾವಿನಲ್ಲೂ ಡ್ರಗ್ಸ್ ಜಾಲ ಪ್ರಮುಖ ಪಾತ್ರ ವಹಿಸಿದ್ದ ಬಗ್ಗೆ ಶಂಕೆಗಳು ಎದ್ದಿದ್ದವು. ಆ ಸಂದರ್ಭ ದಲ್ಲಿಯೂ ಕೂಡ ಎನ್ಸಿಬಿ ಅಧಿಕಾರಿ ಗಳು ದಾಳಿ ನಡೆಸಿ ಹಲವರನ್ನು ಬಂಧಿಸಿದ್ದರು. ಹೀಗಾಗಿ, ಮತ್ತೂಮ್ಮೆ ಬಾಲಿವುಡ್ ನಲ್ಲಿ ಡ್ರಗ್ಸ್ ಜಾಲ ಬಲವಾಗಿರುವ ಬಗ್ಗೆ ಶಂಕೆಗಳು ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ